July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ರಾಜ್ಯಮಟ್ಟದ ವಿಜ್ಞಾನ ಸಮಾವೇಶ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿಗಳ ಎರಡು ತಂಡಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಉಜಿರೆ: ದೇಶದ ಶಾಲಾ ಮಕ್ಕಳಲ್ಲಿ ಸಂಶೋಧನಾ ಪ್ರವೃತ್ತಿ ಬೆಳೆಸುವ ಮತ್ತು ಅವರನ್ನು ವಿಜ್ಞಾನಿಗಳನ್ನಾಗಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಹಮ್ಮಿಕೊಂಡಿದ್ದ 31ನೇ ರಾಜ್ಯಮಟ್ಟದ ವಿಜ್ಞಾನ ಸಮಾವೇಶವು ಕಲಬುರ್ಗಿ ಜಿಲ್ಲೆ ಸೇಡಮ್ ನ ಶ್ರೀ ಕೊತ್ತಲ ಬಸವೇಶ್ವರ ವಿದ್ಯಾಸಂಸ್ಥೆಯಲ್ಲಿ ಜರುಗಿತು.

ಈ ಸಮಾವೇಶದಲ್ಲಿ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ, ಉಜಿರೆ(ರಾಜ್ಯ ಪಠ್ಯಕ್ರಮ)ಇಲ್ಲಿನ 9ನೇ ತರಗತಿಯ ವಿದ್ಯಾರ್ಥಿಗಳಾದ ಅಧೀಷ್ ಬಿ. ಸಿ. ಮತ್ತು ಆಲಾಪ್ ಇವರು ಗ್ರಾಮೀಣ ಹಿರಿಯ ವಿಭಾಗದಲ್ಲಿ “Value addition for agri wastes and weeds” ಎಂಬ ಶೀರ್ಷಿಕೆಯಡಿ ವಿಜ್ಞಾನ ಯೋಜನೆ ಮಂಡಿಸಿರುತ್ತಾರೆ. ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಾದ ಸಚಿನ್ ಭಟ್ ಮತ್ತು ಸುಜನ್ ಗೌಡ ಇವರು ಗ್ರಾಮೀಣ ಕಿರಿಯ ವಿಭಾಗದಲ್ಲಿ “Value Added products of unused Banana fibres” ಎಂಬ ಶೀರ್ಷಿಕೆಯಡಿ ವಿಜ್ಞಾನ ಯೋಜನೆ ಮಂಡಿಸಿರುತ್ತಾರೆ.
ಈ ಎರಡು ತಂಡಗಳು ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತವೆ.

ಈ ಸ್ಪರ್ಧೆಯಲ್ಲಿ ರಾಜ್ಯದಾದ್ಯಂತ ಒಟ್ಟು 121 ತಂಡಗಳು ಭಾಗವಹಿಸಿದ್ದವು.
ಇವರಿಗೆ ಶಿಕ್ಷಕಿಯರಾದ ಶ್ರೀಮತಿ ಧನ್ಯವತಿ ಮತ್ತು ಶ್ರೀಮತಿ ಶೋಭಾ ಎಸ್ ಇವರು ಸಹಕರಿಸಿರುತ್ತಾರೆ. ವಿದ್ಯಾರ್ಥಿಗಳಿಗೆ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿದ್ಯಾ ಲಕ್ಷ್ಮಿ ಎನ್. ನಾಯಕ್ ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿರುತ್ತಾರೆ.

Related posts

ಜಮ್ಮು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದ ಘೋರ ಭಯೋತ್ಪಾದಕ ದಾಳಿ ಖಂಡನೀಯ: ಅಭಿನಂದನ್ ಹರೀಶ್ ಕುಮಾರ್

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಸಂಘ ಉದ್ಘಾಟನೆ

Suddi Udaya

ಕೃಷಿ ಪಂಪುಗಳ ಸ್ಥಾವರಗಳಿಗೆ ಆಧಾರ್ ಜೋಡಣೆ ಹಿನ್ನಲೆ ಸರಕಾರಿ ರಜಾ ದಿನವಾದ ಆ.24,25 ರಂದು ಬೆಳ್ತಂಗಡಿ ಮೆಸ್ಕಾಂ ಕಛೇರಿ ಕಾರ್ಯನಿರ್ವಹಿಸಲಿದೆ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಕುಡುಮಶ್ರೀ ಟೈಗರ್ಸ್ ಧರ್ಮಸ್ಥಳ ತಂಡದಿಂದ ಗೌರವದ ಸನ್ಮಾನ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಓಟ್ ಚೋರ್ ಗದ್ದಿ ಚೋರ್ ಅಭಿಯಾನ ಹಾಗೂ ಮುಂಡಾಜೆ ಬೂತ್ ಪ್ರಗತಿ ಸಭೆ

Suddi Udaya

ಕಡಬದ ನವ ಜೀವನ ಸದಸ್ಯರಿಂದ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರ ಭೇಟಿ

Suddi Udaya
error: Content is protected !!