September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಲಾಯಿಲ: ವಿಘ್ನೇಶ್ವರ ಕಲಾ ಮಂದಿರದಲ್ಲಿ ರಾಮ ನಾಮ ತಾರಕ ಮಂತ್ರ ಹಾಗೂ 1,111 ಹಣತೆಗಳ ಪ್ರಜ್ವಲನೆ ಸಹಿತ ಶ್ರೀ ರಾಮ ದೇವರಿಗೆ ಮಹಾ ಮಂಗಳಾರತಿ

ಲಾಯಿಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಲಾಯಿಲ ಹಾಗೂ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಲಾಯಿಲ ಇದರ ಆಶ್ರಯದಲ್ಲಿ ಆಯೋಧ್ಯ ಪ್ರಭು ಶ್ರೀ ರಾಮಲಲ್ಲನ ಪ್ರಾಣ ಪ್ರತಿಷ್ಠೆಯ ಅಂಗವಾಗಿ ಲಾಯಿಲದ ವಿಘ್ನೇಶ್ವರ ಕಲಾ ಮಂದಿರದಲ್ಲಿ ರಾಮ ನಾಮ ತಾರಕ ಮಂತ್ರ ಹಾಗೂ 1,111 ಹಣತೆಗಳ ದೀಪ ಪ್ರಜ್ವಲನ ಕಾರ್ಯಕ್ರಮವನ್ನು ಲಾಯಿಲ ವೆಂಕಟರಮಣ ದೇವಸ್ಥಾನದ ಪ್ರಧಾನ ಅರ್ಚಕರಾದ ವೆ|ಮೂ| ಶ್ರೀ ಶ್ರೀನಿವಾಸ್ ಭಟ್ ಇವರು ದೀಪ ಬೆಳಗುವುದರ ಮೂಲಕ ಚಾಲನೆ ನೀಡಿದರು..

ಬಳಿಕ ಲಾಯಿಲ ಬಲಮುರಿ ಗಣಪತಿ ಭಜನಾ ಮಂಡಳಿಯ ಎಲ್ಲಾ ಭಜಕರಿಗೆ ತನ್ನ ವೈಯುಕ್ತಿಕ ನೆಲೆಯಲ್ಲಿ ಶಾಲು ಹಾಕಿ ಗೌರವಿಸಿದರು. ರಾಮತಾರಕ ಮಂತ್ರವನ್ನು ಅರ್ಚಕರಾದ ಸ್ವಸ್ತಿಕ್ ಭಟ್ ಪುಂಜಾಲಕಟ್ಟೆ ಇವರು ಎಲ್ಲರಿಗೂ ಹೇಳಿಕೊಟ್ಟರು. ನಂತರ 1,111 ಹಣತೆಗಳ ದೀಪ ಪ್ರಜ್ವಲನೇಯ ಜೊತೆ ಶ್ರೀ ರಾಮ ದೇವರಿಗೆ ಮಹಾ ಮಂಗಳಾರತಿ ನೆರವೇರಿತು..

ಈ ಸಂದರ್ಭದಲ್ಲಿ ಸುಡುಮದ್ದು ಪ್ರದರ್ಶನ ನಡೆಯಿತು. ಸಮಿತಿಯ ಸಲಹೆಗಾರರದ ಗಿರೀಶ್ ಡೋಂಗ್ರೆಯವರು ಎಲ್ಲರಿಗೂ ಸಿಹಿಯ ವ್ಯವಸ್ಥೆಯನ್ನು ಮಾಡಿದರು. ಕಾರ್ಯಕ್ರಮದಲ್ಲಿ 2 ಸಮಿತಿಯ ಸದಸ್ಯರುಗಳು, ಬಲಮುರಿ ಗಣಪತಿ ಭಜನಾ ಮಂಡಳಿಯ ಸಂಚಾಲಕರುಗಳು, ಭಜಕರು ಮಹಿಳಾ ಭಜನಾ ತಂಡದವರು ಹಾಗೂ ಸ್ಥಳೀಯ ರಾಮ ಭಕ್ತರು ಭಾಗವಹಿಸಿದರು.

ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಅರವಿಂದ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ಕಾರ್ಯದರ್ಶಿ ಗಣೇಶ್ ಲಾಯಿಲ ಧನ್ಯವಾದವಿತ್ತರು.

Related posts

ಉಜಿರೆ ಲಕ್ಷ್ಮಿ ಗ್ರೂಪ್ ಮಾಲಕ ಮೋಹನ್ ಕುಮಾರ್ ರವರಿಂದ ಯೋಗಾಸನ ಸ್ಪರ್ಧೆಗೆ ವಿದ್ಯಾರ್ಥಿಗಳಿಗೆ ಯೂನಿಪಾರ್ಮ್ ವಿತರಣೆ

Suddi Udaya

ಬೆಳ್ತಂಗಡಿ ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನಲ್ಲಿ ಜೆಡಿಎಸ್ ಚುನಾವಣಾ ಕಚೇರಿ ಪ್ರಾರಂಭ

Suddi Udaya

ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವಿಶೇಷ ಕಾರ್ಯಕಾರಣಿ ಸಭೆಗೆ ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಭೇಟಿ

Suddi Udaya

ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ: ರಂಗ ಮಂಟಪ ಲೋಕಾರ್ಪಣೆ, ನವದುರ್ಗೆಯರ ಮೂರ್ತಿ ಪ್ರತಿಷ್ಠೆ, ದೇವರ ಪ್ರಭಾವಳಿ ಸಮರ್ಪಣೆ: ಇಂದು (ಫೆ.5) ನವ ಗುಳಿಗಗಳ ವಿಶೇಷ ಗಗ್ಗರ ಸೇವೆ

Suddi Udaya

ಶಟಲ್ ಬ್ಯಾಡ್ಮಿಂಟನ್: ವಾಣಿ ಆಂ.ಮಾ. ಶಾಲೆಯ ಪ್ರಾಥಮಿಕ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!