September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮದ್ದಡ್ಕ ವತಿಯಿಂದ 3 ಜೋಡಿ ಸರಳ ಸಮೂಹಿಕ ವಿವಾಹ

ಬೆಳ್ತಂಗಡಿ; ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮದ್ದಡ್ಕ ಇದರ ವತಿಯಿಂದ ಏಕದಿನ ಪ್ರಭಾಷಣ ಹಾಗೂ ಎರಡನೇ ವರ್ಷದ ಸರಳ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಮೂರು ಅರ್ಹ ಕುಟುಂಬದ ಹೆಣ್ಣು ಮಕ್ಕಳು ನವಜೀವನಕ್ಕೆ ಕಾಲಿರಿಸಿದರು.

ನೂರುಲ್ ಹುದಾ ಜುಮ್ಮಾ ಮಸ್ಜಿದ್ ಪಕ್ಕದ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆದ ಸರಳ ಸಾಮೂಹಿಕ ವಿವಾಹ ಸಮಾರಂಭದ ನೇತೃತ್ವವನ್ನು ಜಿಲ್ಲಾ ಸಂಯುಕ್ತ ಜಮಾಅತ್ ಖಾಝಿ ಸಯ್ಯಿದ್ ಕೂರತ್ ತಂಙಳ್ ವಹಿಸಿದ್ದರು. ತಾಲೂಕು ಸಹಾಯಕ ಖಾಝಿ ಸಾದಾತ್ ತಂಙಳ್ ಉದ್ಘಾಟನೆ ನೆರವೇರಿಸಿದರು. ಜಾಮಿಯಾ ಸ‌ಅದಿಯಾ ಅರೆಬಿಯಾ ಕಾಸರಗೋಡು ಇದರ ಪ್ರಾಚಾರ್ಯ ಕೆ.ಸಿ ರೋಡ್ ಹುಸೈನ್ ಸ‌ಅದಿ ಮುಖ್ಯ ಪ್ರಭಾಷಣ ನಡೆಸಿದರು.

ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಅಧ್ಕಕ್ಷ ಎಂ ಹೈದರ್ ಮದ್ದಡ್ಕ ವಹಿಸಿದ್ದರು. ಸ್ಥಳೀಯ ಖತೀಬ್
ಹಸನ ಮುಬಾರಕ್ ಸಖಾಫಿ ವಿವಾಹ ಖುತುಬಾ ಪಾರಾಯಣ ನಡೆಸಿದರು.
ಸಮಾರಂಭದಲ್ಲಿ ಖದೀಜತುಲ್ ಖುಬ್‌ರಾ- ಮುಹಮ್ಮದ್ ರಫೀಕ್, ಆಯಿಶತ್ ಸ್ವಾಬಿರಾ- ಮುಹಮ್ಮದ್ ಝಹೀರ್ ಫಾಳಿಲಿ, ಹಾಗೂ ಅಫ್ರೀನ್ – ಮುಹಮ್ಮದ್ ಜಾವಿದ್ ಇವರನ್ನು ವರಿಸುವ ಮೂಲಕ ವಿವಾಹ ಕಾರ್ಯವು ಸಂಪನ್ನಗೊಂಡಿತು.

ನೂತನ ವಧುಗಳಿಗೆ ತಲಾ 3 ಪವನ್ ಚಿನ್ನಾಭರಣ ಮತ್ತು ವಸ್ರ್ತ ಖರೀದಿಗೆ 15 ಸಾವಿರ ರೂ. ನಗದು, ಹಾಗೂ ವರರಿಗೆ ವಾಚ್, ವಸ್ರ್ತ ಖರೀದಿಗೆ10 ಸಾವಿರ ರೂ. ನಗದು ನೀಡಲಾಯಿತು.

