September 6, 2026
ತಾಲೂಕು ಸುದ್ದಿ

ಮದಡ್ಕದಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ ಶೆಡ್:ಬೆಳ್ತಂಗಡಿ ತಹಶೀಲ್ದಾ‌ರ್ ಪೃಥ್ವಿ ಸಾನಿಕಂ ನೇತೃತ್ವದ ತಂಡದಿಂದ ನೆಲಸಮ

ಬೆಳ್ತಂಗಡಿ : ಮದಡ್ಕದಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ ಶೆಡ್ ನ್ನು ಜೆಸಿಬಿ ಮೂಲಕ ಬೆಳ್ತಂಗಡಿ ತಹಶೀಲ್ದಾ‌ರ್ ಪೃಥ್ವಿ ಸಾನಿಕಂ ನೇತೃತ್ವದ ತಂಡ ನೆಲಸಮಗೊಳಿಸಿದ್ದಾರೆ.

ಪ್ರಕರಣದ ವಿವರ:ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದಡ್ಕ ಹಾಲಿನ ಡೈರಿ ಹಿಂಭಾಗದ ಸರ್ವೆ ನಂಬರ್ 149/3A ನಲ್ಲಿ 11 ಸೆನ್ಸ್ ಖಾಲಿ ಜಾಗದಲ್ಲಿ ಅಬುಸಾಲಿ ಮಕ್ಕಳಾದ ರೌಫ್ ಮತ್ತು ನಿಸರ್ ಸಹೋದರರು ಅಕ್ರಮವಾಗಿ ಶೆಡ್ ನಿರ್ಮಾಣ ಮಾಡಿದ್ದರು. ಈ ಬಗ್ಗೆ ಬೆಳ್ತಂಗಡಿ ಕಂದಾಯ ಇಲಾಖೆಗೆ ದೂರು ಬಂದಿತ್ತು. ಅದರಂತೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಮತ್ತು ಕಂದಾಯ ಇಲಾಖೆಯ ಸಿಬ್ಬಂದಿ ಜ.18 ಕ್ಕೆ ಜಾಗದ

ಪರಿಶೀಲನೆಗೆ ತೆರಳಿದ್ದರು. ಈ ವೇಳೆ ರೌಫ್ ಮತ್ತು ನಿಸರ್ ತಹಶೀಲ್ದಾ‌ರ್ ಮೇಲೆ ಹಲ್ಲೆಗೆ ಯತ್ನಿಸಿದ್ದರು.ಬಳಿಕ ಕಂದಾಯ ನಿರೀಕ್ಷಕರಿಗೂ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದರು. ಈ ಬಗ್ಗೆ ತಹಶೀಲ್ದಾ‌ರ್ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಜ.19 ರಂದು ದೂರು ದಾಖಲಿಸಿದ್ದರು.

ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ನೇತೃತ್ವದ ಕಂದಾಯ ಇಲಾಖೆಯ ಸಿಬ್ಬಂದಿ ಜ.25 ರಂದು ಸಂಜೆ (ಇಂದು) ಜೆಸಿಬಿ ಬಳಸಿ ಅಕ್ರಮ ಶೆಡ್ ನೆಲಸಮ ಮಾಡಲಾಯಿತು. ಈ ವೇಳೆ ಅಹಿತಕರ ಘಟನೆ ನಡೆಯದಂತೆ ಬೆಳ್ತಂಗಡಿ ಪೊಲೀಸರು ಭದ್ರತೆ ವಹಿಸಿದ್ದರು.

Related posts

ನಾಳೆ(ನ.22): ಉಜಿರೆ-ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ ಶಿಲಾನ್ಯಾಸ: ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

Suddi Udaya

ಮಂಜೊಟ್ಟಿ : ಜಾಮಿಯಾ ಮಸ್ಜಿದ್ ಜಮಲಾಬಾದ್ ಇದರ ಅಧ್ಯಕ್ಷರಾಗಿ ಹಾಜಿ ಸಯ್ಯದ್ ಹಬೀಬ್ ಸಾಹೇಬ್, ಕಾರ್ಯದರ್ಶಿಯಾಗಿ ಅಬ್ದುಲ್ ಗಫೂರ್ ಆಯ್ಕೆ

Suddi Udaya

ಜಿಲ್ಲಾ ಸಾಹಿತ್ಯ ಸಮ್ಮೇಳನ: ಮಧೂರು ವಿಷ್ಣುಪ್ರಸಾದ ಕಲ್ಲೂರಾಯ ಮತ್ತು ಮಧೂರು ಮೋಹನ ಕಲ್ಲೂರಾಯರಿಂದ ಗಮಕ ವಾಚನ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ವೈಭವ ಪೂರ್ಣವಾಗಿ ನಡೆದ ಕಾಲಾವಧಿ ನೇಮೋತ್ಸವ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದ ಕ್ಯೂ ಕಾಂಪ್ಲೆಕ್ಸ್ ಶ್ರೀ ಸಾನಿಧ್ಯದ ಸೇವೆಗೆ ವರ್ಷದ ಸಂಭ್ರಮ

Suddi Udaya

ಬಳಂಜ: ಬಿಲ್ಲವ ಸಂಘದಲ್ಲಿ ಮರಿಯಾಲಡೊಂಜಿ ಐತಾರ ವಿಶೇಷ ಕಾರ್ಯಕ್ರಮ: ಆಟಿಯ ವಿವಿಧ ತಿಂಡಿ ತಿನಸುಗಳ ಪ್ರದರ್ಶನ,ವಿವಿಧ ಮನೋರಂಜನಾ ಕಾರ್ಯಕ್ರಮ

Suddi Udaya
error: Content is protected !!