July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಟೋ ರಿಕ್ಷಾದಲ್ಲಿ ಬಾಡಿಗೆಗೆ ಬಂದ ಚಿಕ್ಕಮಗಳೂರು ನಿವಾಸಿಯ ಮೇಲೆ ಹಲ್ಲೆ , ದರೋಡೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ : ಚಿಕ್ಕಮಗಳೂರು ನಿವಾಸಿ ಈಶ್ವರ ರವರು ಬೆಳ್ತಂಗಡಿಯ ಗುತ್ಯಡ್ಕ ಎಂಬಲ್ಲಿಗೆ ಆಟೋ ರಿಕ್ಷಾದಲ್ಲಿ ಬಾಡಿಗೆಗೆ ಬಂದು ಕೆಲಸ ಮುಗಿಸಿ, ರಿಕ್ಷಾದಲ್ಲಿ ಹೋಗುತ್ತಿರುವಾಗ ಉಕ್ಕುಡ ಎಂಬಲ್ಲಿ ಪ್ರವೀಣ್‌ ಗೌಡ ಹಾಗೂ ಇತರ ಇಬ್ಬರೂ ಆಟೋವನ್ನು ಅಡ್ಡಗಟ್ಟಿ ಈಶ್ವರರವರಿಗೆ ಮಾರಕಾಯುಧ ತೋರಿಸಿ, ಕೈಯಿಂದ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ರೂ 1450/- ನ್ನು ದರೋಡೆ ಮಾಡಿರುವುದಾಗಿ ನೀಡಿದ ದೂರಿನಂತೆ ಜ.23 ರಂದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಸೆ ಗ್ರಾಮ ಅಂಚೆ ಕಳಸ ತಾಲೂಕು ಚಿಕ್ಕಮಗಳೂರು ನಿವಾಸಿ ಈಶ್ವರ (52) ಎಂಬವರ ದೂರಿನಂತೆ, ಜ.23 ರಂದು ರಾತ್ರಿ ಬೆಳ್ತಂಗಡಿ ತಾಲೂಕು ಗುತ್ಯಡ್ಕ ಎಂಬಲ್ಲಿಗೆ ಆಟೋ ರೀಕ್ಷಾದಲ್ಲಿ ಬಾಡಿಗೆಗೆ ಬಂದು ಕೆಲಸ ಮುಗಿಸಿ, ತನ್ನ ಬಾಬ್ತು ರೀಕ್ಷಾದಲ್ಲಿ ಹೋಗುತ್ತಿರುವಾಗ ಉಕ್ಕುಡ ಎಂಬಲ್ಲಿ ಪ್ರವೀಣ್‌ ಗೌಡ ಹಾಗೂ ಇತರ ಇಬ್ಬರೂ ಆಟೋವನ್ನು ಅಡ್ಡಗಟ್ಟಿ ಮಾರಕಾಯುಧ ತೋರಿಸಿ, ಕೈಯಿಂದ ಹಲ್ಲೆ ನಡೆಸಿದ್ದು, ಜಾತಿ ನಿಂದನೆ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ರೂ 1450/- ನ್ನು ದರೋಡೆ ಮಾಡಿರುತ್ತಾರೆ ಹಾಗೂ ಪಿರ್ಯಾದಿರವರ ಬಳಿಯಿದ್ದ ಅಡುಗೆ ಸಾಮಾನುಗಳನ್ನು ಕದ್ದುಕೊಂಡು ಹೋಗಿರುತ್ತಾರೆ ಎಂಬುದಾಗಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣಾ ಅಕ್ರ ನಂ 08/2024 ಕಲಂ: 341,323,504,392, 379,, ಐಪಿಸಿ ಕಲಂ: 3(1)(S) ,3(2)(va) SC/ST ACT 2015 ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ನಡ ಸರಕಾರಿ ಪ್ರೌಢಶಾಲೆಗೆ ಶೇ. 97.82 ಫಲಿತಾಂಶ

Suddi Udaya

ಮೈರೋಳ್ತಡ್ಕ: ಗುಂಡಿ ಬಿದ್ದ ರಸ್ತೆಗೆ ಪಂಚಾಯತ್ ವತಿಯಿಂದ ಸುಗಮ ಸಂಚಾರಕ್ಕೆ ವ್ಯವಸ್ಥೆ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮ ಕುಂಭಾಭಿಷೇಕ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಭೇಟಿ

Suddi Udaya

ಧರ್ಮಸ್ಥಳ ಪಾದಯಾತ್ರಿಗಳ ಸೇವೆಗಾಗಿ ಉಚಿತ ವೈದ್ಯಕೀಯ ಶಿಬಿರಗಳ ಉದ್ಘಾಟನೆ

Suddi Udaya

ಮಾನಸಿಕ ಹಾಗೂ ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಭೇಟಿ ಮಾಡಿದ ದ.ಕ.ಜಿಲ್ಲೆಯ ಕಾಂಗ್ರೆಸ್ ಮುಸ್ಲಿಮ್ ಮುಖಂಡರ ನಿಯೋಗ

Suddi Udaya
error: Content is protected !!