September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.31-ಫೆ.1: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

ನಾವೂರು: ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ ಕಾರ್ಯಕ್ರಮವು ಜ.31 ರಿಂದ ಫೆ.1 ರವರೆಗೆ ನಡೆಯಲಿದೆ.

ಜ.31 ಬೆಳಿಗ್ಗೆ 7.00ರಿಂದ ಗಣಹೋಮ, ಶ್ರೀ ದೇವರಿಗೆ ಪಂಚವಿಂಶತಿ ಕಲಶ, ದೇವರಿಗೆ ನವಕ ಕಲಶ, ನಾಗದೇವರಿಗೆ ಕಲಶ ಪ್ರಸನ್ನ ಪೂಜೆ, ದೇವರಿಗೆ ಕಲಶಾಭಿಷೇಕ, ಪ್ರತಿಷ್ಠಾ ವರ್ಧಂತ್ಯುತ್ಸವ, ಬೆಳಿಗ್ಗೆ 8.30ಕ್ಕೆ ಕೈಕಂಬ ಪೇಟೆ ಬಳಿಯಿಂದ ಇಂದಬೆಟ್ಟು, ನಾವೂರು, ನಡ, ಕನ್ಯಾಡಿ ಗ್ರಾಮಸ್ಥರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ., ಮಧ್ಯಾಹ್ನ 12.00 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

ಫೆ.1 ರಂದು ಬೆಳಿಗ್ಗೆ ಗಣಹೋಮ, ದೇವರ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ ಪ್ರಸಾದ ವಿತರಣೆ. ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ 6.00 ರಿಂದ ಕಮ್ಮಟ ಭಜನೋತ್ಸವ, ರಾತ್ರಿ 7.30 ಕ್ಕೆ ರಂಗಪೂಜೆ, ಧಾರ್ಮಿಕ ಸಭೆ, ರಾತ್ರಿ 9.30 ರಿಂದ ವಿಜಯ್ ಕುಮಾರ್ ಕೊಡಿಯಲ್ ಬೈಲು ನಿರ್ದೇಶನದಲ್ಲಿ ಕಲಾಸಂಗಮ ಕಲಾವಿದರಿಂದ ವಿಭಿನ್ನ ಶೈಲಿಯ ಶಿವದೂತೆ ಗುಳಿಗೆ ತುಳು ನಾಟಕ ನಡೆಯಲಿದೆ.

ಫೆ.20 ರಂದು ಸಂಜೆ 5.30 ರಿಂದ ಭೀಷ್ಮೈಕಾದಶಿ , ವಿಷ್ಣು ಸಹಸ್ರನಾಮ ಜಯಂತಿ ಆಚರಣೆ ಹಾಗೂ ಮಾತೃಸಂಗಮ ಕಾರ್ಯಕ್ರಮದಂಗವಾಗಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮ

Suddi Udaya

ಎಕ್ಸೆಲ್ ಅಧ್ಯಕ್ಷರಿಂದ ಭಗವಾನ್ ಬಾಹುಬಲಿಗೆ ಗಂಧಾಭಿಷೇಕ

Suddi Udaya

ಇಂದು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಕೆ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾಚಿಂತನೆ

Suddi Udaya

ಉಜಿರೆ ಬ್ರಹ್ಮಕಲಶೋತ್ಸವ ಬೆಂಗಳೂರು ಸಮಿತಿ ಸಭೆ

Suddi Udaya

ಅಪಘಾತದಲ್ಲಿ ಮೃತರಾದ ಪ್ರೈಸ್ ಮ್ಯಾಥ್ಯೂ ರವರಿಗೆ ಬೆಳ್ತಂಗಡಿಯಲ್ಲಿ ಅಂತಿಮ ನಮನ: ಅಂತ್ಯಸಂಸ್ಕಾರಕ್ಕಾಗಿ ಕೇರಳದ ಇರಟ್ಟಿಗೆ ಪಾರ್ಥಿವ ಶರೀರ ರವಾನೆ

Suddi Udaya
error: Content is protected !!