September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಲವಂತಿಗೆ: ಉಮೇಶ್ ರವರಿಗೆ ಹಲ್ಲೆ, ಬೆದರಿಕೆ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಮಲವಂತಿಗೆ ನಿವಾಸಿ ಉಮೇಶ್‌ ರವರು ರಾತ್ರಿ ಮೋಟಾರ್ ಸೈಕಲ್ ನಲ್ಲಿ ಮನೆಗೆ ಹೋಗುವ ಸಂದರ್ಭ ಉಕ್ಕುಡ ಎಂಬಲ್ಲಿ ಗುಂಪೊಂದು ಹಲ್ಲೆ ನಡೆಸಿ, ಬೆದರಿಕೆ ಹಾಕಿದ ಘಟನೆ ಜ.23 ರಂದು ನಡೆದಿದೆ.

ಮಲವಂತಿಗೆ ನಿವಾಸಿ ಉಮೇಶ್‌ (35) ಎಂಬವರ ದೂರಿನಂತೆ, ಜ. 23 ರಂದು ರಾತ್ರಿ ಉಮೇಶ್ ರವರು ಬಾಬ್ತು ಮೋಟಾರ್‌ ಸೈಕಲ್‌ ನಲ್ಲಿ ಮನೆಗೆ ಹೋಗುತ್ತಾ ಉಕ್ಕುಡ ಎಂಬಲ್ಲಿಗೆ ತಲುಪಿದಾಗ, ಆರೋಪಿಗಳಾದ ರಮೇಶ್‌ ನಾಯ್ಕ, ದಯಾನಂದ, ರವಿ,ಸುರೇಶ, ಸಂತೋಷ್‌, ಪ್ರವೀಣ್‌ ಕುಮಾರ್‌ , ಅರುಣ್‌ , ಆದಿ ಜೈನ್‌, ಅನಿಲ್‌ ಜೈನ್‌, ಸಾವಂತ್‌ ,ಸುನೀಲ್‌,ಪ್ರಕಾಶ್‌ ಕುಮಾರ್‌, ಮತ್ತು ಯೂಸುಫ್‌ ರವರು ಉಮೇಶ್ ರವರನ್ನು ತಡೆದು ನಿಲ್ಲಿಸಿ, ಆರೋಪಿಗಳ ಪೈಕಿ ರಮೇಶ್‌ ನಾಯ್ಕ ರವರ ಮನೆಯ ಅಂಗಳಕ್ಕೆ ಎಳೆದುಕೊಂಡು ಹೋಗಿದ್ದು, ಅವಾಚ್ಯ ಶಬ್ದಗಳಿಂದ ಬೈದು ಅವಮಾನ ಪಡಿಸಿರುತ್ತಾರೆ.

ಆರೋಪಿಗಳ ಪೈಕಿ ರಮೇಶ್‌ ನಾಯ್ಕ , ದಯಾನಂದ, ರವಿ ಮತ್ತು ಸುರೇಶ್‌ ರವರು ಪಿರ್ಯಾದಿದಾರರಿಗೆ ಹಲ್ಲೆ ನಡೆಸಿ, ಮೆಣಸಿನ ಹುಡಿ ಎರಚಿದ್ದು, ಬಳಿಕ‌ ಆರೋಪಿಗಳು ಜೀವ ಬೆದರಿಕೆ ಹಾಕಿ ಹೊರಟು ಹೋಗಿರುತ್ತಾರೆ ಎಂಬುದಾಗಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ. ನಂ: 06/2024 ಕಲಂ: 143,147,148,341,324,504,506, ಜೊತೆಗೆ 149 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಜಿಲ್ಲಾಮಟ್ಟದ ಕರಾಟೆ ಪಂದ್ಯಾಟ: ಬೆಳ್ತಂಗಡಿ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಜೂ.4: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಮುಳಿಯಾ’ಸ್ ಟೈಮ್ ಝೋನ್’ ವಾಚ್ ಶೋರೂಂ ಶುಭಾರಂಭ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕವಿ ಸಮ್ಮಿಲನ

Suddi Udaya

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಕೊಕ್ಕಡ ಎಂಡೊಸಲ್ಪಾನ್ ಕೇಂದ್ರದಲ್ಲಿ ಇಂದಿರಾ ಗಾಂಧಿ ಜನ್ಮದಿನ ಆಚರಣೆ

Suddi Udaya

ದೇವಿಕಿರಣ್ ಕಲಾನಿಕೇತನ ಸಂಸ್ಥೆಗೆ ಭರತನಾಟ್ಯ ಜೂನಿಯರ್ ಹಾಗೂ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ಡಿಸ್ಕೌಂಟ್, ಸೀರೆಗಳಿಗೆ ಕೇವಲ ರೂ 99

Suddi Udaya
error: Content is protected !!