ಜ. 29-31: ಬೆಳ್ತಂಗಡಿ ಸ್ಪಂದನ ಪಾಲಿಕ್ಲಿನಿಕ್ ಮತ್ತು ಲ್ಯಾಬೋರೇಟರಿ ಹಾಗೂ ಸ್ಪಂದನ ಕ್ಲಿನಿಕ್‌ನಲ್ಲಿ ಉಚಿತ ಹಾಗೂ ವಿಶೇಷ ರಿಯಾಯಿತಿ

Suddi Udaya

ಬೆಳ್ತಂಗಡಿ: ಬಸ್ ಸ್ಟ್ಯಾಂಡ್ ಹತ್ತಿರದಲ್ಲಿರುವ ಸಾಂತೋಮ್ ಟವರ್ಸ್ ನಲ್ಲಿರುವ ಸ್ಪಂದನ ಪಾಲಿಕ್ಲಿನಿಕ್ ಮತ್ತು ಲ್ಯಾಬೋರೇಟರಿ ಹಾಗೂ ಸ್ಪಂದನ ಕ್ಲಿನಿಕ್‌ನಲ್ಲಿ ಜ.29, 30, 31ರವರೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ.

ವಿಶೇಷ ರಿಯಾಯಿತಿ ದರದಲ್ಲಿ ಎಲ್ಲಾ ರೀತಿಯ ರಕ್ತ ಪರೀಕ್ಷೆಗಳು ಕೇವಲ 1000 ರೂಪಾಯಿಗೆ. CBC,RET,LFT, Lipid, calclum, GFR,iron profile, Thyroid, freeT3’T4, Electrolytes, HBA1c, ECG ಪರೀಕ್ಷೆ ಮಾಡಿ ಕೊಡಲಾಗುವುದು.

ಜ.29 ರಂದು ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಮಂಗಳೂರು, ಸುಳ್ಯ&ಪುತ್ತೂರು ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ, ಮಂಗಳೂರು, ಡಾ| ಪಿ. ದಯಾನಂದ ಪೈ ಮತ್ತು ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ ಸೆಂಚುರಿ ಗ್ರೂಪ್ಸ್ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ವೈದ್ಯಕೀಯ ಶಿಬಿರ ನಡೆಯಲಿದೆ.

ಜ.31ರಂದು ಹೃದ್ರೋಗ ತಜ್ಞ ಡಾ| ಪ್ರದೀಪ್ ಪೆರೇರಾರವರು ಹೃದಯ ಸಮಾಲೋಚನೆ ನಡೆಸಲಿದ್ದಾರೆ.
ಮಧುಮೇಹ ಸಲಹೆಗಾರರಾದ ಡಾ| ಅನನ್ಯ ಲಕ್ಷ್ಮಿ ಸಂದೀಪ್ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಸಲಿದ್ದಾರೆ ಎಂದು ಸ್ಪಂದನ ಪಾಲಿಕ್ಲಿನಿಕ್ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment

error: Content is protected !!