September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸ್ಯಾಮ್ಸಂಗ್ ಕಂಪೆನಿಯ ಹೊಸ ವಿನ್ಯಾಸದ ನವೀನ ಮಾದರಿಯ ಗ್ಯಾಲಕ್ಸಿ S24 ಅಲ್ಟ್ರಾ ಮಾರುಕಟ್ಟೆಗೆ ಬಿಡುಗಡೆ

ಉಜಿರೆ :ಸ್ಯಾಮ್ಸಂಗ್ ಕಂಪೆನಿಯ ಹೊಸ ವಿನ್ಯಾಸದ ನವೀನ ಮಾದರಿಯ ಗ್ಯಾಲಕ್ಸಿ S24 Family ಜ.24ರಂದು ಉಜಿರೆ ಓಶನ್ ಪಾರ್ಲ್ ನಲ್ಲಿ ಮಾರುಕಟ್ಟೆಗೆ ಅನಾವರಣಗೊಳಿಸಲಾಯಿತು.

ದೀಪ ಬೆಳಗುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಮೊಬೈಲ್ ನ ಬಿಡುಗಡೆಗೊಳಿಸಿ ಮಾತನಾಡಿದ ಝೋನಲ್ ಸೇಲ್ಸ್ ಮ್ಯಾನೇಜರ್ ಇಸ್ಮಾಯಿಲ್ ಶರೀಫ್ ರವರು ಮೊಬೈಲ್ ನ ವೈಶಿಷ್ಟ್ಯಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಮೊಬೈಲ್ ನ ಮುಂಗಡ ಕಾಯ್ದಿರಿಸಿದ್ದ ಬೆನಕ ಹಾಸ್ಪಿಟಲ್ ವೈದ್ಯರಾದ ಗೋಪಾಲಕೃಷ್ಣ, ದಿಶಾ ಫುಡ್ ಕಾರ್ನರ್ ನ ಅಕ್ಷಯ್, ಉದ್ಯಮಿ ಜಗದೀಶ್ ಆಚಾರ್ಯ, ದುಬೈನ ಉದ್ಯಮಿ ಅಕ್ಷಯ್, ದಿಶಾ ಬೇಕರಿಯ ದಿನೇಶ್ , ಮೊಬೈಲ್ ಶಾಪ್ ನ ಮಾಲಕರಾದ ರಿಶಾದ್, ಪವರ್ ಆನ್ ಬ್ಯಾಟರಿಯ ಮಾಲಕರಾದ ಶೀತಲ್ ಜೈನ್ ಹಾಗೂ ಲ್ಯಾಡಿಂಗ್ ಡೀಲರ್ ಸಾಹುಲ್ ಹಮೀದ್ ರವರಿಗೆ ಹೊಸ ಮೊಬೈಲನ್ನು ಹಸ್ತಾಂತರಿಸಲಾಯಿತು.

ಕಾರ್ಯಕ್ರಮದಲ್ಲಿ ಏರಿಯಾ ಬಿಸಿನೆಸ್ ಮ್ಯಾನೇಜರ್ ನಾಗೇಂದ್ರ ಪ್ರಭು, ಏರಿಯಾ ಬಿಸಿನೆಸ್ ಸೇಲ್ಸ್ ಆಫೀಸರ್ ವಿಜಯ್ ದಾಸ್, ಅಜಯ್ ಬಿ.ಎಮ್, ತಾಲೂಕಿನ ಅಧಿಕೃತ ವಿತರಕರಾದ ಕಲ್ಲಾರಿ ಕಮ್ಯುನಿಕೇಶನ್ ಮಾಲಕರಾದ ಜಗದೀಶ್ ಆಚಾರ್ಯ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ರಿಟೇಲರುಗಳಾದ ಫಾಲ್ಸ್ ಮೊಬೈಲ್ ಮಾಲಕರಾದ ರಾಘವೇಂದ್ರ, ಹೈಟೆಕ್ ಮೊಬೈಲ್ ಮಾಲಕರಾದ ಶರೀಫ್, ಅಯಾನ್ಶ್ ಎಂಟರ್‌ಪ್ರೈಸಸ್ ನ ಮಾಲಕರಾದ ಅರಿಯಂತ್ ಜೈನ್, ಸ್ಮಾರ್ಟ್ ಮೊಬೈಲ್ ಮಾಲಕರಾದ ಅಕ್ಷತ್ ಉಪಸ್ಥಿತರಿದ್ದು ಅವರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕಲ್ಲಾರಿ ಕಮ್ಯುನಿಕೇಶನ್ ನ ಸಿಬ್ಬಂದಿಗಳು ಉಪಸ್ಥಿತರಿದ್ದರು. ಅತಿಥಿಗಳನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಗಣೇಶ್ ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.

Related posts

ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿಗೆ ದಾಖಲೆಯ ಫಲಿತಾಂಶ ಅತ್ಯಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟ್‌ ಗೆ ಅವಕಾಶ ಕಲ್ಪಿಸಿದ ಎಕ್ಸೆಲ್‌ ಕಾಲೇಜು ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್‌ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್‌

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೌಶಲ್ಯ ವರ್ಧನ ಕಾರ್ಯಾಗಾರ

Suddi Udaya

ಗುರುವಾಯನಕೆರೆ: ಸ್ಕೂಟಿ- ಬೈಕ್ ಮುಖಾಮುಖಿ ಡಿಕ್ಕಿ,ಸವಾರರಿಬ್ಬರಿಗೆ ಗಂಭೀರ ಗಾಯ,ಆಸ್ಪತ್ರೆಗೆ ದಾಖಲು

Suddi Udaya

ಅನಾರೋಗ್ಯದಿಂದ ಕಾಶಿಪಟ್ಣದ ಯುವಕ ದೀಪಕ್ ಸಾಲಿಯಾನ್ ನಿಧನ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಪುರಾಣ ವಾಚನ-ಪ್ರವಚನ: ಸಮಾರೋಪ ಸಮಾರಂಭ

Suddi Udaya

ಬಳಂಜ ಬದಿನಡೆ ಕ್ಷೇತ್ರಕ್ಕೆ ಶ್ರೀ ಸಾಯಿ ಗುರೂಜಿ ಭೇಟಿ

Suddi Udaya
error: Content is protected !!