23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಪರಪ್ಪು ಉರೂಸ್ ಸಮಾರೋಪ ಸಮಾರಂಭ

ಗೇರುಕಟ್ಟೆ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ರವರ ಹೆಸರಿನಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುವ ಉರೂಸ್ ಕಾರ್ಯಕ್ರಮದ ಸಮಾರೋಪ ಸಮಾರಂಭವು ಜ. 20ರಂದು ನಡೆಯಿತು.
ದ.ಕ ಜಿಲ್ಲಾ ಸಂಯುಕ್ತ ಖಾಝಿಗಳಾದ ಶೈಖುನಾ ಖರ್ರತುಸ್ಸಾದಾತ್ ಫಝಲ್ ಕೋಯಮ್ಮ ತಂಙಳ್ ರವರ ಘನ ಅಧ್ಯಕ್ಷತೆಯಲ್ಲಿ ನಡೆಯಿತು.


ನೂರುಸ್ಸಾದಾತ್ ಅಸ್ಸಯ್ಯದ್ ಅಬ್ದುರ್ರಹ್ಮಾನ್ ಇಂಬಿಚ್ಚಿ ಕೋಯ ತಂಙಳ್ ದುವಾಶೀರ್ವಚನ ನೆರವೇರಿಸಿದರು.
ಸದರ್ ಮುಅಲ್ಲಿಮ್ ಅಬೂಬಕ್ಕರ್ ಸಿದ್ದೀಕ್ ಮುಈನಿ ಸ್ವಾಗತಿಸಿ, ಜಾರಿಗೆಬೈಲು ಮಸೀದಿಯ ಮುದರ್ರಿಸ್ ರಾದ ಮುಹಮ್ಮದ್ ಯಾಸಿರ್ ಫಾಝಿಲ್ ಅಲ್- ಫುರ್ಖಾನಿ ಉದ್ಘಾಟಿಸಿದರು.
ಪರಪ್ಪು ಖತೀಬರಾದ ಮುಹಮ್ಮದ್ ತಾಜುದ್ದೀನ್ ಸಖಾಫಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಪ್ರಭಾಷಣವನ್ನು ಕೇರಳದ ಪ್ರಮುಖ ವಿದ್ವಾಂಸ ಮುಸ್ತಫಾ ಸಖಾಫಿ ತೆನ್ನಲ ನಡೆಸಿದರು.


ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಹಾಜಿ ಹಸನಬ್ಬ ಚಾರ್ಮಾಡಿಯವರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ನೂರುದ್ದೀನ್ ಝುಹ್ ರಿ, ಜುನೈದ್ ಆಝ್ ಹರಿ, ಹಸೈನಾರ್ ಸಅದಿ, ಅಬ್ಬಾಸ್ ಹಿಶಾಮಿ, ಸಿದ್ದೀಕ್ ಕಾಜೂರು, ಅಬೂಬಕ್ಕರ್ ಹಾಜಿ, ಅಬ್ದುಲ್ ಬಶೀರ್, ಪಿ.ಬಿ. ಸಂಶೀರ್ ಸಖಾಫಿ, ಮುಸ್ತಫಾ ಹಿಮಮಿ,ಇಕ್ಬಾಲ್ ಮರ್ ಝೂಕಿ, ಅಬೂಬಕ್ಕರ್ ಮರ್ ಝೂಕಿ, ಬಿ.ಎಂ. ಸಿದ್ದೀಕ್ ಸಖಾಫಿ,ನಝೀರ್ ಅಹ್ಸನಿ, ಅಬ್ದುಲ್ ಕರೀಮ್ ಗೇರುಕಟ್ಟೆ, ಹನೀಫ್ ಬಿ.ಐ,ಪಿ.ಬಿ. ಖಾದರ್ ಹಾಜಿ, ರವೂಫ್ ಹಾಜಿ, ಬಿ.ಎಂ. ಆದಂ ಹಾಜಿ, ಹಾಗೂ ಇತರ ಹಲವಾರು ಗಣ್ಯರು ಉಪಸ್ಥಿತರಿದ್ದರು.

Related posts

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಮಚ್ಚಿನ: ನೂತನ ವಿದ್ಯುತ್ ಕಂಬ ಅಳವಡಿಕೆ : ಸುದ್ದಿ ಉದಯ ಫಲಶ್ರುತಿ

Suddi Udaya

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಸ್ವಚ್ಛತಾ ಹಿ ಸೇವಾ’ ಸಪ್ತಾಹ ಕಾರ್ಯಕ್ರಮ

Suddi Udaya

ರುಡ್ ಸೆಟ್ ಸಂಸ್ಥೆಯಲ್ಲಿ ಗೃಹೋಪಯೋಗಿ ವಿದ್ಯುತ್‌ ಉಪಕರಣ ಸೇವಾ ಉದ್ಯಮಿ ತರಬೇತಿಯ ಸಮಾರೋಪ

Suddi Udaya

ನಿಡ್ಲೆ ಸ.ಪ್ರೌ. ಶಾಲೆಯ ವಿದ್ಯಾರ್ಥಿಗಳಿಗೆ ಆಹಾರ ನಿರ್ವಹಣೆ ಮತ್ತು ಸಾಮಾಜಿಕ ಜವಾಬ್ದಾರಿ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಧರ್ಮಸ್ಥಳ: ದೊಂಡೋಲೆ ಸುಧೆಕ್ಕಾರಿನ ನಿವಾಸಿ ಅನಿಲ್ ಶಾಸ್ತ್ರಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!