25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳಾಲು ಯಕ್ಷ ಮಾಣಿಕ್ಯ ಕಲಾ ಸಂಘ ಉದ್ಘಾಟನೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಬೆಳಾಲು ಯಕ್ಷ ಮಾಣಿಕ್ಯ ಕಲಾ ಸಂಘ ಆರಂಭವಾಯಿತು. ಕಲಾ ಸಂಘದ ಉದ್ಘಾಟನೆಯನ್ನು ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ಚೊಕ್ಕಾಡಿಯವರು ನೆರವೇರಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಸಿದ್ದಪ್ಪ ಗೌಡ, ಕಾರ್ಯದರ್ಶಿ ಶಶಿಧರ ಕೆ. ಗೊಲ್ಲ, ಖಜಾಂಚಿ ದಿವಾಕರ ಬೈಪಾಡಿ ಮತ್ತು ಭಾಸ್ಕರ ಶರ್ಮ ಕೊಲ್ಪಾಡಿ, ನಾಟ್ಯಗುರು ದಿನೇಶ್ ಮಾರ್ಪಾಲು, ಜನಾರ್ದನ ಪೂಜಾರಿ ಶಾಂತಿಗುಡ್ಡೆ ರವಿ ಶಾಂತಿಗುಡ್ಡೆ, ಸುಮಿತ್ ಆಚಾರ್ ಅನಂತೋಡಿ, ಪ್ರಭಾಕರ ಮಾಪಲ ಮೊದಲಾದವರು ಉಪಸ್ಥಿತರಿದ್ದರು.

ಈದಿನ ನಾಟ್ಯ ತರಗತಿಯನ್ನೂ ಆರಂಭಿಸಲಾಯಿತು. ಪ್ರತೀ ಆದಿತ್ಯವಾರದಂದು ಉಚಿತ ಯಕ್ಷಗಾನ ನಾಟ್ಯ ತರಗತಿ ನಡೆಯಲಿದೆ ಎಂದು ಅಧ್ಯಕ್ಷರು ತಿಳಿಸಿದರು. ದಿನೇಶ್ ಮಾರ್ಪಾಲುರವರು ನಾಟ್ಯ ಗುರುಗಳಾಗಿ ನಾಟ್ಯ ತರಬೇತಿಯನ್ನು ನೀಡಲಿದ್ದಾರೆ.

Related posts

ಮಚ್ಚಿನ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಪಂಚಾಯತ್ ಗೆ ಎಸ್‌ಡಿಪಿಐ ಮನವಿ

Suddi Udaya

ದ.ಕ.ಜಿ.ಪಂ.ಹಿ. ಪ್ರಾ. ಕೊಡಿಯಾಲಬೈಲು ಶಾಲೆಯಲ್ಲಿ ಸಾಮಾಜಿಕ ಪರಿಶೋಧನಾ ಶಾಲಾ ಪೋಷಕರ ಸಭೆ

Suddi Udaya

ಬಳಂಜ : ಪರಿಸರ ಗಿಡ ನಾಟಿ ಕಾರ್ಯಕ್ರಮ

Suddi Udaya

ಡ್ರಾಯಿಂಗ್ ಗ್ರೇಡ್ ಪರೀಕ್ಷೆ: ಸಮೃದ್ಧ್ ಬಿ.ಎಸ್. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆ: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ ರವರ ಸೇವಾರ್ಥದಲ್ಲಿ 108 ಸೀಯಾಳಭಿಷೇಕ

Suddi Udaya

ಉಜಿರೆ: ಬೈಕ್ ಗೆ ಅನಿಲ ಸಾಗಿಸುತ್ತಿದ್ದ ಟ್ಯಾಂಕ‌ರ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

Suddi Udaya
error: Content is protected !!