September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆ: ಗುರುವಾಯನಕೆರೆ ಎರ್ಡೂರು ಬಳಿ ‘ಶ್ರೀರಾಮನಗರ’ ನಾಮಫಲಕ ಅನಾವರಣ

ಗುರುವಾಯನಕೆರೆ: ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆಯ ದಿನವಾದ ಜ.22ರಂದು ಕುವೆಟ್ಟು ಗ್ರಾಮದ ಗುರುವಾಯನಕೆರೆ ಎರ್ಡೂರು ಬಳಿಯ ಹಲವು ಮನೆಗಳಿರುವ ಪ್ರದೇಶಕ್ಕೆ “ಶ್ರೀರಾಮನಗರ” ಎಂಬ ನೂತನ ಹೆಸರನ್ನಿಟ್ಟು ಈ ಪುಣ್ಯದಿನವನ್ನು ಜನಮಾನಸದಲ್ಲಿ ಶಾಶ್ವತವಾಗಿ ನೆನಪಿಲ್ಲಿ ಉಳಿಯವಂತೆ ಮಾಡಲಾಯಿತು.


ಕುವೆಟ್ಟು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಭಾರತಿ ಎಸ್. ಶೆಟ್ಟಿಯವರು ‘ಶ್ರೀರಾಮನಗರ’ ನೂತನ ಹೆಸರಿನ ನಾಮಫಲಕವನ್ನು ಅನಾವರಣಗೊಳಿಸಿ, ಶ್ರೀರಾಮ ಪ್ರಾಣ ಪ್ರತಿಷ್ಠೆಯ ಈ ದಿನದಂದು ಈ ಪ್ರದೇಶಕ್ಕೆ ಶ್ರೀರಾಮ ನಗರ ಎಂಬ ಹೆಸರನ್ನು ಇಡುವ ಮೂಲಕ ರಾಮನ ಹೆಸರನ್ನು ನಿತ್ಯ ನೆನೆಯುವಂತೆ ಮಾಡಲಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಈ ಸಂದರ್ಭ ಗ್ರಾ.ಪಂ ಉಪಾಧ್ಯಕ್ಷ ಗಣೇಶ್ ಕೆ. ಸದಸ್ಯರಾದ ಶ್ರೀಮತಿ ರಚನಾ ಕೆ, ಮಂಜುನಾಥ್ ಕುಂಬ್ಳೆ, ಮಾಜಿ ಅಧ್ಯಕ್ಷೆ ಆಶಾಲತಾ, ಮಾಜಿ ಸದಸ್ಯೆ ಶ್ರೀಮತಿ ದೀಪಾ ಶೆಣೈ, ಸ್ಥಳೀಯ ನಿವಾಸಿಗಳಾದ ಕಾಶೀನಾಥ್ ಭಟ್, ಪ್ರಕಾಶ್ ಶೆಣೈ, ಪತ್ರಕರ್ತ ಬಿ.ಎಸ್.ಕುಲಾಲ್, ಉಮೇಶ್ ಹೆಬ್ಬಾರ್, ತಿಲಕ್‌ರಾಜ್, ಸಂತೋಷ್ ಕುಲಾಲ್, ಉಮೇಶ್ ಕುಲಾಲ್, ಹರೀಶ್ ನಾಯ್ಕ, ಶಿಕ್ಷಕ ಮಹೇಂದರ, ಶ್ರೀಮತಿ ಸುಜಯ, ಶ್ರೀಮತಿ ರತ್ನ, ದಿಶಾ ಅಜೇಯ್, ಅನುಷಾ ವಿ.ರೈ, ಗೀತಾ ಭಟ್ ಮೊದಲಾದವರು ಉಪಸ್ಥಿತರಿದ್ದರು.

Related posts

ಎಸ್ಸೆಸ್ಸೆಲ್ಸಿ ಫಲಿತಾಂಶ: ಸೇಕ್ರೆಡ್‌ ಹಾರ್ಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿಯಲ್ಲಿ ಶ್ರೀ ಪಾರಿಜಾತ ರಿಯಲ್ ಎಸ್ಟೇಟ್ ಶುಭಾರಂಭ

Suddi Udaya

ಪಾಂಗಳ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾಗಿ ರಾಮಚಂದ್ರ ಭಟ್, ಕಾರ್ಯದರ್ಶಿಯಾಗಿ ಮುಖೇಶ್ ಆಯ್ಕೆ

Suddi Udaya

ಉಜಿರೆ: ಎಸ್.ಡಿ.ಎಂ ಮಹಿಳಾ ಐಟಿಐ ಸಂಸ್ಥೆಯಲ್ಲಿ ಮೆಷಿನ್ ಎಂಬ್ರಾಯ್ಡರಿ ತರಬೇತಿ ಕಾರ್ಯಗಾರ

Suddi Udaya

ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ (ಐಎನ್‌ಎಸ್‌ಇಎಫ್) 2024-25″ – ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಅಧೀಶ್ ಬಿ.ಸಿ ಮತ್ತು ಆಲಾಪ್.ಎಂ ಗೆ ಚಿನ್ನದ ಪದಕ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ.

Suddi Udaya

ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ನ ನೂತನ ಅಧ್ಯಕ್ಷರಾಗಿ ಯುವ ಸಂಘಟಕ ರಾಕೇಶ್ ಹೆಗ್ಡೆ ಆಯ್ಕೆ

Suddi Udaya
error: Content is protected !!