23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಲಾಯಿಲ: ವಿಘ್ನೇಶ್ವರ ಕಲಾ ಮಂದಿರದಲ್ಲಿ ರಾಮ ನಾಮ ತಾರಕ ಮಂತ್ರ ಹಾಗೂ 1,111 ಹಣತೆಗಳ ಪ್ರಜ್ವಲನೆ ಸಹಿತ ಶ್ರೀ ರಾಮ ದೇವರಿಗೆ ಮಹಾ ಮಂಗಳಾರತಿ

ಲಾಯಿಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಲಾಯಿಲ ಹಾಗೂ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಲಾಯಿಲ ಇದರ ಆಶ್ರಯದಲ್ಲಿ ಆಯೋಧ್ಯ ಪ್ರಭು ಶ್ರೀ ರಾಮಲಲ್ಲನ ಪ್ರಾಣ ಪ್ರತಿಷ್ಠೆಯ ಅಂಗವಾಗಿ ಲಾಯಿಲದ ವಿಘ್ನೇಶ್ವರ ಕಲಾ ಮಂದಿರದಲ್ಲಿ ರಾಮ ನಾಮ ತಾರಕ ಮಂತ್ರ ಹಾಗೂ 1,111 ಹಣತೆಗಳ ದೀಪ ಪ್ರಜ್ವಲನ ಕಾರ್ಯಕ್ರಮವನ್ನು ಲಾಯಿಲ ವೆಂಕಟರಮಣ ದೇವಸ್ಥಾನದ ಪ್ರಧಾನ ಅರ್ಚಕರಾದ ವೆ|ಮೂ| ಶ್ರೀ ಶ್ರೀನಿವಾಸ್ ಭಟ್ ಇವರು ದೀಪ ಬೆಳಗುವುದರ ಮೂಲಕ ಚಾಲನೆ ನೀಡಿದರು..

ಬಳಿಕ ಲಾಯಿಲ ಬಲಮುರಿ ಗಣಪತಿ ಭಜನಾ ಮಂಡಳಿಯ ಎಲ್ಲಾ ಭಜಕರಿಗೆ ತನ್ನ ವೈಯುಕ್ತಿಕ ನೆಲೆಯಲ್ಲಿ ಶಾಲು ಹಾಕಿ ಗೌರವಿಸಿದರು. ರಾಮತಾರಕ ಮಂತ್ರವನ್ನು ಅರ್ಚಕರಾದ ಸ್ವಸ್ತಿಕ್ ಭಟ್ ಪುಂಜಾಲಕಟ್ಟೆ ಇವರು ಎಲ್ಲರಿಗೂ ಹೇಳಿಕೊಟ್ಟರು. ನಂತರ 1,111 ಹಣತೆಗಳ ದೀಪ ಪ್ರಜ್ವಲನೇಯ ಜೊತೆ ಶ್ರೀ ರಾಮ ದೇವರಿಗೆ ಮಹಾ ಮಂಗಳಾರತಿ ನೆರವೇರಿತು..

ಈ ಸಂದರ್ಭದಲ್ಲಿ ಸುಡುಮದ್ದು ಪ್ರದರ್ಶನ ನಡೆಯಿತು. ಸಮಿತಿಯ ಸಲಹೆಗಾರರದ ಗಿರೀಶ್ ಡೋಂಗ್ರೆಯವರು ಎಲ್ಲರಿಗೂ ಸಿಹಿಯ ವ್ಯವಸ್ಥೆಯನ್ನು ಮಾಡಿದರು. ಕಾರ್ಯಕ್ರಮದಲ್ಲಿ 2 ಸಮಿತಿಯ ಸದಸ್ಯರುಗಳು, ಬಲಮುರಿ ಗಣಪತಿ ಭಜನಾ ಮಂಡಳಿಯ ಸಂಚಾಲಕರುಗಳು, ಭಜಕರು ಮಹಿಳಾ ಭಜನಾ ತಂಡದವರು ಹಾಗೂ ಸ್ಥಳೀಯ ರಾಮ ಭಕ್ತರು ಭಾಗವಹಿಸಿದರು.

ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಅರವಿಂದ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ಕಾರ್ಯದರ್ಶಿ ಗಣೇಶ್ ಲಾಯಿಲ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಮಳೆಲ್ ಓರ್ ನಾಲ್ ಕ್ರೀಡಾಕೂಟ

Suddi Udaya

ಗುರುವಂದನೆ- ಶಿಕ್ಷಕರ ದಿನಾಚರಣೆಗೆ ಮುಳಿಯ ಜ್ಯುವೆಲ್ಸ್‌ನಿಂದ ವಿಶೇಷ ಕೊಡುಗೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಿಂದ ವರ್ಗಾವಣೆಗೊಂಡ ಪ್ರಾಂಶುಪಾಲರು ಬಾಲಕೃಷ್ಣ ಬೇರಿಕೆಯವರಿಗೆ ಬೀಳ್ಕೊಡುಗೆ

Suddi Udaya

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಬಂಧನ ವಿರೋಧಿಸಿ ಬೆಳ್ತಂಗಡಿ ಬಿಜೆಪಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲ ಹಾಗೂ ಮಹಿಳಾ ಮೋರ್ಚಾದ ಕಾರ್ಯಗಾರದ ಜೊತೆಯಲ್ಲಿ ಆಟಿಡೊಂಜಿ ದಿನ ಹಾಗೂ ಪೋಷನ್ ಪಕ್ವಾಡ್ ಕಾರ್ಯಕ್ರಮ,

Suddi Udaya

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಮಹಾವೀರ ಅರಿಗ, ಉಪಾಧ್ಯಕ್ಷರಾಗಿ ತುಕಾರಾಮ್ ಬಿ.

Suddi Udaya
error: Content is protected !!