25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆ: ಗುರುವಾಯನಕೆರೆ ಎರ್ಡೂರು ಬಳಿ ‘ಶ್ರೀರಾಮನಗರ’ ನಾಮಫಲಕ ಅನಾವರಣ

ಗುರುವಾಯನಕೆರೆ: ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆಯ ದಿನವಾದ ಜ.22ರಂದು ಕುವೆಟ್ಟು ಗ್ರಾಮದ ಗುರುವಾಯನಕೆರೆ ಎರ್ಡೂರು ಬಳಿಯ ಹಲವು ಮನೆಗಳಿರುವ ಪ್ರದೇಶಕ್ಕೆ “ಶ್ರೀರಾಮನಗರ” ಎಂಬ ನೂತನ ಹೆಸರನ್ನಿಟ್ಟು ಈ ಪುಣ್ಯದಿನವನ್ನು ಜನಮಾನಸದಲ್ಲಿ ಶಾಶ್ವತವಾಗಿ ನೆನಪಿಲ್ಲಿ ಉಳಿಯವಂತೆ ಮಾಡಲಾಯಿತು.


ಕುವೆಟ್ಟು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಭಾರತಿ ಎಸ್. ಶೆಟ್ಟಿಯವರು ‘ಶ್ರೀರಾಮನಗರ’ ನೂತನ ಹೆಸರಿನ ನಾಮಫಲಕವನ್ನು ಅನಾವರಣಗೊಳಿಸಿ, ಶ್ರೀರಾಮ ಪ್ರಾಣ ಪ್ರತಿಷ್ಠೆಯ ಈ ದಿನದಂದು ಈ ಪ್ರದೇಶಕ್ಕೆ ಶ್ರೀರಾಮ ನಗರ ಎಂಬ ಹೆಸರನ್ನು ಇಡುವ ಮೂಲಕ ರಾಮನ ಹೆಸರನ್ನು ನಿತ್ಯ ನೆನೆಯುವಂತೆ ಮಾಡಲಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಈ ಸಂದರ್ಭ ಗ್ರಾ.ಪಂ ಉಪಾಧ್ಯಕ್ಷ ಗಣೇಶ್ ಕೆ. ಸದಸ್ಯರಾದ ಶ್ರೀಮತಿ ರಚನಾ ಕೆ, ಮಂಜುನಾಥ್ ಕುಂಬ್ಳೆ, ಮಾಜಿ ಅಧ್ಯಕ್ಷೆ ಆಶಾಲತಾ, ಮಾಜಿ ಸದಸ್ಯೆ ಶ್ರೀಮತಿ ದೀಪಾ ಶೆಣೈ, ಸ್ಥಳೀಯ ನಿವಾಸಿಗಳಾದ ಕಾಶೀನಾಥ್ ಭಟ್, ಪ್ರಕಾಶ್ ಶೆಣೈ, ಪತ್ರಕರ್ತ ಬಿ.ಎಸ್.ಕುಲಾಲ್, ಉಮೇಶ್ ಹೆಬ್ಬಾರ್, ತಿಲಕ್‌ರಾಜ್, ಸಂತೋಷ್ ಕುಲಾಲ್, ಉಮೇಶ್ ಕುಲಾಲ್, ಹರೀಶ್ ನಾಯ್ಕ, ಶಿಕ್ಷಕ ಮಹೇಂದರ, ಶ್ರೀಮತಿ ಸುಜಯ, ಶ್ರೀಮತಿ ರತ್ನ, ದಿಶಾ ಅಜೇಯ್, ಅನುಷಾ ವಿ.ರೈ, ಗೀತಾ ಭಟ್ ಮೊದಲಾದವರು ಉಪಸ್ಥಿತರಿದ್ದರು.

Related posts

ಉಜಿರೆಯಲ್ಲಿ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ಅಭಿಯಾನ

Suddi Udaya

ಕನ್ಯಾಡಿಯ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರಿಂದ ಮುಂಬಯಿ ಬಿಲ್ಲವ ಸಮುದಾಯ ಭವನ, ಗುರುಮಂದಿರ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ

Suddi Udaya

ಇತಿಹಾಸ ಪ್ರಸಿದ್ದ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಲ್ಲಿ ಬ್ರಹ್ಮಕುಂಭಾಭಿಷೇಕ: ಅಧ್ಯಕ್ಷರಾಗಿ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ, ಕಾರ್ಯಾಧ್ಯಕ್ಷರಾಗಿ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಆಯ್ಕೆ

Suddi Udaya

ದ್ವೇಷ ಭಾಷಣ ಆರೋಪ: ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧದ ಎಫ್‌ಐ ಆರ್‌ಗೆ ಹೈಕೋರ್ಟ್ ತಡೆ

Suddi Udaya

ಬೆಳ್ತಂಗಡಿ: ವಿದ್ಯುತ್ ಗುತ್ತಿಗೆದಾರ ಬೆನೆಡಿಕ್ಟ್ ವೇಗಸ್ ನಿಧನ

Suddi Udaya
error: Content is protected !!