25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಳ: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

ನ್ಯಾಯತರ್ಪು: ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ ಹಾಗೂ ನೂತನ ಚಂದ್ರಮಂಡಲ ರಥ ಮತ್ತು ಪಲ್ಲಕ್ಕಿ ಸಮರ್ಪಣಾ ಕಾರ್ಯಕ್ರಮವು ಜ.22ರಿಂದ ಜ.30ರವರೆಗೆ ದೇವಳದ ತಂತ್ರಿಗಳಾದ ಬ್ರಹ್ಮಶ್ರೀ ಬಾಲಕೃಷ್ಣ ಪಾಂಗಾಣ್ಣಾಯ ಮಾರ್ಗದರ್ಶನದಲ್ಲಿ ಹಾಗೂ ದೇವಸ್ಥಾನದ ಪ್ರಧಾನ ಅರ್ಚಕರಾದ ವೇ.ಮೂ.ರಾಘವೇಂದ್ರ ಅಸ್ರಣ್ಣರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಲಿರುವುದು.

ಇಂದು (ಜ.24 ) ಊರವರಿಂದ ಭವ್ಯ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆಯು ನಡೆಯಿತು.

ನಂತರ ಧ್ವಜಾರೋಹಣ, ಮಹಾಪೂಜೆ, ನಿತ್ಯಬಲಿ, ಸಂಜೆ ದೇವರ ಬಲಿ ಹೊರಟು ಉತ್ಸವ, ವಸಂತಕಟ್ಟೆಯಲ್ಲಿ ಪೂಜೆ, ಮಹಾಪೂಜೆ-ನಿತ್ಯಬಲಿ, ದೀಪದ ಬಲಿ, ರಾತ್ರಿ ಅಂಗನವಾಡಿ ಕೇಂದ್ರ ಗೋವಿಂದೂರು, ಅಂಗನವಾಡಿ ಕೇಂದ್ರ, ರಕ್ತೇಶ್ವರಿಪದವು, ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಕೊರಂಜ, ಸರಕಾರಿ ಪ್ರೌಢಶಾಲೆ ಗೇರುಕಟ್ಟೆ ಹಾಗೂ ಸ್ಥಳೀಯರಿಂದ ಸಾಂಸ್ಕೃತಿಕ ಕಾರ್ಯಕ್ರಮವು ನಡೆಯಲಿದೆ.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಭುವನೇಶ್ ಗೇರುಕಟ್ಟೆ, ಸದಸ್ಯರಾದ ವಸಂತ ಮಜಲು, ಜನಾರ್ಧನ ಪೂಜಾರಿ, ಶ್ರೀಮತಿ ಅಂಬಾ ಬಿ ಆಳ್ವ, ಶ್ರೀಮತಿ ವಿಜಯ ಎಚ್. ಪ್ರಸಾದ್, ಉಮೇಶ್ ಕೆ. ಕೇಲ್ದಡ್ಕ, ರಾಜೇಶ್ ಶೆಟ್ಟಿ ಅಡ್ಡಕೊಡಂಗೆ, ದಿನೇಶ್ ಗೌಡ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾಧವ ಗೌಡ ಮುದ್ದುಂಜ, ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಜೇಶ್ ಪೆಂರ್ಬುಡ, ಭಜನಾ ಮಂಡಳಿ ಅಧ್ಯಕ್ಷ ಉಮೇಶ್ ಶೆಟ್ಟಿ ಸಂಬೋಳ್ಯ,ಪ್ರದಾನ ಕಾರ್ಯದರ್ಶಿ ಲೋಕೇಶ್ ಕುಮಾರ್ ಎನ್, ಶ್ರೀ ದುರ್ಗಾ ಮಾತೃ ಮಂಡಳಿ ಅಧ್ಯಕ್ಷರು, ಸದಸ್ಯರು, ದೇವಸ್ಥಾನದ ಪ್ರಬಂಧಕರು, ಜಾತ್ರಾ ಮಹೋತ್ಸವದ ವಿವಿಧ ಸಮಿತಿ ಪದಾಧಿಕಾರಿಗಳು ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಭಿತ್ತಿಪತ್ರಿಕೆ ಸ್ಪರ್ಧೆ

Suddi Udaya

ಶಿಬಾಜೆಯಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯದ ಪ್ರಯುಕ್ತ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತ್ರ್

Suddi Udaya

ವೇಣೂರು: ದಿ| ರಾಜೇಂದ್ರ ರಾವ್ ಎಚ್ ರವರಿಗೆ ನುಡಿನಮನ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಕಳೆಂಜ ಗ್ರಾ. ಪಂ. ನಲ್ಲಿ ಪ್ರತಿಭಟನೆ

Suddi Udaya
error: Content is protected !!