ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಾರ್ಷಿಕ ಮಹೋತ್ಸವ ಪ್ರಾರಂಭ

ನೆಲ್ಯಾಡಿ : ಬೆಳ್ತಂಗಡಿ ಧರ್ಮ ಪ್ರಾಂತ್ಯದ ಏಕೈಕ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವವು ಜ.19 ಶುಕ್ರವಾರ ಸಂತ ಅಲ್ಫೋನ್ಸ ಸ್ವರೂಪ ಕ್ಕೆ ವಿಶೇಷ ದೂಪ ಪ್ರಾರ್ಥನೆ ಸಮರ್ಪಿಸುವ ಮೂಲಕ ವಿದ್ಯುಕ್ತ ಚಾಲನೆ ನೀಡಲಾಯಿತು. ದೇಶ ವಿದೇಶ ಗಳಿಂದ ಸಂತ ಅಲ್ಫೋನ್ಸ ರಲ್ಲಿ ವಿಶೇಷ ಕೋರಿಕೆ ಗಳನ್ನಿಟ್ಟು ಒಂಬತ್ತು ದಿನಗಳ ನೋವೇನಾದಲ್ಲಿ ಭಾಗವಹಿಸಿ ಹರಕೆ ತೀರಿಸುವುದು ಇಲ್ಲಿನ ವಾಡಿಕೆ.

ನೂರಾರು ವಿದ್ಯಾರ್ಥಿಗಳು ಉತ್ತಮ ಫಲಿತಾಂಶಕ್ಕಾಗಿ ಸಂತ ಅಲ್ಫೋನ್ಸ ರಲ್ಲಿ ಹಬ್ಬದ ಮುಖ್ಯ ದಿನವಾದಜ.27ನೇ ಶನಿವಾರ ರಾತ್ರಿ ಪ್ರಾರ್ಥನೆಯನ್ನು ಸಲ್ಲಿಸುವರು. ಶನಿವಾರ ಸಂಜೆ 4.30ಕ್ಕೆ ಹಬ್ಬದ ಮುಖ್ಯ ಬಲಿಪೂಜೆ ನಡೆಯಲಿದೆ. ಬೆಂಗಳೂರಿನ ಸುಮನಹಳ್ಳಿ ಕ್ಲಾರಿಷನ್ ಸಭೆಯ ವಂದನಿಯ ಧ್ಯಾನ ಗುರು ಫಾ. ಟೋಮ್ ಸಿ ಎಂ ಎಫ್ ಅವರು ವಿಧಾನ ಪೂರ್ವಕ ದಿವ್ಯ ಬಲಿಪೂಜೆ ಮತ್ತು ಪೂಜಾ ವಿಧಿಗಳನ್ನು ನೆರವೇರಿಸಲಿರುವರು. ವಂದನಿಯ
ಫಾ. ವರ್ಗೀಸ್ ಕೈಪನಡ್ಕ ಫಾ. ಜೈಸನ್ ಬೆಥನಿ, ಫಾ. ಜೇಮ್ಸ್ ಬೆಥನಿ ವಿದ್ಯಾಲಯ ಇದರಲ್ಲಿ ಬಾಗವಹಿಸಲಿರುವರು. ನೆಲ್ಯಾಡಿ ಪೇಟೆ ಸುತ್ತಿ ಆಕರ್ಷಕ ಹಬ್ಬದ ಮೆರವಣಿಗೆ ನಡೆಯಲಿದೆ.
ಕೊನೆಯ ದಿನವಾದ 28ನೇ ಆದಿತ್ಯವಾರ ಅತಿವಿಧಾನ ಪೂರ್ವಕ ರಾಸ ಬಲಿಪೂಜೆ ವಂದನಿಯ ಫಾ. ಕ್ರಿಸ್ಟಿ ಸುಳ್ಯ,ಫಾ. ಜೋಸೆಫ್ ಓ ಸಿ ಡಿ ಫಾ. ಬಿಬಿನ್,ಫಾ. ಶಾಜಿ ಮಾತ್ಯು ಧರ್ಮ ಗುರುಗಳು ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರ ನೆಲ್ಯಾಡಿ ಭಾಗವಹಿಸಲಿದ್ದಾರೆ.

ಶನಿವಾರ ರಾತ್ರಿ ಏಶಿಯನೆಟ್ ಕೋಮೆಡಿ ಎಕ್ಸ್ ಪ್ರೆಸ್ ಪ್ರಸ್ತುತ ಪಡಿಸುವ ಹಾಸ್ಯ ಸಂಗೀತ, ರಸ ಸಂಜೆ ಅನ್ನ ಸಂತರ್ಪಣೆ ನಡೆಯಲಿದೆ.

Related posts

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಮೆಹಂದಿ ಡಿಸೈನ್ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಕೊಕ್ರಾಡಿ: ಭೀಕರ ರಸ್ತೆ ಅಪಘಾತ

Suddi Udaya

ಮಡಂತ್ಯಾರು ಸುವೇಗ ಮೋಟಾರ್ಸ್ ನಲ್ಲಿ ಹೀರೊ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಗೆ ಬಿಡುಗಡೆ

Suddi Udaya

ಧರ್ಮಸ್ಥಳ: ಪೊಸೊಳಿಕೆಯಲ್ಲಿ ರಬ್ಬರ್ ಒಣಗಿಸುವ ‘ಸ್ಮೋಕ್ ಹೌಸ್’ ಕಟ್ಟಡಕ್ಕೆ ಬೆಂಕಿ; ಲಕ್ಷಾಂತರ ರೂ ನಷ್ಟ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ತೆಕ್ಕಾರು: ಬಾಜಾರು ನಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ: ಹಲವು ಮರಗಳು ಬೆಂಕಿಗಾಹುತಿ

Suddi Udaya
error: Content is protected !!