23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಶ್ರೀರಾಮೋತ್ಸವ ಸಂಭ್ರಮ

ಪಟ್ರಮೆ : ಅಯೋಧ್ಯೆಯಲ್ಲಿ ರಾಮಲಲ್ಲನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ಸಂಭ್ರಮಾಚರಣೆಯನ್ನು ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಆಚರಿಸಲಾಯಿತು.


ಬೆಳಿಗ್ಗೆ ಅಗ್ನಿಹೋತ್ರ, ಸರಸ್ವತಿ ವಂದನೆಯ ಬಳಿಕ ಶಾಲಾ ಮೈದಾನದಲ್ಲಿ ಮಕ್ಕಳು ನೃತ್ಯ ಭಜನೆ ಮಾಡುವುದರ ಮೂಲಕ ಸಂಭ್ರಮಿಸಿದರು. ಬಳಿಕ ವೇದವ್ಯಾಸ ಧ್ಯಾನ ಮಂದಿರದಲ್ಲಿ 108 ಬಾರಿ ರಾಮ ತಾರಕ ಮಂತ್ರ, ರಾಮರಕ್ಷಾ ಸ್ತೋತ್ರ, ಹನುಮಾನ್ ಚಾಲೀಸ್ ಪಠಿಸಿದರು. ಅಯೋಧ್ಯೆಯ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ನೇರ ಪ್ರಸಾರವನ್ನು ವಿದ್ಯಾರ್ಥಿಗಳಿಗೆ ಪರದೆಯ ಮೂಲಕ ವೀಕ್ಷಿಸಲು ವ್ಯವಸ್ಥೆಗೊಳಿಸಲಾಗಿತ್ತು.


ಶಾಲಾ ಆಡಳಿತ ಸಮಿತಿ ಸಂಚಾಲಕ ಪ್ರಶಾಂತ್ ಶೆಟ್ಟಿ ದೇರಾಜೆ, ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ ಶೇಟ್, ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಕೇಸರಿ ಶಾಲಿನೊಂದಿಗೆ ಶಾಲೆಗೆ ಆಗಮಿಸಿದ್ದು ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿತು. ಸಾಂಪ್ರದಾಯಿಕ ಸಿಹಿ ಭೋಜನದೊಂದಿಗೆ ಕಾರ್ಯಕ್ರಮ ಪೂರ್ಣಗೊಂಡಿತು. ರಾತ್ರಿ ಶಾಲೆಯ ಸುತ್ತಲೂ ಹಣತೆ ಹಚ್ಚಿ ದೀಪಾವಳಿಯಂತೆ‌ ಸಂಭ್ರಮಿಸಿದರು.

Related posts

ಹೊಂಬೆಳಕು ಕಾರ್ಯಕ್ರಮದಲ್ಲಿ ಉಜಿರೆ ಪಂ.ಅ.ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ರವರಿಗೆ ಸನ್ಮಾನ

Suddi Udaya

ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ

Suddi Udaya

ಧರ್ಮಸ್ಥಳ: ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ ಹಾಗೂ ಖ್ಯಾತ ಚಲನಚಿತ್ರ ನಟ ಸಿಹಿಕಹಿ ಚಂದ್ರು ರವರಿಂದ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ

Suddi Udaya

ಡಾ. ಟಿ. ವಿ. ಜೋಸೆಫ್ ರಸ್ತೆ” ನಾಮಫಲಕ ಅನಾವರಣ – ಕಾರುಣ್ಯ ಸ್ಪರ್ಶಂ ಯೋಜನೆಯಡಿ ಚಿಕಿತ್ಸಾ ಸಹಾಯಧನ

Suddi Udaya

ಓಡಿಲ್ನಾಳ ಸ ಉ.ಪ್ರಾ .ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಬೆಳ್ತಂಗಡಿಯಿಂದ ಬೆಂಗಳೂರಿಗೆ ಸುಗಮ ಸಂಚಾರಕ್ಕಾಗಿ ಆರಂಭಗೊಂಡ “ಪಲ್ಲಕ್ಕಿ” ನೂತನ ಬಸ್ ಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya
error: Content is protected !!