ಜ.27,30: ಕೊಕ್ಕಡ ಮಾಯಿಲಕೋಟೆ ಸೀಮೆ ಕ್ಷೇತ್ರದಲ್ಲಿ ನಾಗಪ್ರತಿಷ್ಠೆ ಮತ್ತು ವಾರ್ಷಿಕ ನೇಮೋತ್ಸವ

Suddi Udaya

ಕೊಕ್ಕಡ: ಮಾಯಿಲಕೋಟೆ ಸೀಮೆ ದೈವಸ್ಥಾನ ಟ್ರಸ್ಟ್ (ರಿ.) ಕೊಕ್ಕಡದಲ್ಲಿ ಕ್ಷೇತ್ರದ ತಂತ್ರಿಗಳಾದ ಕೆ.ಯು ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಜ.27 ಮತ್ತು ಜ.30 ರಂದು ನಾಗಪ್ರತಿಷ್ಠೆ ಮತ್ತು ವಾರ್ಷಿಕ ನೇಮೋತ್ಸವವು ನಡೆಯಲಿದೆ.

ಜ.26ರಂದು ಸಂಜೆ 7 ಗಂಟೆಗೆ ಸಾಮೂಹಿಕ ಪ್ರಾರ್ಥನೆ, ಪುಣ್ಯಾಹ, ಪ್ರಸಾದ ಶುದ್ಧಿ, ರಾಕ್ಷೋಘ್ನ ವಾಸ್ತು ಹೋಮ, ಜಲಧಿವಾಸ, ವಾಸ್ತು ಬಲಿ, ಬಿಂಬ ಪ್ರಸಾದ, ಪಾಣಿಗ್ರಹ, ಅನ್ನಸಂತರ್ಪಣೆ, ಜ.27ರಂದು ಬೆಳಿಗ್ಗೆ ಗಂಟೆ 7ರಿಂದ ಗಣಹೋಮ, ಬಿಂಬ ಶುದ್ಧಿ, ಕಲಶ ಪೂಜೆ, ಚಿತ್ರಕೂಟ ಪ್ರತಿಷ್ಠೆ, ನಾಗಪ್ರತಿಷ್ಠೆ, ಚೋರ ಶಾಂತಿ ಹೋಮ, ಜಲಾಭಿಷೇಕ, ಕ್ಷೀರಾಭಿಷೇಕ, ಬಿಂಬ ಅಭಿಷೇಕ, ಆಶ್ಲೇಷ ಬಲಿ, ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ, ಹಾಗೂ ಜ.30 ರಂದು ಬೆಳಿಗ್ಗೆ 10.00 ಗಂಟೆಗೆ ದೈವಗಳಿಗೆ ತಂಬಿಲ ಸೇವೆ, ಸಂಜೆ ಗಂಟೆ 6.00ರಿಂದ ಶ್ರೀ ಕಲ್ಲುರ್ಟಿ, ವರ್ಣಾರ ಪಂಜುರ್ಲಿ, ಕೋಟೆ ಚಾಮುಂಡಿ ಮತ್ತು ಗುಳಿಗ ದೈವಗಳ ನೇಮೋತ್ಸವವು ನಡೆಯಲಿದೆ.

Leave a Comment

error: Content is protected !!