July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದಿಡುಪೆ -ಎಳನೀರು ರಸ್ತೆ ಅಭಿವೃದ್ಧಿ ಬೆಳ್ತಂಗಡಿ- ಮೂಡಿಗೆರೆ ಶಾಸಕರುಗಳಿಂದ ಪರಿಶೀಲನೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ವನ್ಯಜೀವಿ ವಿಭಾಗದ ಅಧಿಕಾರಿಗಳ ಉಪಸ್ಥಿತಿ

ಬೆಳ್ತಂಗಡಿ : ಚಿಕ್ಕಮಗಳೂರು ಜಿಲ್ಲೆಗೆ ತೀರಾ ಹತ್ತಿರದ ಸಂಪರ್ಕ ಕಲ್ಪಿಸುವ ದಿಡುಪೆ-ಎಳನೀರು- ಸಂಸೆ ರಸ್ತೆಯ ಅಭಿವೃದ್ಧಿ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ಮೂಡಿಗೆರೆ ಶಾಸಕಿ ನಯನಿ ಮೋಟಮ್ಮ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ವನ್ಯಜೀವಿ ವಿಭಾಗದ ಅಧಿಕಾರಿಗಳೊಂದಿಗೆ ಜ.23 ಮಂಗಳವಾರ ಪರಿಶೀಲನೆ ನಡೆಸಿದರು.

ಬಳಿಕ ಮಾತನಾಡಿದ ಶಾಸಕಿ ನಯನಾ ಮೋಟಮ್ಮ”ಬೆಳಗಾಂ ಅಧಿವೇಶನದ ವೇಳೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ದಿಡುಪೆ-ಎಳನೀರು- ಸಂಸೆ ರಸ್ತೆಯ ಬಗ್ಗೆ ಪ್ರಸ್ತಾಪಿಸಿದ್ದು ಈ ಬಗ್ಗೆ ಗಮನಹರಿಸುವಂತೆ ಸೂಚಿಸಿದ್ದರು.ರಸ್ತೆ ಬೆಳ್ತಂಗಡಿ ವ್ಯಾಪ್ತಿಯಲ್ಲಿದ್ದರೂ ಇದರ ಹೆಚ್ಚಿನ ಉಪಯೋಗ ಚಿಕ್ಕಮಗಳೂರು ವಿಭಾಗದ ಜನರಿಗೆ ಇದೆ. ಚಾರ್ಮಾಡಿ ಘಾಟಿಗೆ ಇದು ಪರ್ಯಾಯ ರಸ್ತೆಯಾಗಿದ್ದು,ಈ ಜಿಲ್ಲೆಯಿಂದ ಆಸ್ಪತ್ರೆ, ಶಾಲಾ,ಕಾಲೇಜುಗಳಿಗೆ ಹೋಗುವವರಿಗೆ ಹತ್ತಿರದ ಸಂಪರ್ಕವಾಗಿದೆ.ಧರ್ಮಸ್ಥಳ,ಕಳಸ, ಹೊರನಾಡು,ಶೃಂಗೇರಿ ಹೋಗುವವರಿಗೂ ಇದು ಹತ್ತಿರದ ರಸ್ತೆ. ಈ ರಸ್ತೆ ನಿರ್ಮಾಣವಾದರೆ ಅನೇಕ ಅನುಕೂಲಗಳು ಜನರಿಗೆ ಸಿಗಲಿವೆ. ಪಕ್ಷ ಬೇರೆಯಾದರು ಜನಹಿತಕ್ಕಾಗಿ ಜತೆಯಾಗಿ ಕೆಲಸ ಮಾಡುತ್ತೇವೆ.

ಈ ರಸ್ತೆ ವಿಚಾರದ ಬಗ್ಗೆ ಅರಣ್ಯ ಸಚಿವರ ಗಮನಕ್ಕೆ ತರಲಾಗುವುದು ಹಾಗೂ ಇಲ್ಲಿನ ತೊಡಕುಗಳ ಬಗ್ಗೆ ಹಿರಿಯ ಅಧಿಕಾರಿಗಳಲ್ಲಿ ಚರ್ಚಿಸಲಾಗುವುದು ಮುಂದಿನ ಅಧಿವೇಶನದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಲಾಗುವುದು” ಎಂದು ಹೇಳಿದರು.

