July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶ್ರೀರಾಮ ಮಕ್ಕಳ ಪೋಟೋ ಸ್ಪರ್ಧೆ: ಸ್ಮಯ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಥಮ ಪ್ರಶಸ್ತಿ

ಮಡಂತ್ಯಾರು :ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಹಾಗೂ ಮಂದಿರದ ಲೋಕಾರ್ಪಣೆ ಸುಸಂದರ್ಭದಲ್ಲಿ ಪಾರೆಂಕಿ ಶ್ರೀ ಮಹಿಷ ಮರ್ದಿನಿ ದೇವಸ್ಥಾನ ಆಯೋಜಿಸಿದ ಶ್ರೀರಾಮ ಮಕ್ಕಳ ಪೋಟೋ ಸ್ಪರ್ಧೆಯಲ್ಲಿ ಸ್ಮಯ ಎಸ್ ಕೋಟ್ಯಾನ್ ಬಳಂಜ ಪ್ರಥಮ ಸ್ಥಾನದೊಂದಿಗೆ ಪ್ರಶಸ್ತಿ ಪಡೆದಿದ್ದಾರೆ.

ಒಂದರಿಂದ ಹತ್ತು ವರ್ಷದೊಳಗಿನ ಮಕ್ಕಳಿಗೆ ಶ್ರೀರಾಮ ದೇವರ ಪೋಟೋ ಸ್ಪರ್ಧೆ ಏರ್ಪಡಿಸಲಾಗಿತ್ತು. ಜಿಲ್ಲೆಯ ನೂರಾರು ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಪ್ರಥಮ, ದ್ವಿತೀಯ, ತೃತೀಯ ಹಾಗೂ 5 ಸಮಾಧಾನಕರ ಬಹುಮಾನ ಘೋಷಿಸಲಾಗಿತ್ತು.

ಸ್ಪರ್ಧೆಯಲ್ಲಿ ಸ್ಮಯ ಎಸ್ ಕೋಟ್ಯಾನ್ ಬಳಂಜ ಪ್ರಥಮ ಸ್ಥಾನ ಪಡೆದರು. ಬೆಳ್ತಂಗಡಿ ದಿವ್ಯ ಸ್ಟುಡಿಯೋದ ಉಮೇಶ್ ಕುಲಾಲ್ ಪೋಟೋ ಕ್ಲಿಕ್ ಮಾಡಿರುತ್ತಾರೆ.

ಇವರು ಸುದ್ದಿ ಉದಯ ವಾರಪತ್ರಿಕೆಯ ಉಪಸಂಪಾದಕ ಸಂತೋಷ್ ಪಿ ಕೋಟ್ಯಾನ್ ಬಳಂಜ ಮತ್ತು ಅಮೃತಾ ಎಸ್ ಕೋಟ್ಯಾನ್ ದಂಪತಿ ಸುಪುತ್ರಿ.

Related posts

ಬೆಳ್ತಂಗಡಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ವೈಜಣ್ಣರವರಿಂದ ಕಲ್ಮಂಜ ರಮೇಶ್ ನಾಯ್ಕ ರವರ ಅಡಿಕೆ ತೋಟ ರಚನೆಯ ಪರಿಶೀಲನೆ

Suddi Udaya

ತೋಟತ್ತಾಡಿ : 9ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ

Suddi Udaya

ಕುದುರೆಮುಖ ಅರಣ್ಯ ವ್ಯಾಪ್ತಿಯಲ್ಲಿ ಭಾರಿ ಕಾಡ್ಗಿಚ್ಚು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ| ಡಿ. ಹೆಗ್ಗಡೆಯವರ ವಿರುದ್ಧ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಹೈಕೋರ್ಟ್ ಮಹತ್ವದ ತೀರ್ಪು

Suddi Udaya

ಜು.26: ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಮಡಂತ್ಯಾರಿನ 4 ಕಡೆಗಳಲ್ಲಿ ಉಚಿತ ಯೋಗ ತರಗತಿ ಆರಂಭ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹ ದಫನ ಮಾಡಿದ ವ್ಯಕ್ತಿ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya
error: Content is protected !!