ಸಮಾರಂಭದಲ್ಲಿ ಖಾಝಿ ಕೂರತ್ ತಂಙಳ್ ರನ್ನು ವಿಶೇಷ ನಿಲುವಂಗಿ ತೊಡಿಸಿ ಸನ್ಮಾನಿಸಲಾಯಿತು. ಸಾದಾತ್ ತಂಙಳ್, ವಾದಿ ಇರ್ಫಾನ್ ತಂಙಳ್, ಎಸ್. ಎಂ ತಂಙಳ್, ಮದ್ದಡ್ಮ ಜಮಾಅತ್ ಅಧ್ಯಕ್ಷ ಅಶ್ರಫ್ ಚಿಲಿಂಬಿ, ಡಾ. ಅಬ್ದುಲ್ ರಶೀದ್ ಝೈನಿ ಅಲ್ ಕಾಮಿಲ್ ಸಖಾಫಿ, ಎಂ ಉಮರಬ್ಬ ಮದ್ದಡ್ಕ, ವಿವಾಹ ಸಮಿತಿ ಅಧ್ಯಕ್ಷ ಉಸ್ಮಾನ್ ಹಾಜಿ ಆಲಂದಿಲ, ಎಂ ಸಿರಾಜ್ ಚಿಲಿಂಬಿ, ಮಹಮ್ಮದ್ ರಫೀಕ್ ಅಹ್ಸನಿ ಒಕ್ಕೆತ್ತೂರು, ಮುಹಮ್ಮದ್ ಶರೀಫ್ ಲೆತ್ವೀಫಿ, ಮುಹಮ್ಮದ್ ಶರೀಫ್ ಮದನಿ, ಮುಹಮ್ಮದ್ ಸಿನಾನ್ ಸಖಾಫಿ, ಇಬ್ರಾಹಿಂ ಮುಸ್ಲಿಯಾರ್, ಅಬ್ದುಲ್ ರಝಾಕ್ ಸಖಾಫಿ, ಮುಹಮ್ಮದ್ ಶಫೀಕ್ ಮದನಿ, ಮುಹಮ್ಮದ್ ಬಶೀರ್ ಲೆತ್ವೀಫಿ, ದಾವೂದ್ ಗುರುವಾಯನಕೆರೆ, ರಿಯಾಝ್ ಸಬರಬೈಲು, ಇರ್ಷಾದ್ ಪೊಲೀಸ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

ಧಾರ್ಮಿಕ ಪ್ರವಚನದಂಗವಾಗಿ ತೋಕೆ ಸಖಾಫಿ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಸಯ್ಯಿದ್ ಕಾಜೂರು ತಂಙಳ್ ನೇತೃತ್ವ ವಹಿಸಿದ್ದರು. ಯಾಕೂಬ್ ಮುಸ್ಲಿಯಾರ್ ಪಣಕಜೆ ಸಹಿತ ಸ್ಥಳೀಯ ಹಾಗೂ ಅನೇಕ ಮಂದಿ ಆಹ್ವಾನಿತ ಗಣ್ಯರು ಭಾಗಿಯಾಗಿದ್ದರು.

ರಾಝಿಯುದ್ದೀನ್ ಸಬರಬೈಲು ವರದಿ ವಾಚಿಸಿದರು.ಉಮರ್ ಮಾಸ್ಟರ್ ಮದ್ದಡ್ಕ ಸ್ವಾಗತಿಸಿ ಪ್ರಸ್ತಾವನೆಗೈದರು. ಎಚ್.ಎಸ್ ಹಸನಬ್ಬ ಸಹಿತ ಪದಾಧಿಕಾರಿಗಳು ಸಹಕರಿಸಿದರು. ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ಕಾರ್ಯಕ್ರಮ‌ ನಿರೂಪಿಸಿದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ಮತ್ತು ಲಯನ್ ಸೇವಾ ಟ್ರಸ್ಟ್ ವತಿಯಿಂದ ವಿವಿಧ ಸಂಸ್ಥೆಗಳಿಗೆ ರೂ. 1ಲಕ್ಷ ಸಹಾಯಧನ

Suddi Udaya

ಮುಂಡಾಜೆ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ ಗೆ ರಾಜ್ಯ ಪ್ರಶಸ್ತಿ

Suddi Udaya

ಉಜಿರೆಯ ಸಭ್ಯಾ ಹೆಬ್ಬಾರ್ ಗೆ ಪಿಎಚ್ ಡಿ ಪದವಿ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಅಭಿವಂದನಾ ಕಾರ್ಯಕ್ರಮ: ಚಲನಚಿತ್ರ ನಟ ವಿಜಯ ರಾಘವೇಂದ್ರ ಭಾಗಿ

Suddi Udaya

ವೇಣೂರು: ನಿಟ್ಟಡೆ ಕುಂಭಶ್ರೀ ಶಿಕ್ಷಣ ಸಂಸ್ಥೆಗೆ ‘ಶಿಕ್ಷಣ ಭೀಷ್ಮ ಪ್ರಶಸ್ತಿ’ಯ ಗರಿ

Suddi Udaya

ಹದಗೆಟ್ಟ ಬಸ್ತಿ -ಪೆರಿಯಡ್ಕ ರಸ್ತೆ: ಶ್ರಮದಾನದ ಮೂಲಕ ಹೊಂಡ ಮುಚ್ಚುವ ಕಾರ್ಯ

Suddi Udaya
error: Content is protected !!