25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ರಾಜ್ಯಮಟ್ಟದ ವಿಜ್ಞಾನ ಸಮಾವೇಶ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿಗಳ ಎರಡು ತಂಡಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಉಜಿರೆ: ದೇಶದ ಶಾಲಾ ಮಕ್ಕಳಲ್ಲಿ ಸಂಶೋಧನಾ ಪ್ರವೃತ್ತಿ ಬೆಳೆಸುವ ಮತ್ತು ಅವರನ್ನು ವಿಜ್ಞಾನಿಗಳನ್ನಾಗಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಹಮ್ಮಿಕೊಂಡಿದ್ದ 31ನೇ ರಾಜ್ಯಮಟ್ಟದ ವಿಜ್ಞಾನ ಸಮಾವೇಶವು ಕಲಬುರ್ಗಿ ಜಿಲ್ಲೆ ಸೇಡಮ್ ನ ಶ್ರೀ ಕೊತ್ತಲ ಬಸವೇಶ್ವರ ವಿದ್ಯಾಸಂಸ್ಥೆಯಲ್ಲಿ ಜರುಗಿತು.

ಈ ಸಮಾವೇಶದಲ್ಲಿ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ, ಉಜಿರೆ(ರಾಜ್ಯ ಪಠ್ಯಕ್ರಮ)ಇಲ್ಲಿನ 9ನೇ ತರಗತಿಯ ವಿದ್ಯಾರ್ಥಿಗಳಾದ ಅಧೀಷ್ ಬಿ. ಸಿ. ಮತ್ತು ಆಲಾಪ್ ಇವರು ಗ್ರಾಮೀಣ ಹಿರಿಯ ವಿಭಾಗದಲ್ಲಿ “Value addition for agri wastes and weeds” ಎಂಬ ಶೀರ್ಷಿಕೆಯಡಿ ವಿಜ್ಞಾನ ಯೋಜನೆ ಮಂಡಿಸಿರುತ್ತಾರೆ. ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಾದ ಸಚಿನ್ ಭಟ್ ಮತ್ತು ಸುಜನ್ ಗೌಡ ಇವರು ಗ್ರಾಮೀಣ ಕಿರಿಯ ವಿಭಾಗದಲ್ಲಿ “Value Added products of unused Banana fibres” ಎಂಬ ಶೀರ್ಷಿಕೆಯಡಿ ವಿಜ್ಞಾನ ಯೋಜನೆ ಮಂಡಿಸಿರುತ್ತಾರೆ.
ಈ ಎರಡು ತಂಡಗಳು ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತವೆ.

ಈ ಸ್ಪರ್ಧೆಯಲ್ಲಿ ರಾಜ್ಯದಾದ್ಯಂತ ಒಟ್ಟು 121 ತಂಡಗಳು ಭಾಗವಹಿಸಿದ್ದವು.
ಇವರಿಗೆ ಶಿಕ್ಷಕಿಯರಾದ ಶ್ರೀಮತಿ ಧನ್ಯವತಿ ಮತ್ತು ಶ್ರೀಮತಿ ಶೋಭಾ ಎಸ್ ಇವರು ಸಹಕರಿಸಿರುತ್ತಾರೆ. ವಿದ್ಯಾರ್ಥಿಗಳಿಗೆ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿದ್ಯಾ ಲಕ್ಷ್ಮಿ ಎನ್. ನಾಯಕ್ ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿರುತ್ತಾರೆ.

Related posts

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಟೀಂ ಅಭಯಹಸ್ತ ವತಿಯಿಂದ ಅಳದಂಗಡಿ ಸತ್ಯಸಾರಮುಪ್ಪಣ್ಯ ದೈವಸ್ಥಾನದ ಗುಳಿಗ ಸಾನಿಧ್ಯ ಅಭಿವೃದ್ಧಿ ಕಾರ್ಯಕ್ಕೆ ಸಹಕಾರ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಫ್‌ಎಸ್ಎಲ್ ವರದಿ ಬರುವವರೆಗೂ ಎಸ್‌ಐಟಿ ತನಿಖೆ ಸ್ಥಗಿತ: ಗೃಹ ಸಚಿವ ಪರಮೇಶ್ವರ್

Suddi Udaya

ಫೆ.8: ಉಜಿರೆ-ಬೆಳ್ತಂಗಡಿ ಟಿಬಿ ಕ್ರಾಸ್‌ನಲ್ಲಿ ಮಹಾಗಣಪತಿ ಗ್ರಾನೈಟ್ಸ್ & ಟೈಲ್ಸ್ ಶುಭಾರಂಭ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ : ಕಾರ್ಗಿಲ್ ನೆನಪು ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!