25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಪರಪ್ಪು ಉರೂಸ್ ಸಮಾರೋಪ ಸಮಾರಂಭ

ಗೇರುಕಟ್ಟೆ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ರವರ ಹೆಸರಿನಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುವ ಉರೂಸ್ ಕಾರ್ಯಕ್ರಮದ ಸಮಾರೋಪ ಸಮಾರಂಭವು ಜ. 20ರಂದು ನಡೆಯಿತು.
ದ.ಕ ಜಿಲ್ಲಾ ಸಂಯುಕ್ತ ಖಾಝಿಗಳಾದ ಶೈಖುನಾ ಖರ್ರತುಸ್ಸಾದಾತ್ ಫಝಲ್ ಕೋಯಮ್ಮ ತಂಙಳ್ ರವರ ಘನ ಅಧ್ಯಕ್ಷತೆಯಲ್ಲಿ ನಡೆಯಿತು.


ನೂರುಸ್ಸಾದಾತ್ ಅಸ್ಸಯ್ಯದ್ ಅಬ್ದುರ್ರಹ್ಮಾನ್ ಇಂಬಿಚ್ಚಿ ಕೋಯ ತಂಙಳ್ ದುವಾಶೀರ್ವಚನ ನೆರವೇರಿಸಿದರು.
ಸದರ್ ಮುಅಲ್ಲಿಮ್ ಅಬೂಬಕ್ಕರ್ ಸಿದ್ದೀಕ್ ಮುಈನಿ ಸ್ವಾಗತಿಸಿ, ಜಾರಿಗೆಬೈಲು ಮಸೀದಿಯ ಮುದರ್ರಿಸ್ ರಾದ ಮುಹಮ್ಮದ್ ಯಾಸಿರ್ ಫಾಝಿಲ್ ಅಲ್- ಫುರ್ಖಾನಿ ಉದ್ಘಾಟಿಸಿದರು.
ಪರಪ್ಪು ಖತೀಬರಾದ ಮುಹಮ್ಮದ್ ತಾಜುದ್ದೀನ್ ಸಖಾಫಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಪ್ರಭಾಷಣವನ್ನು ಕೇರಳದ ಪ್ರಮುಖ ವಿದ್ವಾಂಸ ಮುಸ್ತಫಾ ಸಖಾಫಿ ತೆನ್ನಲ ನಡೆಸಿದರು.


ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಹಾಜಿ ಹಸನಬ್ಬ ಚಾರ್ಮಾಡಿಯವರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ನೂರುದ್ದೀನ್ ಝುಹ್ ರಿ, ಜುನೈದ್ ಆಝ್ ಹರಿ, ಹಸೈನಾರ್ ಸಅದಿ, ಅಬ್ಬಾಸ್ ಹಿಶಾಮಿ, ಸಿದ್ದೀಕ್ ಕಾಜೂರು, ಅಬೂಬಕ್ಕರ್ ಹಾಜಿ, ಅಬ್ದುಲ್ ಬಶೀರ್, ಪಿ.ಬಿ. ಸಂಶೀರ್ ಸಖಾಫಿ, ಮುಸ್ತಫಾ ಹಿಮಮಿ,ಇಕ್ಬಾಲ್ ಮರ್ ಝೂಕಿ, ಅಬೂಬಕ್ಕರ್ ಮರ್ ಝೂಕಿ, ಬಿ.ಎಂ. ಸಿದ್ದೀಕ್ ಸಖಾಫಿ,ನಝೀರ್ ಅಹ್ಸನಿ, ಅಬ್ದುಲ್ ಕರೀಮ್ ಗೇರುಕಟ್ಟೆ, ಹನೀಫ್ ಬಿ.ಐ,ಪಿ.ಬಿ. ಖಾದರ್ ಹಾಜಿ, ರವೂಫ್ ಹಾಜಿ, ಬಿ.ಎಂ. ಆದಂ ಹಾಜಿ, ಹಾಗೂ ಇತರ ಹಲವಾರು ಗಣ್ಯರು ಉಪಸ್ಥಿತರಿದ್ದರು.

Related posts

ಉಜಿರೆಯಲ್ಲಿ 550 ಕೆಜಿ ತೂಕದ ಮಡಲ್ ಮೀನು: ಖರೀದಿಸಲು ಮುಗಿಬಿದ್ದ ಗ್ರಾಹಕರು

Suddi Udaya

ಜ.14: ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಯಕ್ಷೋತ್ಸವ : ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮ ದಿನದ ಸಂಭ್ರಮಾಚರಣೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣು ಯಕ್ಷಗಾನ ತಂಡದಿಂದ ಯಕ್ಷಗಾನ ಮಕ್ಕಳಿಗೆ ಸಮವಸ್ತ್ರ ವಿತರಣೆ

Suddi Udaya

ನೇತ್ರಾವತಿ ನದಿಯಲ್ಲಿ ಬಿದ್ದು ಮಂಜೊಟ್ಟಿಯ ಯುವಕ ಮೃತ್ಯು

Suddi Udaya

ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಬೆಹರಿನ್ ಇಂಡಿಯಾ ಇಂಟರ್ ನ್ಯಾಷನಲ್ ಅವಾರ್ಡ್ ಪ್ರದಾನ

Suddi Udaya
error: Content is protected !!