23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳಾಲು ಯಕ್ಷ ಮಾಣಿಕ್ಯ ಕಲಾ ಸಂಘ ಉದ್ಘಾಟನೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಬೆಳಾಲು ಯಕ್ಷ ಮಾಣಿಕ್ಯ ಕಲಾ ಸಂಘ ಆರಂಭವಾಯಿತು. ಕಲಾ ಸಂಘದ ಉದ್ಘಾಟನೆಯನ್ನು ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ಚೊಕ್ಕಾಡಿಯವರು ನೆರವೇರಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಸಿದ್ದಪ್ಪ ಗೌಡ, ಕಾರ್ಯದರ್ಶಿ ಶಶಿಧರ ಕೆ. ಗೊಲ್ಲ, ಖಜಾಂಚಿ ದಿವಾಕರ ಬೈಪಾಡಿ ಮತ್ತು ಭಾಸ್ಕರ ಶರ್ಮ ಕೊಲ್ಪಾಡಿ, ನಾಟ್ಯಗುರು ದಿನೇಶ್ ಮಾರ್ಪಾಲು, ಜನಾರ್ದನ ಪೂಜಾರಿ ಶಾಂತಿಗುಡ್ಡೆ ರವಿ ಶಾಂತಿಗುಡ್ಡೆ, ಸುಮಿತ್ ಆಚಾರ್ ಅನಂತೋಡಿ, ಪ್ರಭಾಕರ ಮಾಪಲ ಮೊದಲಾದವರು ಉಪಸ್ಥಿತರಿದ್ದರು.

ಈದಿನ ನಾಟ್ಯ ತರಗತಿಯನ್ನೂ ಆರಂಭಿಸಲಾಯಿತು. ಪ್ರತೀ ಆದಿತ್ಯವಾರದಂದು ಉಚಿತ ಯಕ್ಷಗಾನ ನಾಟ್ಯ ತರಗತಿ ನಡೆಯಲಿದೆ ಎಂದು ಅಧ್ಯಕ್ಷರು ತಿಳಿಸಿದರು. ದಿನೇಶ್ ಮಾರ್ಪಾಲುರವರು ನಾಟ್ಯ ಗುರುಗಳಾಗಿ ನಾಟ್ಯ ತರಬೇತಿಯನ್ನು ನೀಡಲಿದ್ದಾರೆ.

Related posts

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಪೆರಿಂಜೆ ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ದಲಿತ ಮುಖಂಡರ ನಿಯೋಗದಿಂದ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಸಾಗಿದ ಭಕ್ತರು ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಮೆರಗು ನೀಡಿದ ವಾಯ್ಲಿನ್ ಆದ್ಯಾ ಕೇರಳ,ಚೆಂಡೆ ಹಾಗೂ ವಿವಿಧ ವಿನೋದಾವಳಿಗಳು

Suddi Udaya

ಪುದುವೆಟ್ಟು: ಕಾಪಿನಡ್ಕದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ನಾಶ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯಕ್ಕೆ ನೂತನವಾಗಿ ಧರ್ಮಾಧ್ಯಕ್ಷರ ಪದವಿಗೆ ನೇಮಿಸಲ್ಪಟ್ಟಿರುವ ಅತೀ ವಂ| ಫಾ| ಜೇಮ್ಸ್‌ ಪಟ್ಟೇರಿಲ್ ಅವರನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದಿಂದ ಸ್ವಾಗತ

Suddi Udaya
error: Content is protected !!