23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆ: ಗುರುವಾಯನಕೆರೆ ಎರ್ಡೂರು ಬಳಿ ‘ಶ್ರೀರಾಮನಗರ’ ನಾಮಫಲಕ ಅನಾವರಣ

ಗುರುವಾಯನಕೆರೆ: ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆಯ ದಿನವಾದ ಜ.22ರಂದು ಕುವೆಟ್ಟು ಗ್ರಾಮದ ಗುರುವಾಯನಕೆರೆ ಎರ್ಡೂರು ಬಳಿಯ ಹಲವು ಮನೆಗಳಿರುವ ಪ್ರದೇಶಕ್ಕೆ “ಶ್ರೀರಾಮನಗರ” ಎಂಬ ನೂತನ ಹೆಸರನ್ನಿಟ್ಟು ಈ ಪುಣ್ಯದಿನವನ್ನು ಜನಮಾನಸದಲ್ಲಿ ಶಾಶ್ವತವಾಗಿ ನೆನಪಿಲ್ಲಿ ಉಳಿಯವಂತೆ ಮಾಡಲಾಯಿತು.


ಕುವೆಟ್ಟು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಭಾರತಿ ಎಸ್. ಶೆಟ್ಟಿಯವರು ‘ಶ್ರೀರಾಮನಗರ’ ನೂತನ ಹೆಸರಿನ ನಾಮಫಲಕವನ್ನು ಅನಾವರಣಗೊಳಿಸಿ, ಶ್ರೀರಾಮ ಪ್ರಾಣ ಪ್ರತಿಷ್ಠೆಯ ಈ ದಿನದಂದು ಈ ಪ್ರದೇಶಕ್ಕೆ ಶ್ರೀರಾಮ ನಗರ ಎಂಬ ಹೆಸರನ್ನು ಇಡುವ ಮೂಲಕ ರಾಮನ ಹೆಸರನ್ನು ನಿತ್ಯ ನೆನೆಯುವಂತೆ ಮಾಡಲಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಈ ಸಂದರ್ಭ ಗ್ರಾ.ಪಂ ಉಪಾಧ್ಯಕ್ಷ ಗಣೇಶ್ ಕೆ. ಸದಸ್ಯರಾದ ಶ್ರೀಮತಿ ರಚನಾ ಕೆ, ಮಂಜುನಾಥ್ ಕುಂಬ್ಳೆ, ಮಾಜಿ ಅಧ್ಯಕ್ಷೆ ಆಶಾಲತಾ, ಮಾಜಿ ಸದಸ್ಯೆ ಶ್ರೀಮತಿ ದೀಪಾ ಶೆಣೈ, ಸ್ಥಳೀಯ ನಿವಾಸಿಗಳಾದ ಕಾಶೀನಾಥ್ ಭಟ್, ಪ್ರಕಾಶ್ ಶೆಣೈ, ಪತ್ರಕರ್ತ ಬಿ.ಎಸ್.ಕುಲಾಲ್, ಉಮೇಶ್ ಹೆಬ್ಬಾರ್, ತಿಲಕ್‌ರಾಜ್, ಸಂತೋಷ್ ಕುಲಾಲ್, ಉಮೇಶ್ ಕುಲಾಲ್, ಹರೀಶ್ ನಾಯ್ಕ, ಶಿಕ್ಷಕ ಮಹೇಂದರ, ಶ್ರೀಮತಿ ಸುಜಯ, ಶ್ರೀಮತಿ ರತ್ನ, ದಿಶಾ ಅಜೇಯ್, ಅನುಷಾ ವಿ.ರೈ, ಗೀತಾ ಭಟ್ ಮೊದಲಾದವರು ಉಪಸ್ಥಿತರಿದ್ದರು.

Related posts

ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಹಾಗೂ ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಐವನ್ ಡಿ’ಸೋಜರವರ ಮೇಲೆ ಕೇಸು ದಾಖಲಿಸಲು ಒತ್ತಾಯಿಸಿ ರಸ್ತೆ ತಡೆ ಪ್ರತಿಭಟನೆ

Suddi Udaya

ಇಂಡಸ್ ಟವರ್ಸ್ ಕಾರ್ಮಿಕರ ನ್ಯಾಯಕ್ಕಾಗಿ ಭಾರತೀಯ ಮಜ್ದೂರು ಸಂಘದಿಂದ ದ.ಕ ಜಿಲ್ಲಾ ಸಂಸದರಿಗೆ ಮನವಿ

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ

Suddi Udaya

ನೆರಿಯದಲ್ಲಿ ಕಾಣಿಸಿಕೊಂಡ ಕಾಡಾನೆ : ಎಸ್ಟೇಟ್ ಒಳಗೆ ನುಗ್ಗಿ ಗೇಟ್ ಮುರಿದು ಹಾನಿ.

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವ ಧ್ವಜಾರೋಹಣದೊಂದಿಗೆ ಪ್ರಾರಂಭ

Suddi Udaya
error: Content is protected !!