25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳಾಲು ಯಕ್ಷ ಮಾಣಿಕ್ಯ ಕಲಾ ಸಂಘ ಉದ್ಘಾಟನೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಬೆಳಾಲು ಯಕ್ಷ ಮಾಣಿಕ್ಯ ಕಲಾ ಸಂಘ ಆರಂಭವಾಯಿತು. ಕಲಾ ಸಂಘದ ಉದ್ಘಾಟನೆಯನ್ನು ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ಚೊಕ್ಕಾಡಿಯವರು ನೆರವೇರಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಸಿದ್ದಪ್ಪ ಗೌಡ, ಕಾರ್ಯದರ್ಶಿ ಶಶಿಧರ ಕೆ. ಗೊಲ್ಲ, ಖಜಾಂಚಿ ದಿವಾಕರ ಬೈಪಾಡಿ ಮತ್ತು ಭಾಸ್ಕರ ಶರ್ಮ ಕೊಲ್ಪಾಡಿ, ನಾಟ್ಯಗುರು ದಿನೇಶ್ ಮಾರ್ಪಾಲು, ಜನಾರ್ದನ ಪೂಜಾರಿ ಶಾಂತಿಗುಡ್ಡೆ ರವಿ ಶಾಂತಿಗುಡ್ಡೆ, ಸುಮಿತ್ ಆಚಾರ್ ಅನಂತೋಡಿ, ಪ್ರಭಾಕರ ಮಾಪಲ ಮೊದಲಾದವರು ಉಪಸ್ಥಿತರಿದ್ದರು.

ಈದಿನ ನಾಟ್ಯ ತರಗತಿಯನ್ನೂ ಆರಂಭಿಸಲಾಯಿತು. ಪ್ರತೀ ಆದಿತ್ಯವಾರದಂದು ಉಚಿತ ಯಕ್ಷಗಾನ ನಾಟ್ಯ ತರಗತಿ ನಡೆಯಲಿದೆ ಎಂದು ಅಧ್ಯಕ್ಷರು ತಿಳಿಸಿದರು. ದಿನೇಶ್ ಮಾರ್ಪಾಲುರವರು ನಾಟ್ಯ ಗುರುಗಳಾಗಿ ನಾಟ್ಯ ತರಬೇತಿಯನ್ನು ನೀಡಲಿದ್ದಾರೆ.

Related posts

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಆರ್ ಎಸ್ ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ

Suddi Udaya

ವಾಲಿಬಾಲ್ ಪಂದ್ಯಾಟ: ಚಂದ್ರಶೇಖರ ಗೌಡ ಕೊಯ್ಯೂರು ದ್ವಿತೀಯ ಸ್ಥಾನ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಶ್ರೀ ಕ್ಷೇತ್ರ ಸೌತಡ್ಕಕ್ಕೆ ಹಸಿರು ಕಾಣಿಕೆ ಸಮರ್ಪಣೆ

Suddi Udaya

ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯ ಪ್ರಯುಕ್ತ ‘ಸೇಪ್ಟಿ ರೈಡ್’ ಜಾಗೃತಿ ಅಭಿಯಾನ

Suddi Udaya

ಇಂದಬೆಟ್ಟು-ನಾವೂರು ವಿಶ್ವ ಹಿಂದೂ ಪರಿಷತ್ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬೆಳ್ತಂಗಡಿ ಸ.ಮಾ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಊಟದ ತಟ್ಟೆ ವಿತರಣೆ

Suddi Udaya
error: Content is protected !!