23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶ್ರೀರಾಮ ಮಕ್ಕಳ ಪೋಟೋ ಸ್ಪರ್ಧೆ: ಸ್ಮಯ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಥಮ ಪ್ರಶಸ್ತಿ

ಮಡಂತ್ಯಾರು :ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಹಾಗೂ ಮಂದಿರದ ಲೋಕಾರ್ಪಣೆ ಸುಸಂದರ್ಭದಲ್ಲಿ ಪಾರೆಂಕಿ ಶ್ರೀ ಮಹಿಷ ಮರ್ದಿನಿ ದೇವಸ್ಥಾನ ಆಯೋಜಿಸಿದ ಶ್ರೀರಾಮ ಮಕ್ಕಳ ಪೋಟೋ ಸ್ಪರ್ಧೆಯಲ್ಲಿ ಸ್ಮಯ ಎಸ್ ಕೋಟ್ಯಾನ್ ಬಳಂಜ ಪ್ರಥಮ ಸ್ಥಾನದೊಂದಿಗೆ ಪ್ರಶಸ್ತಿ ಪಡೆದಿದ್ದಾರೆ.

ಒಂದರಿಂದ ಹತ್ತು ವರ್ಷದೊಳಗಿನ ಮಕ್ಕಳಿಗೆ ಶ್ರೀರಾಮ ದೇವರ ಪೋಟೋ ಸ್ಪರ್ಧೆ ಏರ್ಪಡಿಸಲಾಗಿತ್ತು. ಜಿಲ್ಲೆಯ ನೂರಾರು ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಪ್ರಥಮ, ದ್ವಿತೀಯ, ತೃತೀಯ ಹಾಗೂ 5 ಸಮಾಧಾನಕರ ಬಹುಮಾನ ಘೋಷಿಸಲಾಗಿತ್ತು.

ಸ್ಪರ್ಧೆಯಲ್ಲಿ ಸ್ಮಯ ಎಸ್ ಕೋಟ್ಯಾನ್ ಬಳಂಜ ಪ್ರಥಮ ಸ್ಥಾನ ಪಡೆದರು. ಬೆಳ್ತಂಗಡಿ ದಿವ್ಯ ಸ್ಟುಡಿಯೋದ ಉಮೇಶ್ ಕುಲಾಲ್ ಪೋಟೋ ಕ್ಲಿಕ್ ಮಾಡಿರುತ್ತಾರೆ.

ಇವರು ಸುದ್ದಿ ಉದಯ ವಾರಪತ್ರಿಕೆಯ ಉಪಸಂಪಾದಕ ಸಂತೋಷ್ ಪಿ ಕೋಟ್ಯಾನ್ ಬಳಂಜ ಮತ್ತು ಅಮೃತಾ ಎಸ್ ಕೋಟ್ಯಾನ್ ದಂಪತಿ ಸುಪುತ್ರಿ.

Related posts

ಪ್ರಧಾನಿ ಭಾಷಣ ಕನ್ನಡಕ್ಕೆ ಭಾಷಾಂತರ : ಎಂ.ಎಲ್.ಸಿ ಪ್ರತಾಪಸಿಂಹ ನಾಯಕ್ ರಿಗೆ ರಾಷ್ಟ್ರ ನಾಯಕರ ಮೆಚ್ಚುಗೆ

Suddi Udaya

ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಹಬ್ಬ ಆಚರಣೆ

Suddi Udaya

ಎಲ್‌.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಿಂದ ತಣ್ಣೀರುಬಾವಿ ಕಡಲತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದ ವಾರ್ಷಿಕ ಮಾರಿ ಪೂಜೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಧರ್ಮಸ್ಥಳ ಸಿಎ ಬ್ಯಾಂಕಿಗೆ ಸತತ 3 ನೇ ಬಾರಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಧರ್ಮ ಸಂರಕ್ಷಣ ರಥಯಾತ್ರೆಯ ಆಗಮನ, ಉಜಿರೆಯಲ್ಲಿ ಅದ್ದೂರಿ ಸ್ವಾಗತ

Suddi Udaya
error: Content is protected !!