25.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿ

ಮದಡ್ಕದಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ ಶೆಡ್:ಬೆಳ್ತಂಗಡಿ ತಹಶೀಲ್ದಾ‌ರ್ ಪೃಥ್ವಿ ಸಾನಿಕಂ ನೇತೃತ್ವದ ತಂಡದಿಂದ ನೆಲಸಮ

ಬೆಳ್ತಂಗಡಿ : ಮದಡ್ಕದಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ ಶೆಡ್ ನ್ನು ಜೆಸಿಬಿ ಮೂಲಕ ಬೆಳ್ತಂಗಡಿ ತಹಶೀಲ್ದಾ‌ರ್ ಪೃಥ್ವಿ ಸಾನಿಕಂ ನೇತೃತ್ವದ ತಂಡ ನೆಲಸಮಗೊಳಿಸಿದ್ದಾರೆ.

ಪ್ರಕರಣದ ವಿವರ:ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದಡ್ಕ ಹಾಲಿನ ಡೈರಿ ಹಿಂಭಾಗದ ಸರ್ವೆ ನಂಬರ್ 149/3A ನಲ್ಲಿ 11 ಸೆನ್ಸ್ ಖಾಲಿ ಜಾಗದಲ್ಲಿ ಅಬುಸಾಲಿ ಮಕ್ಕಳಾದ ರೌಫ್ ಮತ್ತು ನಿಸರ್ ಸಹೋದರರು ಅಕ್ರಮವಾಗಿ ಶೆಡ್ ನಿರ್ಮಾಣ ಮಾಡಿದ್ದರು. ಈ ಬಗ್ಗೆ ಬೆಳ್ತಂಗಡಿ ಕಂದಾಯ ಇಲಾಖೆಗೆ ದೂರು ಬಂದಿತ್ತು. ಅದರಂತೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಮತ್ತು ಕಂದಾಯ ಇಲಾಖೆಯ ಸಿಬ್ಬಂದಿ ಜ.18 ಕ್ಕೆ ಜಾಗದ

ಪರಿಶೀಲನೆಗೆ ತೆರಳಿದ್ದರು. ಈ ವೇಳೆ ರೌಫ್ ಮತ್ತು ನಿಸರ್ ತಹಶೀಲ್ದಾ‌ರ್ ಮೇಲೆ ಹಲ್ಲೆಗೆ ಯತ್ನಿಸಿದ್ದರು.ಬಳಿಕ ಕಂದಾಯ ನಿರೀಕ್ಷಕರಿಗೂ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದರು. ಈ ಬಗ್ಗೆ ತಹಶೀಲ್ದಾ‌ರ್ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಜ.19 ರಂದು ದೂರು ದಾಖಲಿಸಿದ್ದರು.

ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ನೇತೃತ್ವದ ಕಂದಾಯ ಇಲಾಖೆಯ ಸಿಬ್ಬಂದಿ ಜ.25 ರಂದು ಸಂಜೆ (ಇಂದು) ಜೆಸಿಬಿ ಬಳಸಿ ಅಕ್ರಮ ಶೆಡ್ ನೆಲಸಮ ಮಾಡಲಾಯಿತು. ಈ ವೇಳೆ ಅಹಿತಕರ ಘಟನೆ ನಡೆಯದಂತೆ ಬೆಳ್ತಂಗಡಿ ಪೊಲೀಸರು ಭದ್ರತೆ ವಹಿಸಿದ್ದರು.

Related posts

ನವೀಕೃತ ಯೂನಿಯನ್ ಬ್ಯಾಂಕ್ ಉಜಿರೆ ಶಾಖೆಯ ಉದ್ಘಾಟನೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಉಜ್ಜಲ ಉದ್ಯಮಿ ಪ್ರಶಸ್ತಿ

Suddi Udaya

ಆ.24: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ಮೂರು ಜನ ವಿಶೇಷ ಚೇತನರನ್ನು ಒಳಗೊಂಡ ಬಡ ಕುಟುಂಬಕ್ಕೆ ಧರ್ಮಸ್ಥಳ ಗ್ರಾಮ ಪಂಚಾಯತ್ ನಿಂದ ನೆರವು

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ಳಿ ಪದಕ ಗೆದ್ದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಸದಸ್ಯರು, ಆಡಳಿತ ಮಂಡಳಿ, ಸಿಬ್ಬಂದಿ ವರ್ಗದವರ ಮಾನವೀಯ ಸ್ಪಂದನೆ: ಪುದುವೆಟ್ಟುವಿನಲ್ಲಿ ಬಡ ಕುಟುಂಬಕ್ಕೆ ನೂತನ ಮನೆಯ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!