September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.31-ಫೆ.1: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

ನಾವೂರು: ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ ಕಾರ್ಯಕ್ರಮವು ಜ.31 ರಿಂದ ಫೆ.1 ರವರೆಗೆ ನಡೆಯಲಿದೆ.

ಜ.31 ಬೆಳಿಗ್ಗೆ 7.00ರಿಂದ ಗಣಹೋಮ, ಶ್ರೀ ದೇವರಿಗೆ ಪಂಚವಿಂಶತಿ ಕಲಶ, ದೇವರಿಗೆ ನವಕ ಕಲಶ, ನಾಗದೇವರಿಗೆ ಕಲಶ ಪ್ರಸನ್ನ ಪೂಜೆ, ದೇವರಿಗೆ ಕಲಶಾಭಿಷೇಕ, ಪ್ರತಿಷ್ಠಾ ವರ್ಧಂತ್ಯುತ್ಸವ, ಬೆಳಿಗ್ಗೆ 8.30ಕ್ಕೆ ಕೈಕಂಬ ಪೇಟೆ ಬಳಿಯಿಂದ ಇಂದಬೆಟ್ಟು, ನಾವೂರು, ನಡ, ಕನ್ಯಾಡಿ ಗ್ರಾಮಸ್ಥರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ., ಮಧ್ಯಾಹ್ನ 12.00 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

ಫೆ.1 ರಂದು ಬೆಳಿಗ್ಗೆ ಗಣಹೋಮ, ದೇವರ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ ಪ್ರಸಾದ ವಿತರಣೆ. ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ 6.00 ರಿಂದ ಕಮ್ಮಟ ಭಜನೋತ್ಸವ, ರಾತ್ರಿ 7.30 ಕ್ಕೆ ರಂಗಪೂಜೆ, ಧಾರ್ಮಿಕ ಸಭೆ, ರಾತ್ರಿ 9.30 ರಿಂದ ವಿಜಯ್ ಕುಮಾರ್ ಕೊಡಿಯಲ್ ಬೈಲು ನಿರ್ದೇಶನದಲ್ಲಿ ಕಲಾಸಂಗಮ ಕಲಾವಿದರಿಂದ ವಿಭಿನ್ನ ಶೈಲಿಯ ಶಿವದೂತೆ ಗುಳಿಗೆ ತುಳು ನಾಟಕ ನಡೆಯಲಿದೆ.

ಫೆ.20 ರಂದು ಸಂಜೆ 5.30 ರಿಂದ ಭೀಷ್ಮೈಕಾದಶಿ , ವಿಷ್ಣು ಸಹಸ್ರನಾಮ ಜಯಂತಿ ಆಚರಣೆ ಹಾಗೂ ಮಾತೃಸಂಗಮ ಕಾರ್ಯಕ್ರಮದಂಗವಾಗಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ.

Related posts

ಸವಣಾಲು ಫಲ್ಗುಣಿ ಕುಣಿತ ಭಜನಾ ತಂಡ ಹಾಗೂ ಶಾಲಾ ಮಕ್ಕಳಿಗೆ ಬ್ಯಾಗ್ ಮತ್ತು ಕೊಡೆ ವಿತರಣೆ

Suddi Udaya

ಪುಂಜಾಲಕಟ್ಟೆ: ಅಕ್ರಮ ಗೋಸಾಗಾಟ ಪ್ರಕರಣ ದಾಖಲು:ಜಾನುವಾರು ನೀಡಿದ ಮಾಲೀಕನ ಮನೆ ಮತ್ತು ಕೊಟ್ಟಿಗೆ ಒಪ್ತಿ

Suddi Udaya

ಮಲೆಬೆಟ್ಟು ಹಾ.ಉ.ಸಂ. ನಿರ್ದೇಶಕ ಪ್ರವೀಣ್ ಪೂಜಾರಿ ಬಿಜೆಪಿ ಸೇರ್ಪಡೆ

Suddi Udaya

ಉಜಿರೆ: ಜಿಲ್ಲಾ ಮಟ್ಟದ ಶ್ರೀಮದ್ಭಗವದ್ಗೀತಾ ಸ್ಪರ್ಧೆಗಳ ಬಹುಮಾನ ವಿತರಣಾ ಸಮಾರಂಭ

Suddi Udaya

ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾಟ: ಉಜಿರೆ ಅನುಗ್ರಹ ಆಂ.ಮಾ. ಶಾಲಾ ವಿದ್ಯಾರ್ಥಿ ನಿಶಾನ್ ಹೆಚ್.ಪೂಜಾರಿ ಪ್ರಥಮ ಸ್ಥಾನ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಲಾಯಿಲದಲ್ಲಿ ಕೆಟ್ಟು ನಿಂತ ಕೆಎಸ್ ಆರ್ ಟಿ ಸಿ ಬಸ್ಸು: ಟ್ರಾಫಿಕ್ ಜಾಮ್

Suddi Udaya
error: Content is protected !!