23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.31-ಫೆ.1: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

ನಾವೂರು: ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ ಕಾರ್ಯಕ್ರಮವು ಜ.31 ರಿಂದ ಫೆ.1 ರವರೆಗೆ ನಡೆಯಲಿದೆ.

ಜ.31 ಬೆಳಿಗ್ಗೆ 7.00ರಿಂದ ಗಣಹೋಮ, ಶ್ರೀ ದೇವರಿಗೆ ಪಂಚವಿಂಶತಿ ಕಲಶ, ದೇವರಿಗೆ ನವಕ ಕಲಶ, ನಾಗದೇವರಿಗೆ ಕಲಶ ಪ್ರಸನ್ನ ಪೂಜೆ, ದೇವರಿಗೆ ಕಲಶಾಭಿಷೇಕ, ಪ್ರತಿಷ್ಠಾ ವರ್ಧಂತ್ಯುತ್ಸವ, ಬೆಳಿಗ್ಗೆ 8.30ಕ್ಕೆ ಕೈಕಂಬ ಪೇಟೆ ಬಳಿಯಿಂದ ಇಂದಬೆಟ್ಟು, ನಾವೂರು, ನಡ, ಕನ್ಯಾಡಿ ಗ್ರಾಮಸ್ಥರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ., ಮಧ್ಯಾಹ್ನ 12.00 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

ಫೆ.1 ರಂದು ಬೆಳಿಗ್ಗೆ ಗಣಹೋಮ, ದೇವರ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ ಪ್ರಸಾದ ವಿತರಣೆ. ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ 6.00 ರಿಂದ ಕಮ್ಮಟ ಭಜನೋತ್ಸವ, ರಾತ್ರಿ 7.30 ಕ್ಕೆ ರಂಗಪೂಜೆ, ಧಾರ್ಮಿಕ ಸಭೆ, ರಾತ್ರಿ 9.30 ರಿಂದ ವಿಜಯ್ ಕುಮಾರ್ ಕೊಡಿಯಲ್ ಬೈಲು ನಿರ್ದೇಶನದಲ್ಲಿ ಕಲಾಸಂಗಮ ಕಲಾವಿದರಿಂದ ವಿಭಿನ್ನ ಶೈಲಿಯ ಶಿವದೂತೆ ಗುಳಿಗೆ ತುಳು ನಾಟಕ ನಡೆಯಲಿದೆ.

ಫೆ.20 ರಂದು ಸಂಜೆ 5.30 ರಿಂದ ಭೀಷ್ಮೈಕಾದಶಿ , ವಿಷ್ಣು ಸಹಸ್ರನಾಮ ಜಯಂತಿ ಆಚರಣೆ ಹಾಗೂ ಮಾತೃಸಂಗಮ ಕಾರ್ಯಕ್ರಮದಂಗವಾಗಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ.

Related posts

ಕುಂಟಿನಿ ಸ.ಕಿ.ಪ್ರಾ. ಶಾಲೆಯ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಇರ್ಫಾನ್ ಕುಂಟಿನಿ ಪುನರಾಯ್ಕೆ

Suddi Udaya

ನ.23: ಅಳದಂಗಡಿ ಪಾಲಬೆಯಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya

ಉಜಿರೆ ಬೆನಕ ಆಸ್ಪತ್ರೆಯಲ್ಲಿ ಮಾಜಿ ಸೈನಿಕರ ನಗದು ರಹಿತ ಚಿಕಿತ್ಸಾ ಯೋಜನೆಯ ಉದ್ಘಾಟನೆ ಹಾಗೂ ಸನ್ಮಾನ

Suddi Udaya

ಬೆಳ್ತಂಗಡಿ ವಿವಿಧ ಮಹಿಳಾ ಮಂಡಲಗಳ ಸಹಭಾಗಿತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆ, ಮಹಿಳಾ ವಾಹನ ಜಾಥಾ ಕಾರ್ಯಕ್ರಮ

Suddi Udaya

ಶಿಬರಾಜೆ ಪಾದೆ ಕುಶಾನಿ ರವರ ಹುಟ್ಟುಹಬ್ಬದ ಪ್ರಯುಕ್ತ ಅಂಗನವಾಡಿಗೆ ಚಾಪೆ ಕೊಡುಗೆ

Suddi Udaya

ಶಿಬಾಜೆ ಬರ್ಗುಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು: ರೂ.25 ಲಕ್ಷ ಪರಿಹಾರ ನೀಡುವಂತೆ ಮೆಸ್ಕಾಂ ಇಲಾಖೆಗೆ ಶಾಸಕ ಹರೀಶ್ ಪೂಂಜಾ ಆಗ್ರಹ

Suddi Udaya
error: Content is protected !!