July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ತವ್ಯದ ವೇಳೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ ಆರೋಪ: ಇಬ್ಬರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ಸರಕಾರಿ ಕರ್ತವ್ಯದ ವೇಳೆ ತಹಶೀಲ್ದಾರ್ ಮೇಲೆ ಇಬ್ಬರು ಹಲ್ಲೆಗೆ ಯತ್ನಿಸಿರುವ ಘಟನೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ‌.

ಮದಡ್ಕದ ನಿವಾಸಿ ನಿಸಾರ್ ಮತ್ತು ಆತನ ಸಹೋದರ ರೌಫ್ ಎಂಬಿಬ್ಬರನ್ನು ಜ.24 ರಂದು(ಇಂದು) ಮಧ್ಯಾಹ್ನ ವಶಕ್ಕೆ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಘಟನೆ ವಿವರ: ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಪೃಥ್ವಿ ಸಾನಿಕಂ ರವರು ಜ.18 ರಂದು ಬೆಳಿಗ್ಗೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದ್ದಡ್ಕ ಎಂಬಲ್ಲಿ ಸರಕಾರಿ ಜಾಗದ ಒತ್ತುವರಿಯಾಗಿರುವ ಬಗ್ಗೆ ಪರಿಶೀಲನೆಗಾಗಿ ಕಂದಾಯ ನಿರೀಕ್ಷಕರು , ಗ್ರಾಮ ಅಭಿವೃದ್ದಿ ಅಧಿಕಾರಿಯವರೊಂದಿಗೆ ಸದ್ರಿ ಜಾಗಕ್ಕೆ ಸರಕಾರಿ ವಾಹನದಲ್ಲಿ ತೆರಳಿ ಪರಿಶೀಲನೆ ನಡೆಸುತ್ತಿದ್ದರು.


ಸದ್ರಿ ಸ್ಥಳವನ್ನು ಒತ್ತುವರಿಸಿದ ನಿಸಾರ್‌ ಮತ್ತು ರೌಫ್‌ ಎಂಬವರುಗಳು ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಮೇಲೆ ಹಲ್ಲೆ ಮಾಡಲು ಪ್ರಯತ್ನಿಸಿರುತ್ತಾರೆ ಹಾಗೂ ಸ್ಥಳದಲ್ಲಿದ್ದ ಕಂದಾಯ ನಿರೀಕ್ಷಕರ ಪ್ರತೀಶ್ ಗೆ ಅವಾಚ್ಯ ಶಬ್ದಗಳಿಂದ ಬೈದು ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗ ಉಂಟು ಮಾಡಿದ್ದಾರೆ ಎಂದು ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ನೀಡಿದ ದೂರಿನ ಮೇರೆಗೆ ಜ.19 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಐಪಿಸಿ 353, 504 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು‌‌.

Related posts

ಶೌರ್ಯ ಇಂಟರ್ ನ್ಯಾಷನಲ್ ಕರಾಟೆ ಚಾಂಪಿಯನ್ ಶಿಪ್: ಉಜಿರೆ ಅನುಗ್ರಹ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ನಿಶಾನ್ ಎಚ್ ಪೂಜಾರಿ ಗೆ ಚಿನ್ನದ ಪದಕ

Suddi Udaya

ರೆಖ್ಯ: ಅಕ್ರಮವಾಗಿ ಲಾರಿಯಲ್ಲಿ ಅಕೇಷಿಯ ಮತ್ತು ಮ್ಯಾಜಿಯಂ ಮಿಶ್ರಿತ ಬಿಲ್ಲೆಟ್ಸ್ ಸಾಗಾಟ:

Suddi Udaya

ಪೆರಾಡಿಯಲ್ಲಿ ‘ಸರಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಪ್ರೌ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ನಿವೃತ್ತ ಮುಖ್ಯ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಸೇವಾ ಟ್ರಸ್ಟ್, ರೋಟರಿ ಬೆಂಗಳೂರು ಇಂದಿರಾ ನಗರ,ಕ್ಯಾನ್ ಪಿನ್ ಹೋಮ್ಸ್ ಲಿಮಿಟೆಡ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಉಜಿರೆ ಅನುಗ್ರಹ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!