September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಲಾಯಿಲ: ವಿಘ್ನೇಶ್ವರ ಕಲಾ ಮಂದಿರದಲ್ಲಿ ರಾಮ ನಾಮ ತಾರಕ ಮಂತ್ರ ಹಾಗೂ 1,111 ಹಣತೆಗಳ ಪ್ರಜ್ವಲನೆ ಸಹಿತ ಶ್ರೀ ರಾಮ ದೇವರಿಗೆ ಮಹಾ ಮಂಗಳಾರತಿ

ಲಾಯಿಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಲಾಯಿಲ ಹಾಗೂ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಲಾಯಿಲ ಇದರ ಆಶ್ರಯದಲ್ಲಿ ಆಯೋಧ್ಯ ಪ್ರಭು ಶ್ರೀ ರಾಮಲಲ್ಲನ ಪ್ರಾಣ ಪ್ರತಿಷ್ಠೆಯ ಅಂಗವಾಗಿ ಲಾಯಿಲದ ವಿಘ್ನೇಶ್ವರ ಕಲಾ ಮಂದಿರದಲ್ಲಿ ರಾಮ ನಾಮ ತಾರಕ ಮಂತ್ರ ಹಾಗೂ 1,111 ಹಣತೆಗಳ ದೀಪ ಪ್ರಜ್ವಲನ ಕಾರ್ಯಕ್ರಮವನ್ನು ಲಾಯಿಲ ವೆಂಕಟರಮಣ ದೇವಸ್ಥಾನದ ಪ್ರಧಾನ ಅರ್ಚಕರಾದ ವೆ|ಮೂ| ಶ್ರೀ ಶ್ರೀನಿವಾಸ್ ಭಟ್ ಇವರು ದೀಪ ಬೆಳಗುವುದರ ಮೂಲಕ ಚಾಲನೆ ನೀಡಿದರು..

ಬಳಿಕ ಲಾಯಿಲ ಬಲಮುರಿ ಗಣಪತಿ ಭಜನಾ ಮಂಡಳಿಯ ಎಲ್ಲಾ ಭಜಕರಿಗೆ ತನ್ನ ವೈಯುಕ್ತಿಕ ನೆಲೆಯಲ್ಲಿ ಶಾಲು ಹಾಕಿ ಗೌರವಿಸಿದರು. ರಾಮತಾರಕ ಮಂತ್ರವನ್ನು ಅರ್ಚಕರಾದ ಸ್ವಸ್ತಿಕ್ ಭಟ್ ಪುಂಜಾಲಕಟ್ಟೆ ಇವರು ಎಲ್ಲರಿಗೂ ಹೇಳಿಕೊಟ್ಟರು. ನಂತರ 1,111 ಹಣತೆಗಳ ದೀಪ ಪ್ರಜ್ವಲನೇಯ ಜೊತೆ ಶ್ರೀ ರಾಮ ದೇವರಿಗೆ ಮಹಾ ಮಂಗಳಾರತಿ ನೆರವೇರಿತು..

ಈ ಸಂದರ್ಭದಲ್ಲಿ ಸುಡುಮದ್ದು ಪ್ರದರ್ಶನ ನಡೆಯಿತು. ಸಮಿತಿಯ ಸಲಹೆಗಾರರದ ಗಿರೀಶ್ ಡೋಂಗ್ರೆಯವರು ಎಲ್ಲರಿಗೂ ಸಿಹಿಯ ವ್ಯವಸ್ಥೆಯನ್ನು ಮಾಡಿದರು. ಕಾರ್ಯಕ್ರಮದಲ್ಲಿ 2 ಸಮಿತಿಯ ಸದಸ್ಯರುಗಳು, ಬಲಮುರಿ ಗಣಪತಿ ಭಜನಾ ಮಂಡಳಿಯ ಸಂಚಾಲಕರುಗಳು, ಭಜಕರು ಮಹಿಳಾ ಭಜನಾ ತಂಡದವರು ಹಾಗೂ ಸ್ಥಳೀಯ ರಾಮ ಭಕ್ತರು ಭಾಗವಹಿಸಿದರು.

ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಅರವಿಂದ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ಕಾರ್ಯದರ್ಶಿ ಗಣೇಶ್ ಲಾಯಿಲ ಧನ್ಯವಾದವಿತ್ತರು.

Related posts

ಉಜಿರೆ ಶ್ರೀ ಜನಾರ್ದನ ದೇವಸ್ಥಾನವರ್ಷಾವಧಿ ಜಾತ್ರಾ ಮಹೋತ್ಸವ ಆರಂಭ

Suddi Udaya

ಉಜಿರೆ ಶ್ರೀ ಧ.ಮಂ. ಪದವಿ ಕಾಲೇಜಿನ ಎಂಟರ್ಪ್ರಿನಾರ್ಶಿಪ್ ಡೆವಲಪ್ಮೆಂಟ್ ಸೆಲ್ಲ್ ವಿಭಾಗದ ವತಿಯಿಂದ ಪ್ರೋಡಕ್ಟ್ ಲಾಂಚ್

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವ ಮತ್ತು ಯೋಧ ನಮನ ಕಾರ್ಯಕ್ರಮ

Suddi Udaya

ವಿಧಾನ ಸಭಾ ಚುನಾವಣೆ: ಸಿ.ಆರ್.ಪಿ.ಎಫ್ ತಂಡ ಬೆಳ್ತಂಗಡಿಗೆ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಬ್ರಹ್ಮಕುಂಭಾಭಿಷೇಕ

Suddi Udaya

ನೂರುಲ್ ಹುಧಾ ದರ್ಸ್ ವಾರ್ಷಿಕ ಹಾಗೂ ಬುರ್ದಾ ಮಜಲಿಸ್ ಸಮಾರಂಭದಲ್ಲಿ ಭೂನ್ಯಾಯ ಮಂಡಳಿಗೆ ನಾಮ ನಿರ್ದೇಶನ ಹೊಂದಿದ ಇಸ್ಮಾಯಿಲ್ ಕೆ ಪೆರಿಂಜೆ ರವರಿಗೆ ಗೌರವಾರ್ಪಣೆ

Suddi Udaya
error: Content is protected !!