April 8, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಲವಂತಿಗೆ: ಉಮೇಶ್ ರವರಿಗೆ ಹಲ್ಲೆ, ಬೆದರಿಕೆ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಮಲವಂತಿಗೆ ನಿವಾಸಿ ಉಮೇಶ್‌ ರವರು ರಾತ್ರಿ ಮೋಟಾರ್ ಸೈಕಲ್ ನಲ್ಲಿ ಮನೆಗೆ ಹೋಗುವ ಸಂದರ್ಭ ಉಕ್ಕುಡ ಎಂಬಲ್ಲಿ ಗುಂಪೊಂದು ಹಲ್ಲೆ ನಡೆಸಿ, ಬೆದರಿಕೆ ಹಾಕಿದ ಘಟನೆ ಜ.23 ರಂದು ನಡೆದಿದೆ.

ಮಲವಂತಿಗೆ ನಿವಾಸಿ ಉಮೇಶ್‌ (35) ಎಂಬವರ ದೂರಿನಂತೆ, ಜ. 23 ರಂದು ರಾತ್ರಿ ಉಮೇಶ್ ರವರು ಬಾಬ್ತು ಮೋಟಾರ್‌ ಸೈಕಲ್‌ ನಲ್ಲಿ ಮನೆಗೆ ಹೋಗುತ್ತಾ ಉಕ್ಕುಡ ಎಂಬಲ್ಲಿಗೆ ತಲುಪಿದಾಗ, ಆರೋಪಿಗಳಾದ ರಮೇಶ್‌ ನಾಯ್ಕ, ದಯಾನಂದ, ರವಿ,ಸುರೇಶ, ಸಂತೋಷ್‌, ಪ್ರವೀಣ್‌ ಕುಮಾರ್‌ , ಅರುಣ್‌ , ಆದಿ ಜೈನ್‌, ಅನಿಲ್‌ ಜೈನ್‌, ಸಾವಂತ್‌ ,ಸುನೀಲ್‌,ಪ್ರಕಾಶ್‌ ಕುಮಾರ್‌, ಮತ್ತು ಯೂಸುಫ್‌ ರವರು ಉಮೇಶ್ ರವರನ್ನು ತಡೆದು ನಿಲ್ಲಿಸಿ, ಆರೋಪಿಗಳ ಪೈಕಿ ರಮೇಶ್‌ ನಾಯ್ಕ ರವರ ಮನೆಯ ಅಂಗಳಕ್ಕೆ ಎಳೆದುಕೊಂಡು ಹೋಗಿದ್ದು, ಅವಾಚ್ಯ ಶಬ್ದಗಳಿಂದ ಬೈದು ಅವಮಾನ ಪಡಿಸಿರುತ್ತಾರೆ.

ಆರೋಪಿಗಳ ಪೈಕಿ ರಮೇಶ್‌ ನಾಯ್ಕ , ದಯಾನಂದ, ರವಿ ಮತ್ತು ಸುರೇಶ್‌ ರವರು ಪಿರ್ಯಾದಿದಾರರಿಗೆ ಹಲ್ಲೆ ನಡೆಸಿ, ಮೆಣಸಿನ ಹುಡಿ ಎರಚಿದ್ದು, ಬಳಿಕ‌ ಆರೋಪಿಗಳು ಜೀವ ಬೆದರಿಕೆ ಹಾಕಿ ಹೊರಟು ಹೋಗಿರುತ್ತಾರೆ ಎಂಬುದಾಗಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ. ನಂ: 06/2024 ಕಲಂ: 143,147,148,341,324,504,506, ಜೊತೆಗೆ 149 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬೆಳ್ತಂಗಡಿ : ಸರಕಾರಿ ನಿವೃತ್ತ ನೌಕರರ ಮತ್ತು ಹಿರಿಯ ನಾಗರಿಕರ ಸೇವಾ ಸಂಸ್ಥೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ತೀರಾ ಹದಗೆಟ್ಟ ಇಂದಬೆಟ್ಟು ಶ್ರೀ ಅರ್ಧನಾರೀಶ್ವರಿ ದೇವಸ್ಥಾನಕ್ಕೆ ಹೋಗುವ ರಸ್ತೆ: ಗ್ರಾ.ಪಂ. ಮಾಜಿಸದಸ್ಯ, ಸಾಮಾಜಿಕ ಹೋರಾಟಗಾರ ವೆಂಕಪ್ಪ ಕೊಟ್ಯಾನ್ ರಿಂದ ವಿಶಿಷ್ಟವಾಗಿ ಹೋರಾಟ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

Suddi Udaya

ಗುರುವಾಯನಕೆರೆ ಕೆರೆ ಬಳಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಲಾರಿ: ತಪ್ಪಿದ ಅನಾಹುತ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಮಕ್ಕಳ ಹಕ್ಕುಗಳ ಸಪ್ತಾಹ

Suddi Udaya

ಮರೋಡಿ ದೇವಸ್ಥಾನದಲ್ಲಿ ಶ್ರೀ ರಾಮತಾರಕ ಮಂತ್ರ ಹೋಮ

Suddi Udaya

ಬಳಂಜ ಕರ್ಮಂದೊಟ್ಟು ಪರಿಸರದಲ್ಲಿ ಧರೆ ಕುಸಿತ: ಅಪಾಯದಲ್ಲಿ ಕೆಲವು ಮನೆಗಳು, ಬಳಂಜ ಗ್ರಾ.ಪಂ. ನಲ್ಲಿ ತಾತ್ಕಾಲಿಕ ವ್ಯವಸ್ಥೆ, 4 ಕುಟುಂಬಗಳು, 16 ಜನ ಸ್ಥಳಾಂತರ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