September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಅಯೋಧ್ಯೆಯಲ್ಲಿನ ಶ್ರೀ ರಾಮನ ಮಂದಿರವು ಸುಂದರವಾಗಿ ಮೂಡಿಬಂದಿದೆ: ಡಾ| ಡಿ ವೀರೇಂದ್ರ ಹೆಗ್ಗಡೆ

ಅಯೋಧ್ಯೆಯಲ್ಲಿನ ಶ್ರೀ ರಾಮನ ಮಂದಿರವು ಸುಂದರವಾಗಿ ಮೂಡಿಬಂದಿದೆ. ಮಂದಿರದೊಳಗಿನ ಶ್ರೀ ರಾಮನ ಬಿಂಬದ ಪ್ರಾಣಪ್ರತಿಷ್ಠೆಯು ಸೂಕ್ತ ರೀತಿಯಲ್ಲಿ ಜರುಗಿತು. ಪ್ರತಿಷ್ಟಿತ ಮಠಾಧಿಪತಿಗಳು ಮತ್ತು ಎಲ್ಲಾ ರಂಗದ ಪ್ರಮುಖರು ಈ ಐತಿಹಾಸಿಕ ಕಾರ್‍ಯಕ್ರಮದಲ್ಲಿ ಭಾಗವಹಿಸಿದರು. ಕಾರ್ಯಕ್ರಮವು ಅತ್ಯಂತ ಶಿಸ್ತಿನಿಂದ ನಡೆದಿದೆ.

ಅಯೋಧ್ಯೆಯ ನಗರವನ್ನು ಹೂವಿನಿಂದ ಶೃಂಗಾರಗೊಳಿಸಿದ್ದರು. ಅಲ್ಲಲ್ಲಿ ಸ್ವಾಗತ ನೃತ್ಯವು ನಡೆಯುತ್ತಿದ್ದವು. ಎಲ್ಲಾ ರೀತಿಯಿಂದಲೂ ಕಾರ್ಯಕ್ರಮವು ವ್ಯವಸ್ಥಿತವಾಗಿಯೇ ನಡೆಯಿತು.
ರಾಮಮಂದಿರದ ಎದುರುಗಡೆ ಕುಳಿತ ಎಲ್ಲಾ ಸಂತರಿಗೂ ಅಲ್ಲಿಯೇ ಆಹಾರ, ಪಾನೀಯಗಳನ್ನು ವಿತರಿಸಿದರು. ಅಲ್ಲಿಯ ಹವಾಮಾನದಲ್ಲಿ ಚೆನ್ನಾಗಿ ಚಳಿಯೇ ಇತ್ತು, ಆದರೂ ಆತ್ಮೀಯವಾದ ಸ್ವಾಗತ ಮತ್ತು ವ್ಯವಸ್ಥಿತವಾದ ಕಾರ್ಯಕ್ರಮದಿಂದಾಗಿ ನಮಗೆಲ್ಲರಿಗೂ ಅಷ್ಟು ಸಮಸ್ಯೆಯೇ ಎನಿಸಲಿಲ್ಲ. ಹೊರಗಡೆ ಕುಳಿತವರಿಗೆ ಟಿ.ವಿ. ಪರದೆಯ ಮುಖಾಂತರ ಒಳಗೆ ನಡೆಯುವ ಪೂಜಾ ವಿಧಿ-ವಿಧಾನಗಳನ್ನು ತೋರಿಸುತ್ತಿದ್ದರು.

ಈ ಪ್ರಾಣಪ್ರತಿಷ್ಠಾ ಕಾರ್ಯಕ್ರಮದಿಂದಾಗಿ ಮಹಾತ್ಮರೆಲ್ಲರೂ ಪ್ರಸನ್ನರಾಗಿ ಹೋದರು. ಇಂದು ಈ ಕಾರ್ಯಕ್ರಮದಿಂದಾಗಿ ಅಲ್ಲಲ್ಲಿ ಪ್ರಯಾಣಕ್ಕೆ ಅಡೆತಡೆಗಳಿದ್ದವು. ಇಂದಿನಿಂದ ಮಂದಿರಕ್ಕೆ ಮುಕ್ತ ದರ್ಶನ ಎಂದು ಘೋಷಿಸಲಾಗಿದೆ.


ಗೌರವಾನ್ವಿತ ಪ್ರಧಾನಮಂತ್ರಿಯವರಾದ ನರೇಂದ್ರ ಮೋದಿಜೀಯವರು ಎಲ್ಲರನ್ನೂ ಉದ್ಧೇಶಿಸಿ ಮಾತನಾಡಿದರು ಹಾಗೂ ಎಲ್ಲಾ ಸಂತರ ಬಳಿ ಬಂದು ಗೌರವದಿಂದ ಮಾತನಾಡಿಸಿದರು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಅಭಿಪ್ರಾಯವನ್ನು ತಿಳಿಸಿದರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾಸಿಕ ಸಭೆ

Suddi Udaya

ಬೆಂಗಳೂರು ಕ್ಯಾನ್ ಫಿನ್ ಹೋಮ್ಸ್ ಲಿ. ರವರಿಂದ ಬೆಳ್ತಂಗಡಿ ಜೂನಿಯರ್ ಕಾಲೇಜ್ ಗೆ ಅಭೂತಪೂರ್ವ ಕೊಡುಗೆಗಳ ಉದ್ಘಾಟನೆ

Suddi Udaya

ಕುಣಿತ ಭಜನಾ ಪಂಥೋ 2024: ಗುರುವಾಯನಕೆರೆ ಶ್ರೀ ಭ್ರಾಮರಿ ಭಜನಾ ಮಂಡಳಿಗೆ ದ್ವಿತೀಯ ಸ್ಥಾನ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ಭೇಟಿ ಬಚಾವೋ ಭೇಟಿ ಪಡಾವೋ ಅರಿವು ಕಾರ್ಯಕ್ರಮ

Suddi Udaya

ಅ.19: ಪೊದುಂಬಿಲ ಕೆಸರ್‌ದ ಕಂಡಡ್ ಪರ್ಬದ ಗೊಬ್ಬು

Suddi Udaya

ಶಿರ್ಲಾಲು: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ ಹಗ್ಗಜಗ್ಗಾಟ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!