23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಲವಂತಿಗೆ: ಉಮೇಶ್ ರವರಿಗೆ ಹಲ್ಲೆ, ಬೆದರಿಕೆ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಮಲವಂತಿಗೆ ನಿವಾಸಿ ಉಮೇಶ್‌ ರವರು ರಾತ್ರಿ ಮೋಟಾರ್ ಸೈಕಲ್ ನಲ್ಲಿ ಮನೆಗೆ ಹೋಗುವ ಸಂದರ್ಭ ಉಕ್ಕುಡ ಎಂಬಲ್ಲಿ ಗುಂಪೊಂದು ಹಲ್ಲೆ ನಡೆಸಿ, ಬೆದರಿಕೆ ಹಾಕಿದ ಘಟನೆ ಜ.23 ರಂದು ನಡೆದಿದೆ.

ಮಲವಂತಿಗೆ ನಿವಾಸಿ ಉಮೇಶ್‌ (35) ಎಂಬವರ ದೂರಿನಂತೆ, ಜ. 23 ರಂದು ರಾತ್ರಿ ಉಮೇಶ್ ರವರು ಬಾಬ್ತು ಮೋಟಾರ್‌ ಸೈಕಲ್‌ ನಲ್ಲಿ ಮನೆಗೆ ಹೋಗುತ್ತಾ ಉಕ್ಕುಡ ಎಂಬಲ್ಲಿಗೆ ತಲುಪಿದಾಗ, ಆರೋಪಿಗಳಾದ ರಮೇಶ್‌ ನಾಯ್ಕ, ದಯಾನಂದ, ರವಿ,ಸುರೇಶ, ಸಂತೋಷ್‌, ಪ್ರವೀಣ್‌ ಕುಮಾರ್‌ , ಅರುಣ್‌ , ಆದಿ ಜೈನ್‌, ಅನಿಲ್‌ ಜೈನ್‌, ಸಾವಂತ್‌ ,ಸುನೀಲ್‌,ಪ್ರಕಾಶ್‌ ಕುಮಾರ್‌, ಮತ್ತು ಯೂಸುಫ್‌ ರವರು ಉಮೇಶ್ ರವರನ್ನು ತಡೆದು ನಿಲ್ಲಿಸಿ, ಆರೋಪಿಗಳ ಪೈಕಿ ರಮೇಶ್‌ ನಾಯ್ಕ ರವರ ಮನೆಯ ಅಂಗಳಕ್ಕೆ ಎಳೆದುಕೊಂಡು ಹೋಗಿದ್ದು, ಅವಾಚ್ಯ ಶಬ್ದಗಳಿಂದ ಬೈದು ಅವಮಾನ ಪಡಿಸಿರುತ್ತಾರೆ.

ಆರೋಪಿಗಳ ಪೈಕಿ ರಮೇಶ್‌ ನಾಯ್ಕ , ದಯಾನಂದ, ರವಿ ಮತ್ತು ಸುರೇಶ್‌ ರವರು ಪಿರ್ಯಾದಿದಾರರಿಗೆ ಹಲ್ಲೆ ನಡೆಸಿ, ಮೆಣಸಿನ ಹುಡಿ ಎರಚಿದ್ದು, ಬಳಿಕ‌ ಆರೋಪಿಗಳು ಜೀವ ಬೆದರಿಕೆ ಹಾಕಿ ಹೊರಟು ಹೋಗಿರುತ್ತಾರೆ ಎಂಬುದಾಗಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ. ನಂ: 06/2024 ಕಲಂ: 143,147,148,341,324,504,506, ಜೊತೆಗೆ 149 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಕೊಕ್ಕಡ ಸಂಗಮ್ ಯುವಕ ಮಂಡಲದ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ತಾ.ಪಂ.  ಸಹಾಯಕ ಲೆಕ್ಕಾಧಿಕಾರಿ ಗಣೇಶ್ ಪೂಜಾರಿ ಸೇವಾ ನಿವೃತ್ತಿ – ಬೀಳ್ಕೊಡುಗೆ ಸಮಾರಂಭ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹ ಹೂತು ಹಾಕಿದ ದೂರು ಪ್ರಕರಣ: ವಿಶೇಷ ತನಿಖಾ ಸಂಸ್ಥೆಗೆ ಪ್ರಕರಣ ವರ್ಗಾವಣೆ

Suddi Udaya

ನಾಳ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಆರಂಬೊಡಿ: ಮಿಲಾದ್ ಕಾರ್ಯಕ್ರಮ ಪ್ರಯುಕ್ತ ಮೌಲೂದ್ ಪಾರಾಯಣ ನವೀಕೃತ ನೂತನ ಮದರಸ ಕಟ್ಟಡ ಉದ್ಘಾಟನೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಕುಮಾರವ್ಯಾಸ ನಮನ, ಮುದ್ದಣ ಸ್ಮರಣೆ

Suddi Udaya
error: Content is protected !!