25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆ: ಗುರುವಾಯನಕೆರೆ ಎರ್ಡೂರು ಬಳಿ ‘ಶ್ರೀರಾಮನಗರ’ ನಾಮಫಲಕ ಅನಾವರಣ

ಗುರುವಾಯನಕೆರೆ: ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆಯ ದಿನವಾದ ಜ.22ರಂದು ಕುವೆಟ್ಟು ಗ್ರಾಮದ ಗುರುವಾಯನಕೆರೆ ಎರ್ಡೂರು ಬಳಿಯ ಹಲವು ಮನೆಗಳಿರುವ ಪ್ರದೇಶಕ್ಕೆ “ಶ್ರೀರಾಮನಗರ” ಎಂಬ ನೂತನ ಹೆಸರನ್ನಿಟ್ಟು ಈ ಪುಣ್ಯದಿನವನ್ನು ಜನಮಾನಸದಲ್ಲಿ ಶಾಶ್ವತವಾಗಿ ನೆನಪಿಲ್ಲಿ ಉಳಿಯವಂತೆ ಮಾಡಲಾಯಿತು.


ಕುವೆಟ್ಟು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಭಾರತಿ ಎಸ್. ಶೆಟ್ಟಿಯವರು ‘ಶ್ರೀರಾಮನಗರ’ ನೂತನ ಹೆಸರಿನ ನಾಮಫಲಕವನ್ನು ಅನಾವರಣಗೊಳಿಸಿ, ಶ್ರೀರಾಮ ಪ್ರಾಣ ಪ್ರತಿಷ್ಠೆಯ ಈ ದಿನದಂದು ಈ ಪ್ರದೇಶಕ್ಕೆ ಶ್ರೀರಾಮ ನಗರ ಎಂಬ ಹೆಸರನ್ನು ಇಡುವ ಮೂಲಕ ರಾಮನ ಹೆಸರನ್ನು ನಿತ್ಯ ನೆನೆಯುವಂತೆ ಮಾಡಲಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಈ ಸಂದರ್ಭ ಗ್ರಾ.ಪಂ ಉಪಾಧ್ಯಕ್ಷ ಗಣೇಶ್ ಕೆ. ಸದಸ್ಯರಾದ ಶ್ರೀಮತಿ ರಚನಾ ಕೆ, ಮಂಜುನಾಥ್ ಕುಂಬ್ಳೆ, ಮಾಜಿ ಅಧ್ಯಕ್ಷೆ ಆಶಾಲತಾ, ಮಾಜಿ ಸದಸ್ಯೆ ಶ್ರೀಮತಿ ದೀಪಾ ಶೆಣೈ, ಸ್ಥಳೀಯ ನಿವಾಸಿಗಳಾದ ಕಾಶೀನಾಥ್ ಭಟ್, ಪ್ರಕಾಶ್ ಶೆಣೈ, ಪತ್ರಕರ್ತ ಬಿ.ಎಸ್.ಕುಲಾಲ್, ಉಮೇಶ್ ಹೆಬ್ಬಾರ್, ತಿಲಕ್‌ರಾಜ್, ಸಂತೋಷ್ ಕುಲಾಲ್, ಉಮೇಶ್ ಕುಲಾಲ್, ಹರೀಶ್ ನಾಯ್ಕ, ಶಿಕ್ಷಕ ಮಹೇಂದರ, ಶ್ರೀಮತಿ ಸುಜಯ, ಶ್ರೀಮತಿ ರತ್ನ, ದಿಶಾ ಅಜೇಯ್, ಅನುಷಾ ವಿ.ರೈ, ಗೀತಾ ಭಟ್ ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಕಂಠಿ ಉತ್ಸವಕ್ಕೆ ಚಾಲನೆ ಹಾಗೂ ಕೃಷಿ ಸಾಧಕರಿಗೆ ” ಶ್ರೇಷ್ಠ ಕೃಷಿ ಸಾಧಕ ” ಪ್ರಶಸ್ತಿ

Suddi Udaya

ದ.ಕ. ಜಿಲ್ಲೆಯಲ್ಲಿ ಬಿಎಸ್ಸೆನ್ನೆಲ್ 4ಜಿ ಸೇವೆ

Suddi Udaya

ಜು.16-ಆ.16: ಲಾಯಿಲ ಪ್ರಸನ್ನ ಆಯುರ್ವೇದ ಆಸ್ಪತ್ರೆಯಲ್ಲಿ ಆಟಿ ಚಿಕಿತ್ಸಾ ಪ್ಯಾಕೇಜ್

Suddi Udaya

ಬೆಳ್ತಂಗಡಿ : ಇನ್ಸ್ಪೆಕ್ಟರ್ ಗಂಗ್ಗಿರೆಡ್ಡಿಯನ್ನು ಸುಳ್ಳು ಪ್ರಕರಣದಲ್ಲಿ ಟ್ರ್ಯಾಪ್ ಮಾಡಿಸಿದ್ದ ದೂರುದಾರ ಹಾಗೂ ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನಲ್ಲಿ ಪ್ರೇರಣಾ ಕಾರ್ಯಕ್ರಮ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಭಜನಾ ಮಂಗಲೋತ್ಸವ ಹಾಗೂ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!