25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ: ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಶ್ರೀರಾಮೋತ್ಸವ ಮತ್ತು ಹೋಳಿಗೆ ಹಬ್ಬ

ಅರಸಿನಮಕ್ಕಿ: ಅಯೋಧ್ಯ ಪ್ರಭು ಶ್ರೀರಾಮ ಮಂದಿರದ ಲೋಕಾರ್ಪಣೆ ಪ್ರಯುಕ್ತ ಕುಂಟಾಲಪಲ್ಕೆ ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ರಾಮೋತ್ಸವ ಮತ್ತು ಹೋಳಿಗೆ ಹಬ್ಬವನ್ನು ಜ.22ರಂದು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಷ್ಟೀಯ ಸ್ವಯಂ ಸೇವಾ ಸಂಘದ ಹಿರಿಯ ಕಾರ್ಯಕರ್ತರಾದ ಕೃಷ್ಣ ಭಟ್ ಕೊಕ್ಕಡ ಇವರು ಮಾತನಾಡಿ ಅಯೋಧ್ಯೆಯ ಹೋರಾಟದ ಬಗ್ಗೆ ಮಾತನಾಡಿ ಸಂಘ ಶಕ್ತಿಯ ಮಹತ್ವ ತಿಳಿಸಿದರು.

ಕಾರ್ಯಕ್ರಮದಲ್ಲಿ ಅರಿಕೆಗುಡ್ಡೆ ಬ್ರಹ್ಮ ಕಲಶದ ಅಧ್ಯಕ್ಷರು ಆಗಿರುವ ಪ್ರಕಾಶ್ ಪಿಲಿಕಬೆ ಮಾತನಾಡಿ ಶುಭ ಹಾರೈಸಿದರು. ಸಭಾ ಕಾರ್ಯಕ್ರಮದಲ್ಲಿ ಕಪಿಲ ಕೇಸರಿ ಹಿತೈಷಿಗಳಾದ ಅಶೋಕ್ ಭೀಡೆ, ಹತ್ಯಡ್ಕ ಸೇವಾ ಸಹಕಾರಿ ಸಂಘದ ಸದಸ್ಯರಾದ ಧರ್ಮರಾಜ ಗೌಡ ಅಡ್ಕಡಿ, ಹತ್ಯಡ್ಕ ಪಂಚಾಯತ್ ಸದಸ್ಯರಾದ ಪ್ರೇಮಚಂದ್ರ, ಕಪಿಲ ಕೇಸರಿ ಅಧ್ಯಕ್ಷರಾದ ರಾಜೇಶ್ ಗೌಡ ಬೊಳ್ಳೋಡಿ ಉಪಸ್ಥಿತರಿದ್ದರು.


ವ್ರಕ್ಷ ವರ್ಧನ್ ಗೋಖಲೆ ಪ್ರಸ್ತಾವಿಕ ನುಡಿಗಳಾಡಿದರು. ಸುಮಂತ್ ಗೌಡ ಅಳಕ್ಕೆ ಸ್ವಾಗತಿಸಿ ಅನ್ವಿತ್ ರೈ ವಂದಿಸಿದರು. ಶ್ರೀವತ್ಸ ಗೋಖಲೆ ಕಾರ್ಯಕ್ರಮ ನಿರೂಪಿಸಿದರು.
4 ತಂಡಗಳಿಂದ ಭಜನಾ ಕಾರ್ಯಕ್ರಮ ನಡೆದು ಹೋಳಿಗೆ ಹಬ್ಬ ಮತ್ತು ದೀಪಾವಳಿ ಹಬ್ಬ ಆಚರಿಸಲಾಯಿತು

Related posts

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ ವಾರ್ಷಿಕ ಮಹಾಸಭೆ

Suddi Udaya

ಎಸ್.ಡಿ.ಎಂ ಕಾಲೇಜು: ಟಾಟಾ ಬಿಗ್ ಬಾಸ್ಕೆಟ್ ನಿಂದ ಕ್ಯಾಂಪಸ್ ಆಯ್ಕೆ ಪ್ರಕ್ರಿಯೆ

Suddi Udaya

ಮುಂಡಾಜೆ ಕಾಲೇಜು: ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ : 3ನೇ ವರ್ಷದ ಶ್ರೀ ಗೌರಿ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ (ಸಅ) ಅವಹೇಳನ ಪೋಸ್ಟ್ ಪ್ರಕರಣ; ಚೇತನ್ ಹೊದ್ದೆಟ್ಟಿ ವಿರುದ್ಧ ಅಕ್ಬರ್ ಬೆಳ್ತಂಗಡಿಯಿಂದ ದೂರು ದಾಖಲು

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

Suddi Udaya
error: Content is protected !!