25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್ ಡಿ ಎಮ್ ಬೆಳ್ತಂಗಡಿ ಶಾಲೆಗೆ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಘಟನಾ ಆಯುಕ್ತರ ಭೇಟಿ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ವೀಕ್ಷಣೆಗಾಗಿ ರಾಜ್ಯ ಸಂಘಟನಾ ಆಯುಕ್ತರಾದ ಶ್ರೀಮತಿ ಸಿ ಮಂಜುಳಾ ರವರು ಭೇಟಿ ನೀಡಿರುವರು.

ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಆಯುಕ್ತರನ್ನು ಶಾಲಾವತಿಯಿಂದ ಸನ್ಮಾನಿಸಲಾಯಿತು. ಶಾಲೆಯಲ್ಲಿ ನಡೆಸಿದ ಚಟುವಟಿಕೆಯನ್ನು ವೀಕ್ಷಿಸಿದ ಸಂಘಟನಾ ಆಯುಕ್ತರು ದಳದ ಸಾಧನೆ ಬಗ್ಗೆ ಪ್ರಸಂಸೆ ವ್ಯಕ್ತಪಡಿಸಿದರು. ಜಿಲ್ಲಾ ಪ್ರಶಸ್ತಿ ,ರಾಜ್ಯ ಪ್ರಶಸ್ತಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸ್ಥಳೀಯ ಸಂಸ್ಥೆಯು ಉತ್ತಮ ಕಾರ್ಯಗಳನ್ನು ನಿರ್ವಹಿಸುತ್ತಿದೆ. ಶ್ರೀ ಮಂಜುನಾಥ ದೇವರ ಅನುಗ್ರಹದಿಂದ ಮಕ್ಕಳು ಉತ್ತಮ ಭವಿಷ್ಯ ರೂಪಿಸುವಂತಾಗಲಿ, ಹಾಗೆಯೇ ಸ್ಕೌಟಿಂಗ್ ಸಮಾಜದಲ್ಲಿ ಉತ್ತಮ ಸಾಧನೆಯನ್ನು ಮಾಡಲಿ ಎಂದು ಶುಭ ಹಾರೈಸಿದರು.


‌ ಕಾರ್ಯಕ್ರಮದಲ್ಲಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಪದ್ಮ ಕುಮಾರ್, ಉಪಸ್ಥಿತರಿದ್ದು ಸ್ವಾಗತಿಸಿದರು. ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ, ಎಸ್ ಡಿ ಎಮ್‌ ಬೆಳ್ತಂಗಡಿ ಸ್ಕೌಟ್ಸ್ ಗೈಡ್ಸ್ ಸಂಯೋಜಕ ಶಿಕ್ಷಕಿ ಪ್ರಮೀಳಾ ಕಾರ್ಯಕ್ರಮ ಸಂಘಟಿಸಿ, ಉಪಸ್ಥಿತರಿದ್ದು, ವಂದಿಸಿದರು.


ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಜೆಸಿಂತಾ ರೋಡ್ರಿಗಸ್, ಸ್ಕೌಟ್ ಮಾಸ್ಟರ್ ಮಂಜುನಾಥ್ ಉಪಸ್ಥಿತರಿದ್ದರು.
ನಿರೂಪಣೆಯಲ್ಲಿ ಗೈಡ್ ವಿದ್ಯಾರ್ಥಿ ಯಶ್ವಿತಾ ಸಹಕರಿಸಿದರು.
‌‌ ನಂತರ ಸಂಘಟನಾ ಆಯುಕ್ತರು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ| ಸತೀಶ್ಚಂದ್ರ ಎಸ್ ರವರನ್ನು ಭೇಟಿ ಮಾಡಿ ಉತ್ತಮ ಕಾರ್ಯಗಳಿಗೆ ಹೆಮ್ಮೆ ವ್ಯಕ್ತಪಡಿಸಿದರು. ಹಾಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಹಾಯಕರಾದ ಬಿ ಸೋಮಶೇಖರ್ ಶೆಟ್ಟಿಯವರನ್ನು ಭೇಟಿ ಮಾಡಿದರು.
ಧರ್ಮಸ್ಥಳ ಕ್ಷೇತ್ರದ ದರ್ಶನದೊಂದಿಗೆ ಡಾ.ಡಿ. ವಿರೇಂದ್ರ ಹೆಗ್ಗಡೆ ಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.

Related posts

ಹಳ್ಳಿಂಗೇರಿ ಹಾ.ಉ. ಮಹಿಳಾ ಸಹಕಾರ ಸಂಘದ ಕಟ್ಟಡ ರಚನಾ ಸಮಿತಿ ರಚನೆ

Suddi Udaya

ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಪೊಲೀಸರು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿ, ಕಾನೂನು ಪ್ರಕಾರ ಯಾವುದೇ ನೋಟೀಸನ್ನು ನೀಡದೆ ಬಂಧನಕ್ಕೆ ಮುಂದಾಗಿರುವುದಕ್ಕೆ ಬೆಳ್ತಂಗಡಿ ವಕೀಲರ ಸಂಘದಿಂದ ತೀವ್ರ ಖಂಡನೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆ ‘ಜ್ಞಾನ ದೀಪ’ ಕಾರ್ಯಕ್ರಮದ ಅಡಿಯಲ್ಲಿ ಬಳಂಜ ಶಾಲೆಗೆ ಡೆಸ್ಕ್ ಮತ್ತು ಬೆಂಚ್ ಹಸ್ತಾಂತರ

Suddi Udaya

ಕೂಟ ಮಹಾ ಜಗತ್ತು ಸಾಲಿಗ್ರಾಮ 70ನೇ ಕೇಂದ್ರೀಯ ಮಹಾಧಿವೇಶನ: ಬೆಳ್ತಂಗಡಿ ಮಹಿಳಾ ವೇದಿಕೆಯ ಸದಸ್ಯೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಸಿಡಿಲು ಬಡಿದು ವ್ಯಕ್ತಿ ಅಸ್ವಸ್ಥ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ಹಾಗೂ ಉಪಾಧ್ಯಕ್ಷರಾಗಿ ಶೇಖರ ಪೂಜಾರಿ

Suddi Udaya
error: Content is protected !!