25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆ: ಗುರುವಾಯನಕೆರೆ ಎರ್ಡೂರು ಬಳಿ ‘ಶ್ರೀರಾಮನಗರ’ ನಾಮಫಲಕ ಅನಾವರಣ

ಗುರುವಾಯನಕೆರೆ: ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆಯ ದಿನವಾದ ಜ.22ರಂದು ಕುವೆಟ್ಟು ಗ್ರಾಮದ ಗುರುವಾಯನಕೆರೆ ಎರ್ಡೂರು ಬಳಿಯ ಹಲವು ಮನೆಗಳಿರುವ ಪ್ರದೇಶಕ್ಕೆ “ಶ್ರೀರಾಮನಗರ” ಎಂಬ ನೂತನ ಹೆಸರನ್ನಿಟ್ಟು ಈ ಪುಣ್ಯದಿನವನ್ನು ಜನಮಾನಸದಲ್ಲಿ ಶಾಶ್ವತವಾಗಿ ನೆನಪಿಲ್ಲಿ ಉಳಿಯವಂತೆ ಮಾಡಲಾಯಿತು.


ಕುವೆಟ್ಟು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಭಾರತಿ ಎಸ್. ಶೆಟ್ಟಿಯವರು ‘ಶ್ರೀರಾಮನಗರ’ ನೂತನ ಹೆಸರಿನ ನಾಮಫಲಕವನ್ನು ಅನಾವರಣಗೊಳಿಸಿ, ಶ್ರೀರಾಮ ಪ್ರಾಣ ಪ್ರತಿಷ್ಠೆಯ ಈ ದಿನದಂದು ಈ ಪ್ರದೇಶಕ್ಕೆ ಶ್ರೀರಾಮ ನಗರ ಎಂಬ ಹೆಸರನ್ನು ಇಡುವ ಮೂಲಕ ರಾಮನ ಹೆಸರನ್ನು ನಿತ್ಯ ನೆನೆಯುವಂತೆ ಮಾಡಲಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಈ ಸಂದರ್ಭ ಗ್ರಾ.ಪಂ ಉಪಾಧ್ಯಕ್ಷ ಗಣೇಶ್ ಕೆ. ಸದಸ್ಯರಾದ ಶ್ರೀಮತಿ ರಚನಾ ಕೆ, ಮಂಜುನಾಥ್ ಕುಂಬ್ಳೆ, ಮಾಜಿ ಅಧ್ಯಕ್ಷೆ ಆಶಾಲತಾ, ಮಾಜಿ ಸದಸ್ಯೆ ಶ್ರೀಮತಿ ದೀಪಾ ಶೆಣೈ, ಸ್ಥಳೀಯ ನಿವಾಸಿಗಳಾದ ಕಾಶೀನಾಥ್ ಭಟ್, ಪ್ರಕಾಶ್ ಶೆಣೈ, ಪತ್ರಕರ್ತ ಬಿ.ಎಸ್.ಕುಲಾಲ್, ಉಮೇಶ್ ಹೆಬ್ಬಾರ್, ತಿಲಕ್‌ರಾಜ್, ಸಂತೋಷ್ ಕುಲಾಲ್, ಉಮೇಶ್ ಕುಲಾಲ್, ಹರೀಶ್ ನಾಯ್ಕ, ಶಿಕ್ಷಕ ಮಹೇಂದರ, ಶ್ರೀಮತಿ ಸುಜಯ, ಶ್ರೀಮತಿ ರತ್ನ, ದಿಶಾ ಅಜೇಯ್, ಅನುಷಾ ವಿ.ರೈ, ಗೀತಾ ಭಟ್ ಮೊದಲಾದವರು ಉಪಸ್ಥಿತರಿದ್ದರು.

Related posts

ಚಂದ್ರಯಾನ -3 ಯಶಸ್ವಿಯಾಗಲೆಂದು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಭೆ

Suddi Udaya

ನಡ ಗ್ರಾಮದಲ್ಲಿ ಸನ್‌ರಾಕ್ ಬಲಿಪ ರೆಸಾರ್ಟ್ ಶುಭಾರಂಭ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಹಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ಜಾನಪದ ಗೀತೆ ಸ್ಪರ್ಧೆ : ಧರ್ಮಸ್ಥಳದ ಸಾನ್ವಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!