25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶ್ರೀರಾಮ ಮಕ್ಕಳ ಪೋಟೋ ಸ್ಪರ್ಧೆ: ಸ್ಮಯ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಥಮ ಪ್ರಶಸ್ತಿ

ಮಡಂತ್ಯಾರು :ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಹಾಗೂ ಮಂದಿರದ ಲೋಕಾರ್ಪಣೆ ಸುಸಂದರ್ಭದಲ್ಲಿ ಪಾರೆಂಕಿ ಶ್ರೀ ಮಹಿಷ ಮರ್ದಿನಿ ದೇವಸ್ಥಾನ ಆಯೋಜಿಸಿದ ಶ್ರೀರಾಮ ಮಕ್ಕಳ ಪೋಟೋ ಸ್ಪರ್ಧೆಯಲ್ಲಿ ಸ್ಮಯ ಎಸ್ ಕೋಟ್ಯಾನ್ ಬಳಂಜ ಪ್ರಥಮ ಸ್ಥಾನದೊಂದಿಗೆ ಪ್ರಶಸ್ತಿ ಪಡೆದಿದ್ದಾರೆ.

ಒಂದರಿಂದ ಹತ್ತು ವರ್ಷದೊಳಗಿನ ಮಕ್ಕಳಿಗೆ ಶ್ರೀರಾಮ ದೇವರ ಪೋಟೋ ಸ್ಪರ್ಧೆ ಏರ್ಪಡಿಸಲಾಗಿತ್ತು. ಜಿಲ್ಲೆಯ ನೂರಾರು ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಪ್ರಥಮ, ದ್ವಿತೀಯ, ತೃತೀಯ ಹಾಗೂ 5 ಸಮಾಧಾನಕರ ಬಹುಮಾನ ಘೋಷಿಸಲಾಗಿತ್ತು.

ಸ್ಪರ್ಧೆಯಲ್ಲಿ ಸ್ಮಯ ಎಸ್ ಕೋಟ್ಯಾನ್ ಬಳಂಜ ಪ್ರಥಮ ಸ್ಥಾನ ಪಡೆದರು. ಬೆಳ್ತಂಗಡಿ ದಿವ್ಯ ಸ್ಟುಡಿಯೋದ ಉಮೇಶ್ ಕುಲಾಲ್ ಪೋಟೋ ಕ್ಲಿಕ್ ಮಾಡಿರುತ್ತಾರೆ.

ಇವರು ಸುದ್ದಿ ಉದಯ ವಾರಪತ್ರಿಕೆಯ ಉಪಸಂಪಾದಕ ಸಂತೋಷ್ ಪಿ ಕೋಟ್ಯಾನ್ ಬಳಂಜ ಮತ್ತು ಅಮೃತಾ ಎಸ್ ಕೋಟ್ಯಾನ್ ದಂಪತಿ ಸುಪುತ್ರಿ.

Related posts

ನೆರಿಯದಲ್ಲಿ ಕಾಣಿಸಿಕೊಂಡ ಕಾಡಾನೆ : ಎಸ್ಟೇಟ್ ಒಳಗೆ ನುಗ್ಗಿ ಗೇಟ್ ಮುರಿದು ಹಾನಿ.

Suddi Udaya

ಉಡುಪಿಯ ಮಧ್ವ ನವರಾತ್ರೋತ್ಸವದಲ್ಲಿ ವಿದ್ವಾನ್ ರಾಘವೇಂದ್ರ ಭಟ್ ಲಕ್ಷ್ಮೀ ನರಸಿಂಹ ಮಠ ಮದ್ದಡ್ಕ ರವರಿಗೆ ಸನ್ಮಾನ

Suddi Udaya

ಧರ್ಮಸ್ಥಳ : ಕೂಟದ ಕಲ್ಲು ನಿವಾಸಿ ನಿತೇಶ್ ನಿಧನ

Suddi Udaya

ಗೇರುಕಟ್ಟೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಬೆಳ್ತಂಗಡಿ ಸಹಕಾರ ಭಾರತಿ ನೂತನ ಅಧ್ಯಕ್ಷರಾಗಿ ವೆಂಕಪ್ಪಯ್ಯ, ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ರೈ ಆಯ್ಕೆ

Suddi Udaya

ಪಿಲ್ಯ: ಆರೋಗ್ಯ ಕ್ಷೇಮ ಕೇಂದ್ರದ ಉದ್ಘಾಟನೆ

Suddi Udaya
error: Content is protected !!