July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಮಹಿಳೆಯೊಂದಿಗೆ ಅನುಚಿತ ವರ್ತನೆ ಹಾಗೂ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಮಹಿಳೆಯೊಂದಿಗೆ ಅನುಚಿತ ವರ್ತನೆ ಹಾಗೂ ಹಲ್ಲೆ ಆರೋಪ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಜ.23 ರಂದು ಪ್ರಕರಣ ದಾಖಲಾಗಿದೆ.

ಸಂತ್ರಸ್ಥ ಮಹಿಳೆಯ ದೂರಿನಂತೆ, ಜ.23 ರಂದು ರಾತ್ರಿ, ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿರುವ ಮಹಿಳೆಯ ಪತಿ ಮನೆಯಲ್ಲಿದ್ದಾಗ, ಆರೋಪಿ ಉಮೇಶ ಗೌಡರವರು ಮನೆಯೊಳಗಡೆ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದು, ಈ ವೇಳೆ ತಡೆದ ಮಹಿಳೆಯ ಪತಿ, ಉಮೇಶ ಗೌಡ ಈತನ ಕಡೆಯವರಾದ ಹೋಮ್ ಸ್ಟೇ ಮಹೇಶ್, ರತೀಶ, ಅಶೋಕ, ಗಣೇಶ, ರವಿ, ಲೋಕಪ್ಪ ಗೌಡ ಮತ್ತು ಶಾಂತಪ್ಪ ಗೌಡ ಎಂಬವರುಗಳು ಹಲ್ಲೆ ನಡೆಸಿರುತ್ತಾರೆ. ಬಳಿಕ ಅವಾಚ್ಯ ಶಬ್ಧಗಳಿಂದ ಬೈದು, ಅವಮಾನಪಡಿಸಿ, ಕೊಲೆ ಬೆದರಿಕೆ ಹಾಕಿ ಹೊರಟು ಹೋಗಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ,‌ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ 07/2024 ಕಲಂ: 143,147,148,447,354(ಎ),323, 504,506, ಜೊತೆಗೆ 149 ಐಪಿಸಿ ಕಲಂ: 3(2)(v)(a),3(1)(w)(1) SC/ST ACT 2015 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಲಾಯಿಲ ಗ್ರಾ.ಪಂ. ವತಿಯಿಂದ ಶಾಲಾ ಬಳಿಯ ಅಪಾಯಕಾರಿ ಮರ ತೆರವು

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್‌ನಲ್ಲಿ ತಾಂತ್ರಿಕ ಸಂವಾದ

Suddi Udaya

ವೇಣೂರು ಮಹಾಮಸ್ತಕಾಭಿಷೇಕ: ಡಿ. 17 ರಂದು ಬೃಹತ್ ವೈದ್ಯಕೀಯ ಶಿಬಿರ

Suddi Udaya

ಸೇನೆಗೆ ಆಯ್ಕೆಯಾದ ರಂಜಿತ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ಸನ್ಮಾನ

Suddi Udaya

ಉಜಿರೆ: ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya
error: Content is protected !!