24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಲಾಯಿಲ: ವಿಘ್ನೇಶ್ವರ ಕಲಾ ಮಂದಿರದಲ್ಲಿ ರಾಮ ನಾಮ ತಾರಕ ಮಂತ್ರ ಹಾಗೂ 1,111 ಹಣತೆಗಳ ಪ್ರಜ್ವಲನೆ ಸಹಿತ ಶ್ರೀ ರಾಮ ದೇವರಿಗೆ ಮಹಾ ಮಂಗಳಾರತಿ

ಲಾಯಿಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಲಾಯಿಲ ಹಾಗೂ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಲಾಯಿಲ ಇದರ ಆಶ್ರಯದಲ್ಲಿ ಆಯೋಧ್ಯ ಪ್ರಭು ಶ್ರೀ ರಾಮಲಲ್ಲನ ಪ್ರಾಣ ಪ್ರತಿಷ್ಠೆಯ ಅಂಗವಾಗಿ ಲಾಯಿಲದ ವಿಘ್ನೇಶ್ವರ ಕಲಾ ಮಂದಿರದಲ್ಲಿ ರಾಮ ನಾಮ ತಾರಕ ಮಂತ್ರ ಹಾಗೂ 1,111 ಹಣತೆಗಳ ದೀಪ ಪ್ರಜ್ವಲನ ಕಾರ್ಯಕ್ರಮವನ್ನು ಲಾಯಿಲ ವೆಂಕಟರಮಣ ದೇವಸ್ಥಾನದ ಪ್ರಧಾನ ಅರ್ಚಕರಾದ ವೆ|ಮೂ| ಶ್ರೀ ಶ್ರೀನಿವಾಸ್ ಭಟ್ ಇವರು ದೀಪ ಬೆಳಗುವುದರ ಮೂಲಕ ಚಾಲನೆ ನೀಡಿದರು..

ಬಳಿಕ ಲಾಯಿಲ ಬಲಮುರಿ ಗಣಪತಿ ಭಜನಾ ಮಂಡಳಿಯ ಎಲ್ಲಾ ಭಜಕರಿಗೆ ತನ್ನ ವೈಯುಕ್ತಿಕ ನೆಲೆಯಲ್ಲಿ ಶಾಲು ಹಾಕಿ ಗೌರವಿಸಿದರು. ರಾಮತಾರಕ ಮಂತ್ರವನ್ನು ಅರ್ಚಕರಾದ ಸ್ವಸ್ತಿಕ್ ಭಟ್ ಪುಂಜಾಲಕಟ್ಟೆ ಇವರು ಎಲ್ಲರಿಗೂ ಹೇಳಿಕೊಟ್ಟರು. ನಂತರ 1,111 ಹಣತೆಗಳ ದೀಪ ಪ್ರಜ್ವಲನೇಯ ಜೊತೆ ಶ್ರೀ ರಾಮ ದೇವರಿಗೆ ಮಹಾ ಮಂಗಳಾರತಿ ನೆರವೇರಿತು..

ಈ ಸಂದರ್ಭದಲ್ಲಿ ಸುಡುಮದ್ದು ಪ್ರದರ್ಶನ ನಡೆಯಿತು. ಸಮಿತಿಯ ಸಲಹೆಗಾರರದ ಗಿರೀಶ್ ಡೋಂಗ್ರೆಯವರು ಎಲ್ಲರಿಗೂ ಸಿಹಿಯ ವ್ಯವಸ್ಥೆಯನ್ನು ಮಾಡಿದರು. ಕಾರ್ಯಕ್ರಮದಲ್ಲಿ 2 ಸಮಿತಿಯ ಸದಸ್ಯರುಗಳು, ಬಲಮುರಿ ಗಣಪತಿ ಭಜನಾ ಮಂಡಳಿಯ ಸಂಚಾಲಕರುಗಳು, ಭಜಕರು ಮಹಿಳಾ ಭಜನಾ ತಂಡದವರು ಹಾಗೂ ಸ್ಥಳೀಯ ರಾಮ ಭಕ್ತರು ಭಾಗವಹಿಸಿದರು.

ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಅರವಿಂದ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ಕಾರ್ಯದರ್ಶಿ ಗಣೇಶ್ ಲಾಯಿಲ ಧನ್ಯವಾದವಿತ್ತರು.

Related posts

ನವೋದಯ ಸ್ವಸಹಾಯ ಸಂಘಗಳ ಮೇಲ್ವಿಚಾರಕ ಕೂಸಪ್ಪ ಕೊಯ್ಯೂರು ಅಸೌಖ್ಯದಿಂದ ನಿಧನ

Suddi Udaya

ಕಕ್ಕಿಂಜೆ ಮನ್ನಡ್ಕಪಾದೆ ಗುಡ್ಡಕ್ಕೆ ಬೆಂಕಿ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಮತ್ತು ಪುತ್ತೂರು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟ‌ರ್ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಕೇಂದ್ರ ತನಿಖಾ ಸಂಸ್ಥೆಯ ಮುಖಾಂತರ ಹೆಚ್ಚಿನ ತನಿಖೆಯನ್ನು ನಡೆಸುವಂತೆ ವೇಣೂರು ಹಿಂದೂ ಜಾಗರಣ ವೇದಿಕೆಯ ವತಿಯಿಂದ ವೇಣೂರು ಪೊಲೀಸರಿಗೆ ಮನವಿ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ರಕ್ಷಿತ್ ಶೆಟ್ಟಿ ಭೇಟಿ

Suddi Udaya
error: Content is protected !!