ಶಾಸಕ ಹರೀಶ್ ಪೂಂಜ ಮಾತನಾಡಿ “ಈ ರಸ್ತೆ ಅಭಿವೃದ್ಧಿ ಅನೇಕ ವರ್ಷಗಳ ಹೋರಾಟವಾಗಿದೆ. ಇದಕ್ಕೆ ತಾರ್ಕಿಕ ಅಂತ್ಯ ದೊರಕಬೇಕೆಂಬ ಉದ್ದೇಶದಿಂದ ಮೂಡಿಗೆರೆ ಶಾಸಕಿಯವರಲ್ಲಿ ಮಾತುಕತೆ ನಡೆಸಿದ್ದೆ. ಈ ರಸ್ತೆ ನಿರ್ಮಾಣವಾದರೆ ರಾಜ್ಯಕ್ಕೆ ಅನುಕೂಲವಾಗಲಿದೆ. ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ರಸ್ತೆಯನ್ನು ವೀಕ್ಷಿಸಲಾಗಿದೆ. ಅರಣ್ಯ ಸಚಿವರು,ಮೂಡಿಗೆರೆ ಶಾಸಕಿ ಹಾಗೂ ಸಂಬಂಧಪಟ್ಟ ಅಧಿಕಾರಿ ವರ್ಗದೊಂದಿಗೆ ಸಭೆಯನ್ನು ನಡೆಸಿ ಉಳಿದ 5ಕಿಮೀ ರಸ್ತೆಯನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಹಾಗೂ ಈ ಬಗ್ಗೆ ರಾಜಕೀಯ ರಹಿತವಾಗಿ ಕೆಲಸ ಮಾಡಲಾಗುವುದು” ಎಂದರು.ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮ ಬಾಬು ಮಾತನಾಡಿ”ಎರಡು ಕ್ಷೇತ್ರದ ಶಾಸಕರೊಂದಿಗೆ ಸ್ಥಳ ಪರಿಶೀಲನೆ ಮಾಡಲಾಗಿದೆ.ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲು ಸೂಚಿಸಿದ್ದಾರೆ. ರಸ್ತೆ ಅಭಿವೃದ್ಧಿ ಕುರಿತು ಹಿರಿಯ ಅಧಿಕಾರಿಗಳ ಜತೆ ಚರ್ಚಿಸಲಾಗುವುದು” ಎಂದರು.ಕಾರ್ಕಳ ವನ್ಯಜೀವಿ ವಿಭಾಗದ ಸಹಾಯಕ ಅರಣ್ಯಾಧಿಕಾರಿ ಪ್ರಕಾಶ್ ಪೂಜಾರಿ, ಬೆಳ್ತಂಗಡಿ ಆರ್‌ ಎಫ್‌ ಒ ಸ್ವಾತಿ,ಮಲವಂತಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಕಾಶ್ ಜೈನ್,ಮಾಜಿ ಅಧ್ಯಕ್ಷ ದಿನೇಶ್ ಗೌಡ, ಅನಿತಾ ರಮೇಶ, ಮಾಜಿ ಸದಸ್ಯ ಅರುಣ್ ಕುಮಾರ್, ಪ್ರಮುಖರಾದ ಮಧುಸುಧನ್, ಪ್ರಮೋದ್ ಸಂಸೆ, ಮೃತ್ಯುಂಜಯ ಜೈನ್, ವರ್ಧಮಾನ್ ಜೈನ್, ಮಹೇಶ್ ಗುತ್ಯಡ್ಕ, ವಿಜಯ ಗೌಡ ಬದಾ,ಕೆಪಿಸಿಸಿ ಸದಸ್ಯ ಪ್ರಭಾಕರ ಕೆ.ಆರ್., ಬ್ಲಾಕ್ ಅಧ್ಯಕ್ಷೆ ಶ್ರೇಣಿತಾ, ಪ್ರಧಾನ ಕಾರ್ಯದರ್ಶಿ ವಿಶ್ವನಾಥ್, ತಾ.ಪಂ. ಮಾಜಿ ಸದಸ್ಯರಾದ ರಾಜೇಂದ್ರ ಪ್ರಸಾದ್, ಅಬ್ದುಲ್ ರಫೀಕ್, ವೀರೇಂದ್ರ ಮತ್ತಿತರರು ಉಪಸ್ಥಿತರಿದ್ದರು‌.

Related posts

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂಡಳಿಯ ಸದಸ್ಯರುಗಳಿಗೆ ಅಭಿನಂದನ ಕಾರ್ಯಕ್ರಮ

Suddi Udaya

ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಚ್ಚಿನ ಘಟಕ ಹಾಗೂ ವಿವಿಧ ಸಂಘಗಳಿಂದ ರಾಮ ದೀಪೋತ್ಸವ

Suddi Udaya

ಇಂದು (ಜ.14) ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್‌ನ ವತಿಯಿಂದ ಲಯನ್ಸ್ ಯಕ್ಷೋತ್ಸವ: ಶ್ರೀಕ್ಷೇತ್ರ ಧರ್ಮಸ್ಥಳ ಮೇಳದವರಿಂದ “ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ” ಯಕ್ಷಗಾನ ; ಜ.14 ರ 14 ಬಗೆಯ ವಿಶೇಷ ಖಾದ್ಯಗಳ ಸವಿ ಉಪಾಹಾರ

Suddi Udaya

ವರ್ಗಾವಣೆ ಗೊಂಡಿರುವ ಶಿಕ್ಷಕಿ ಸುರೇಖಾ ರವರಿಗೆ ಮೈರೋಳ್ತಡ್ಕ ಸ.ಹಿ.ಪ್ರಾ. ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya

ಡೇವಿಡ್ ಜೈಮಿ ಕೊಕ್ಕಡ ರವರಿಗೆ ನೋಬೆಲ್ ವರ್ಲ್ಡ್ ರೆಕಾರ್ಡ್ಸ್ ವಿಶ್ವ ದಾಖಲೆ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!