September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ: ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಶ್ರೀರಾಮೋತ್ಸವ ಮತ್ತು ಹೋಳಿಗೆ ಹಬ್ಬ

ಅರಸಿನಮಕ್ಕಿ: ಅಯೋಧ್ಯ ಪ್ರಭು ಶ್ರೀರಾಮ ಮಂದಿರದ ಲೋಕಾರ್ಪಣೆ ಪ್ರಯುಕ್ತ ಕುಂಟಾಲಪಲ್ಕೆ ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ರಾಮೋತ್ಸವ ಮತ್ತು ಹೋಳಿಗೆ ಹಬ್ಬವನ್ನು ಜ.22ರಂದು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಷ್ಟೀಯ ಸ್ವಯಂ ಸೇವಾ ಸಂಘದ ಹಿರಿಯ ಕಾರ್ಯಕರ್ತರಾದ ಕೃಷ್ಣ ಭಟ್ ಕೊಕ್ಕಡ ಇವರು ಮಾತನಾಡಿ ಅಯೋಧ್ಯೆಯ ಹೋರಾಟದ ಬಗ್ಗೆ ಮಾತನಾಡಿ ಸಂಘ ಶಕ್ತಿಯ ಮಹತ್ವ ತಿಳಿಸಿದರು.

ಕಾರ್ಯಕ್ರಮದಲ್ಲಿ ಅರಿಕೆಗುಡ್ಡೆ ಬ್ರಹ್ಮ ಕಲಶದ ಅಧ್ಯಕ್ಷರು ಆಗಿರುವ ಪ್ರಕಾಶ್ ಪಿಲಿಕಬೆ ಮಾತನಾಡಿ ಶುಭ ಹಾರೈಸಿದರು. ಸಭಾ ಕಾರ್ಯಕ್ರಮದಲ್ಲಿ ಕಪಿಲ ಕೇಸರಿ ಹಿತೈಷಿಗಳಾದ ಅಶೋಕ್ ಭೀಡೆ, ಹತ್ಯಡ್ಕ ಸೇವಾ ಸಹಕಾರಿ ಸಂಘದ ಸದಸ್ಯರಾದ ಧರ್ಮರಾಜ ಗೌಡ ಅಡ್ಕಡಿ, ಹತ್ಯಡ್ಕ ಪಂಚಾಯತ್ ಸದಸ್ಯರಾದ ಪ್ರೇಮಚಂದ್ರ, ಕಪಿಲ ಕೇಸರಿ ಅಧ್ಯಕ್ಷರಾದ ರಾಜೇಶ್ ಗೌಡ ಬೊಳ್ಳೋಡಿ ಉಪಸ್ಥಿತರಿದ್ದರು.


ವ್ರಕ್ಷ ವರ್ಧನ್ ಗೋಖಲೆ ಪ್ರಸ್ತಾವಿಕ ನುಡಿಗಳಾಡಿದರು. ಸುಮಂತ್ ಗೌಡ ಅಳಕ್ಕೆ ಸ್ವಾಗತಿಸಿ ಅನ್ವಿತ್ ರೈ ವಂದಿಸಿದರು. ಶ್ರೀವತ್ಸ ಗೋಖಲೆ ಕಾರ್ಯಕ್ರಮ ನಿರೂಪಿಸಿದರು.
4 ತಂಡಗಳಿಂದ ಭಜನಾ ಕಾರ್ಯಕ್ರಮ ನಡೆದು ಹೋಳಿಗೆ ಹಬ್ಬ ಮತ್ತು ದೀಪಾವಳಿ ಹಬ್ಬ ಆಚರಿಸಲಾಯಿತು

Related posts

ಸುಲ್ಕೇರಿ ಶ್ರೀ ನೇಮಿನಾಥ ಸ್ವಾಮಿ ಬಸದಿಯ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ವಿದ್ಯಾರ್ಥಿವೇತನ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿಬಾಜೆ ಗ್ರಾ.ಪಂ. ಅರಿವು ಕೇಂದ್ರದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಆರು ಜನ ನಕ್ಸಲರು ಶರಣಾಗತಿ ಬೆನ್ನಲ್ಲೇ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ

Suddi Udaya

ಡಾ| ವೀಣಾ ಬನ್ನಂಜೆ ಅವರಿಂದ ಸಂಪೂರ್ಣ ರಾಮಾಯಣ ಪ್ರವಚನ ಸಪ್ತಾಹ

Suddi Udaya

ಬೆಳ್ತಂಗಡಿ ವಲಯದ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ವೈದ್ಯಕೀಯ ಸಹಾಯ ಹಸ್ತ

Suddi Udaya
error: Content is protected !!