24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೈಪಾಲದಲ್ಲಿ ಭರದಿಂದ ಸಾಗುತ್ತಿರುವ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಕಾಮಗಾರಿ, ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ – ಕಾಮಗಾರಿ ವೀಕ್ಷಣೆ

ಬಂದಾರು : ಕೊಕ್ಕಡ ಹೋಬಳಿ ವ್ಯಾಪ್ತಿಗೆ ಒಳಪಟ್ಟ, ಬಂದಾರು -ಕೊಕ್ಕಡ ಗ್ರಾಮ ಸಂಪರ್ಕಿಸುವ ಪೆರ್ಲ -ಬೈಪಾಡಿಯ ಮೈಪಾಲ ಎಂಬಲ್ಲಿ ನಿರ್ಮಾಣವಾಗುತ್ತಿರುವ ಸೇತುವೆ ಸಹಿತ ಕಿಂಡಿ ಆಣೆಕಟ್ಟು ಕಾಮಗಾರಿಯನ್ನು ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರು ಜ.23 ರಂದು ಪರಿಶೀಲನೆ ಮಾಡಿದರು.


ಬಂದಾರು -ಕೊಕ್ಕಡ ಗ್ರಾಮ ಸಂಪರ್ಕಿಸುವ ಪೆರ್ಲ-ಬೈಪಾಡಿಯ ಮೈಪಾಲ ಎಂಬಲ್ಲಿ ಸೇತುವೆ ಸಹಿತ ಕಿಂಡಿ ಆಣೆಕಟ್ಟು ಕಾಮಗಾರಿ ನಡೆಯುತ್ತಿದ್ದು, ಇದು ಪೂರ್ತಿಯಾದರೆ ಕೊಕ್ಕಡ ನಾಡಕಛೇರಿ ತೆರಳಲು ಹನ್ನೊಂದು ಗ್ರಾಮಗಳ ನಾಗರಿಕರು ಹಲವು ವರ್ಷಗಳಿಂದ ಅಲೆದಾಡುವ ಪ್ರಸಂಗ ಕೊನೆಯಾಗುವ ಕಾಲ ಸನ್ನಿಹಿತವಾಗಲಿದೆ. ಬಂದಾರು, ಬೆಳಾಲು, ಮೊಗ್ರು, ಕೊಯ್ಯೂರು, ಕಣಿಯೂರು, ಇಳಂತಿಲ, ತಣ್ಣೀರುಪಂತ, ಕರಾಯ, ಮಚ್ಚಿನ, ಬಾರ್ಯ, ತೆಕ್ಕಾರು, ಗ್ರಾಮಗಳಿಗೆ ಗತ ಕಾಲಾದ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ಶಾಸಕ ಹರೀಶ್ ಪೂಂಜರ ಅವಿರತ ಶ್ರಮದ ಫಲವಾಗಿ, ಅನುದಾನ ಬಿಡುಗಡೆಯಾಗಿ ಕಾಮಗಾರಿ ನಡೆಯುತ್ತಿದೆ. ಆ ಭಾಗದ ನಾಗರಿಕರಲ್ಲಿ ಮಂದಹಾಸದ ನಗು ಕಾಣಿಸ್ತಾ ಇದೆ. ಕಟ್ಟಕಡೆಯ ಮೂಲೆಯಲ್ಲಿರುವ ಪ್ರದೇಶ ಇಂದು ಅಭಿವೃದ್ಧಿಯತ್ತ ಸಾಗುತ್ತಿದೆ ಎಂಬ ಅಭಿಪ್ರಾಯ ಸಾರ್ವಜನಿಕರಲ್ಲಿ ವ್ಯಕ್ತವಾಗುತ್ತಿದೆ.


ಈ ಸಂದರ್ಭದಲ್ಲಿ ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಕೊಕ್ಕಡ ಗ್ರಾ.ಪಂ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಯೋಗೀಶ್ ಆಲಂಬಿಲ. ಬಂದಾರು ಗ್ರಾ.ಪಂ ಅಧ್ಯಕ್ಷ ದಿನೇಶ್ ಗೌಡ, ತಾ.ಪಂ ಮಾಜಿ ಸದಸ್ಯರುಗಳಾದ ಕೃಷ್ಣಯ್ಯ ಆಚಾರ್ಯ, ಮಹಾಬಲ ಗೌಡ, ಬೈಪಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಉಮೇಶ್ ಗೌಡ ಪೆರ್ಲ, ಪ್ರಮುಖರಾದ ಹೊನ್ನಪ್ಪ ಗೌಡ ಸೋಣಕುಮೆರು, ಡೀಕಯ್ಯ ಗೌಡ, ದಿನೇಶ್ ಗೌಡ ಉಪಸ್ಥಿತರಿದ್ದರು.

Related posts

ಬೆಳಾಲು : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಆರೋಪಿಗಳ ಮನೆಯಿಂದ ಬೈಕ್, ಬಟ್ಟೆ ಕತ್ತಿ ವಶಕ್ಕೆ

Suddi Udaya

ಸುಲ್ಕೇರಿಮೊಗ್ರು ಪುರುಷರ ಬಳಗ ವತಿಯಿಂದ ರಾಶಿ ಪೂಜೆ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲ ಮಾದ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿನಿ ಕು.ಸಿಂಚನ ರವರಿಂದ ಗ್ರಾಮೀಣಾಭಿವೃದ್ದಿ ಸೇವೆಗೆ ಪ್ರಮಾಣ ಪತ್ರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮಹಿಳಾ ವಿಭಾಗದಿಂದ ಮಹಿಳಾ ಸಪ್ತಾಹ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ಕೃಷಿಕ ಪಿ ಶಾಂತರಾಮ ಹೃದಯಾಘಾತದಿಂದ ನಿಧನ

Suddi Udaya

ಕಲ್ಮಂಜ: ಪುಟಾಣಿ ಮಕ್ಕಳ ನೂತನ ‘ಸದಾಶಿವೇಶ್ವರ’ ಭಜನಾ ತಂಡ ರಚನೆ

Suddi Udaya
error: Content is protected !!