September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ “ಶ್ರೀ ಲಲಿತಾ ಸಹಸ್ರನಾಮ ಯಾಗ: ಧಾರ್ಮಿಕ ಸಭೆ, ಸನ್ಮಾನ

ಕೊಕ್ಕಡ: ಯುವ ಕೇಸರಿ, ಕಾವು ಇವರ ಆಶ್ರಯದೊಂದಿಗೆ ಮೋದಿ ಮತ್ತೊಮ್ಮೆ ಎಂಬ ಮಹಾ ಸಂಕಲ್ಪದೊಂದಿಗೆ, ವೇ.ಮೂ. ಕಶೆಕೋಡಿ ಸೂರ್ಯನಾರಾಯಣ ಭಟ್ ಇವರ ಪೌರೋಹಿತ್ಯದಲ್ಲಿ “ಶ್ರೀ ಲಲಿತಾ ಸಹಸ್ರನಾಮ ಯಾಗ”ವು ಜ.25 ರಂದು ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನಡೆಯಿತು.


ಬೆಳಿಗ್ಗೆ ಯಾಗ ಪ್ರಾರಂಭಗೊಂಡು, ಯಾಗ ಪೂರ್ಣಾಹುತಿ ನಂತರ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.

ಶ್ರೀ ಕ್ಷೇತ್ರ ಸೌತಡ್ಕ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ ಅಧ್ಯಕ್ಷತೆ ವಹಿಸಿದರು.


ದಿಕ್ಸೂಚಿ ಭಾಷಣವನ್ನು ಬಾಲವಾಗ್ಮಿ ಕು| ಹಾರಿಕಾ ಮಂಜುನಾಥ್ ರವರು ನೆರವೇರಿಸಿದರು. ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ಆಡಳಿತ ಟ್ರಸ್ಟ್‌ನ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಈ ಸಂದರ್ಭದಲ್ಲಿ ನಿವೃತ್ತ ಯೋಧರಾದ ಕೆ. ಮಹಾಬಲ ಮತ್ತು ಜಿ. ದೇವಪ್ಪ ಗೌಡ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ನಂತರ ಅನ್ನಸಂತರ್ಪಣೆ ನಡೆಯಿತು.

ಕು. ಧಾತ್ರಿ ಗೋಖಲೆ ಪ್ರಾರ್ಥಿಸಿ, ಅರ್ಚಕ ಮಂಜುನಾಥ್ ಭಟ್ ಸ್ವಾಗತಿಸಿದರು. ವೃಶಾಂಕ್ ಖಾಡಿಲ್ಕರ್ ಅರಸಿನಮಕ್ಕಿ ಕಾರ್ಯಕ್ರಮ ನಿರೂಪಿಸಿ, ಡಾ| ಗಣೇಶ್ ಪ್ರಸಾದ್ ಕೊಕ್ಕಡ ಧನ್ಯವಾದವಿತ್ತರು. ಕಾರ್ಯಕ್ರಮದ ಯಶಸ್ವಿಗೆ ಯುವ ಕೇಸರಿ ಬಳಗ ಸಹಕರಿಸಿದರು.

Related posts

ಬಿ.ಸಿ. ರೋಡ್‌-ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್ದಾರಿ 73 ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ರೂ.64 ಕೋಟಿ ಮಂಜೂರು: ಸಂಸದ ಕ್ಯಾ. ಚೌಟ

Suddi Udaya

ಮೂಡುಕೋಡಿ: ನಡ್ತಿಕಲ್ಲು ಶ್ರೀ ರಾಮ ಮಹಿಳಾ ಸಮಿತಿಯಿಂದ ವರಮಹಾಲಕ್ಷ್ಮೀ ಪೂಜೆ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಮನ್ ಶರ್ ಪ್ರಾಥಮಿಕ ಶಾಲಾ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಹೇವಾಜೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ಯ ದಿನಾಚರಣೆ: ನಿವೃತ್ತ ಅಡುಗೆ ಸಿಬ್ಬಂದಿ ಸರೋಜಾ ನಾಯ್ಕರಿಗೆ ಸನ್ಮಾನ ಧನ ಸಹಾಯ ಹಸ್ತಾಂತರ

Suddi Udaya

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಓಣಂ ಆಚರಣೆ

Suddi Udaya

“ತೂಗುಸೇತುವೆಗಳ ಸರದಾರ” ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ ನಿಧನ

Suddi Udaya
error: Content is protected !!