22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀರಾಮೋತ್ಸವ: ಕರಸೇವಕರಿಗೆ ಗೌರವಾರ್ಪಣೆ

ಬೆಳ್ತಂಗಡಿ: ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀರಾಮೋತ್ಸವವು ವಿಜೃಂಭಣೆಯಿಂದ ಜ.22 ರಂದು ನಡೆಯಿತು.

ಬೆಳಗ್ಗೆ ವಿಷ್ಣು ಸಹಸ್ರನಾಮ ಪಠಣದೊಂದಿಗೆ ಆರಂಭಗೊಂಡು ಪೂಜಾ ವಿಧಿ ವಿಧಾನಗಳೊಂದಿಗೆ ನಡೆಯಿತು. ವಿಶೇಷವಾಗಿ ಸಾರ್ವಜನಿಕರಿಗೆ ಗೂಡು ದೀಪ ಸ್ಪರ್ಧೆ ಹಾಗೂ ಮಕ್ಕಳಿಗೆ ಪ್ರಭು ಶ್ರೀ ರಾಮ, ಸೀತಾಮಾತೆ ಹಾಗೂ ಹನುಮಂತನ ವೇಷ ಸ್ಪರ್ಧೆ ಆಯೋಜಿಸಲಾಗಿತ್ತು, ಇದರೊಂದಿಗೆ ಅಯೋಧ್ಯೆಯಲ್ಲಿನ ಶ್ರೀರಾಮದೇವರ ಪ್ರತಿಷ್ಠಾಪನೆಯ ನೇರ ವೀಕ್ಷಣೆಯು ಟ್ರಸ್ಟ್ ವತಿಯಿಂದ ಆಯೋಜನೆ ಮಾಡಲಾಗಿತ್ತು. ಊರ ಹಾಗೂ ಪರ ಊರ ಭಕ್ತರು ಇದರ ಸದುಪಯೋಗವನ್ನು ಪಡೆದರು.

ನಂತರ ಭಜನೆ ಹಾಗೂ ರಾಮ ತಾರಕ ಮಂತ್ರದೊಂದಿಗೆ ಧಾರ್ಮಿಕ ಸಭೆಯು ಆರಂಭಗೊಂಡು ಗ್ರಾಮದ ಕರಸೇವಕರಿಗೆ ಗೌರವಾರ್ಪಣೆ ಮಾಡಲಾಯಿತು. ಡಾ। ಪ್ರದೀಪ್ ಆಟಿಕುಕ್ಕೆ ಅವರು ಉಪನ್ಯಾಸ ನೀಡಿದರು.

ವೇದಿಕೆಯಲ್ಲಿ ಗೋಪಾಲಕೃಷ್ಣ ಸೇವಾ ಟ್ರಸ್ಟಿನ ಅಧ್ಯಕ್ಷರಾದ ಹರೀಶ್ ಸಾಲ್ಯಾನ್, ನಿಕಟ ಪೂರ್ವಾಧ್ಯಕ್ಷರಾದ ಎ ಬಿ ಉಮೇಶ್ ,ಉಪಾಧ್ಯಕ್ಷರಾದ ತನುಜ ಶೇಖರ್, ವಿಶ್ವ ಹಿಂದು ಪರಿಷತ್ ಅಧ್ಯಕ್ಷರಾದ ವಿಜಯ ಕೆ ಹೊಡಿಕಾರ್ ವೇದಿಕೆಯಲ್ಲಿದ್ದರು, ಪ್ರಧಾನ ಕಾರ್ಯದರ್ಶಿಗಳಾದ ಧರ್ಣಪ್ಪಮೂಲ್ಯ ಸ್ವಾಗತಿಸಿ, ಗಣೇಶ್ ನೆಲ್ಲಿಪಲ್ಕೆ ವಂದಿಸಿದರು. ಸುರೇಶ್ ಕಾರ್ಯಕ್ರಮ ನಿರೂಪಿಸಿದರು.

Related posts

ಜೆಸಿಐ ಪುತ್ತೂರಿನಲ್ಲಿ ತರಬೇತಿ ಕಾರ್ಯಗಾರ

Suddi Udaya

ಬರೆಂಗಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಅಳದಂಗಡಿ ಅರಸರಿಂದ ಗಣೇಶ್ ಪೂಜಾರಿ ಬೊಂಟ್ರೋಟ್ಟು ಅವರಿಗೆ ಪಟ್ಟಿ ಪ್ರದಾನ

Suddi Udaya

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಆಡಳಿತ ಮಂಡಳಿಯ ಚುನಾವಣೆ: ಅಂಡಿಂಜೆಯಲ್ಲಿ ಸಹಕಾರ ಭಾರತಿ ಸಭೆ

Suddi Udaya

ಅಳದಂಗಡಿ: ಬಡಗಕಾರಂದೂರು ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ವಸ್ತುಪ್ರದರ್ಶನ ಮೇಳದಲ್ಲಿ ಮಾಂಡೋವಿ ಮೋಟಾರ್ಸ್ ಪ್ರೈ ಲಿ.ಸಂಸ್ಥೆ ಭಾಗಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಪ್ರಥಮ‌ ಗ್ರಾಹಕರಿಗೆ ಕಾರು ಹಸ್ತಾಂತರ

Suddi Udaya
error: Content is protected !!