March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.31-ಫೆ.1: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

ನಾವೂರು: ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ ಕಾರ್ಯಕ್ರಮವು ಜ.31 ರಿಂದ ಫೆ.1 ರವರೆಗೆ ನಡೆಯಲಿದೆ.

ಜ.31 ಬೆಳಿಗ್ಗೆ 7.00ರಿಂದ ಗಣಹೋಮ, ಶ್ರೀ ದೇವರಿಗೆ ಪಂಚವಿಂಶತಿ ಕಲಶ, ದೇವರಿಗೆ ನವಕ ಕಲಶ, ನಾಗದೇವರಿಗೆ ಕಲಶ ಪ್ರಸನ್ನ ಪೂಜೆ, ದೇವರಿಗೆ ಕಲಶಾಭಿಷೇಕ, ಪ್ರತಿಷ್ಠಾ ವರ್ಧಂತ್ಯುತ್ಸವ, ಬೆಳಿಗ್ಗೆ 8.30ಕ್ಕೆ ಕೈಕಂಬ ಪೇಟೆ ಬಳಿಯಿಂದ ಇಂದಬೆಟ್ಟು, ನಾವೂರು, ನಡ, ಕನ್ಯಾಡಿ ಗ್ರಾಮಸ್ಥರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ., ಮಧ್ಯಾಹ್ನ 12.00 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

ಫೆ.1 ರಂದು ಬೆಳಿಗ್ಗೆ ಗಣಹೋಮ, ದೇವರ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ ಪ್ರಸಾದ ವಿತರಣೆ. ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ 6.00 ರಿಂದ ಕಮ್ಮಟ ಭಜನೋತ್ಸವ, ರಾತ್ರಿ 7.30 ಕ್ಕೆ ರಂಗಪೂಜೆ, ಧಾರ್ಮಿಕ ಸಭೆ, ರಾತ್ರಿ 9.30 ರಿಂದ ವಿಜಯ್ ಕುಮಾರ್ ಕೊಡಿಯಲ್ ಬೈಲು ನಿರ್ದೇಶನದಲ್ಲಿ ಕಲಾಸಂಗಮ ಕಲಾವಿದರಿಂದ ವಿಭಿನ್ನ ಶೈಲಿಯ ಶಿವದೂತೆ ಗುಳಿಗೆ ತುಳು ನಾಟಕ ನಡೆಯಲಿದೆ.

ಫೆ.20 ರಂದು ಸಂಜೆ 5.30 ರಿಂದ ಭೀಷ್ಮೈಕಾದಶಿ , ವಿಷ್ಣು ಸಹಸ್ರನಾಮ ಜಯಂತಿ ಆಚರಣೆ ಹಾಗೂ ಮಾತೃಸಂಗಮ ಕಾರ್ಯಕ್ರಮದಂಗವಾಗಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ.

Related posts

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

Suddi Udaya

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

Suddi Udaya

ಬೆಳಾಲು ಗ್ರಾ.ಪಂ.ನಲ್ಲಿ ಪ್ರಕೃತಿ ವಿಕೋಪ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಸಭೆ

Suddi Udaya

ಶಿಬಾಜೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ಯಾತ್ರೆ

Suddi Udaya

ಜಿಲ್ಲಾಮಟ್ಟದ ಕನ್ನಡ ಪ್ರಬಂಧ ಸ್ಪರ್ಧೆ: ವೇಣೂರು ಸ. ಪ್ರೌಢ ಶಾಲಾ ವಿದ್ಯಾರ್ಥಿ ಅನ್ವಿತಾ ಎ ಪ್ರಥಮ ಸ್ಥಾನ

Suddi Udaya

ಇತಿಹಾಸ ಪ್ರಸಿದ್ಧ ಕಾಜೂರು ಉರೂಸ್ ಸಾರ್ವಜನಿಕ ಸಮಾವೇಶ

Suddi Udaya
error: Content is protected !!