23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಮಹಿಳೆಯೊಂದಿಗೆ ಅನುಚಿತ ವರ್ತನೆ ಹಾಗೂ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಮಹಿಳೆಯೊಂದಿಗೆ ಅನುಚಿತ ವರ್ತನೆ ಹಾಗೂ ಹಲ್ಲೆ ಆರೋಪ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಜ.23 ರಂದು ಪ್ರಕರಣ ದಾಖಲಾಗಿದೆ.

ಸಂತ್ರಸ್ಥ ಮಹಿಳೆಯ ದೂರಿನಂತೆ, ಜ.23 ರಂದು ರಾತ್ರಿ, ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿರುವ ಮಹಿಳೆಯ ಪತಿ ಮನೆಯಲ್ಲಿದ್ದಾಗ, ಆರೋಪಿ ಉಮೇಶ ಗೌಡರವರು ಮನೆಯೊಳಗಡೆ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದು, ಈ ವೇಳೆ ತಡೆದ ಮಹಿಳೆಯ ಪತಿ, ಉಮೇಶ ಗೌಡ ಈತನ ಕಡೆಯವರಾದ ಹೋಮ್ ಸ್ಟೇ ಮಹೇಶ್, ರತೀಶ, ಅಶೋಕ, ಗಣೇಶ, ರವಿ, ಲೋಕಪ್ಪ ಗೌಡ ಮತ್ತು ಶಾಂತಪ್ಪ ಗೌಡ ಎಂಬವರುಗಳು ಹಲ್ಲೆ ನಡೆಸಿರುತ್ತಾರೆ. ಬಳಿಕ ಅವಾಚ್ಯ ಶಬ್ಧಗಳಿಂದ ಬೈದು, ಅವಮಾನಪಡಿಸಿ, ಕೊಲೆ ಬೆದರಿಕೆ ಹಾಕಿ ಹೊರಟು ಹೋಗಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ,‌ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ 07/2024 ಕಲಂ: 143,147,148,447,354(ಎ),323, 504,506, ಜೊತೆಗೆ 149 ಐಪಿಸಿ ಕಲಂ: 3(2)(v)(a),3(1)(w)(1) SC/ST ACT 2015 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ 8 ನಿರ್ದೇಶಕರ ಸ್ಥಾನಗಳಿಗೂ ಅವಿರೋಧ ಆಯ್ಕೆ

Suddi Udaya

ನಾಳೆ(ಎ.27): ಗುರುವಾಯನಕೆರೆಯಲ್ಲಿ ತಾಲೂಕು ಮಟ್ಟದ ಬಂಟ ಕ್ರೀಡೋತ್ಸವ

Suddi Udaya

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ “ಸರಿಗಮಪ ” ವಿನ್ನರ್ ಚನ್ನಪ್ಪ ಭೇಟಿ

Suddi Udaya

ಕೊಲ್ಲಿ: ಶ್ರೀ ದುರ್ಗಾ ಕಾಂಪ್ಲೆಕ್ಸ್ ಉದ್ಘಾಟನೆ ಹಾಗೂ ಶ್ರೀ ದುರ್ಗಾ ಜನರಲ್ ಸ್ಟೋರ್ ಶುಭಾರಂಭ

Suddi Udaya

ಜಿತೇಶ್‌ನ ಮನೆಗೆ ಭೇಟಿ ನೀಡಿದ ಕಿರಣ್‌ಚಂದ್ರ ಪುಷ್ಪಗಿರಿ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!