25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಟೋ ರಿಕ್ಷಾದಲ್ಲಿ ಬಾಡಿಗೆಗೆ ಬಂದ ಚಿಕ್ಕಮಗಳೂರು ನಿವಾಸಿಯ ಮೇಲೆ ಹಲ್ಲೆ , ದರೋಡೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ : ಚಿಕ್ಕಮಗಳೂರು ನಿವಾಸಿ ಈಶ್ವರ ರವರು ಬೆಳ್ತಂಗಡಿಯ ಗುತ್ಯಡ್ಕ ಎಂಬಲ್ಲಿಗೆ ಆಟೋ ರಿಕ್ಷಾದಲ್ಲಿ ಬಾಡಿಗೆಗೆ ಬಂದು ಕೆಲಸ ಮುಗಿಸಿ, ರಿಕ್ಷಾದಲ್ಲಿ ಹೋಗುತ್ತಿರುವಾಗ ಉಕ್ಕುಡ ಎಂಬಲ್ಲಿ ಪ್ರವೀಣ್‌ ಗೌಡ ಹಾಗೂ ಇತರ ಇಬ್ಬರೂ ಆಟೋವನ್ನು ಅಡ್ಡಗಟ್ಟಿ ಈಶ್ವರರವರಿಗೆ ಮಾರಕಾಯುಧ ತೋರಿಸಿ, ಕೈಯಿಂದ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ರೂ 1450/- ನ್ನು ದರೋಡೆ ಮಾಡಿರುವುದಾಗಿ ನೀಡಿದ ದೂರಿನಂತೆ ಜ.23 ರಂದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಸೆ ಗ್ರಾಮ ಅಂಚೆ ಕಳಸ ತಾಲೂಕು ಚಿಕ್ಕಮಗಳೂರು ನಿವಾಸಿ ಈಶ್ವರ (52) ಎಂಬವರ ದೂರಿನಂತೆ, ಜ.23 ರಂದು ರಾತ್ರಿ ಬೆಳ್ತಂಗಡಿ ತಾಲೂಕು ಗುತ್ಯಡ್ಕ ಎಂಬಲ್ಲಿಗೆ ಆಟೋ ರೀಕ್ಷಾದಲ್ಲಿ ಬಾಡಿಗೆಗೆ ಬಂದು ಕೆಲಸ ಮುಗಿಸಿ, ತನ್ನ ಬಾಬ್ತು ರೀಕ್ಷಾದಲ್ಲಿ ಹೋಗುತ್ತಿರುವಾಗ ಉಕ್ಕುಡ ಎಂಬಲ್ಲಿ ಪ್ರವೀಣ್‌ ಗೌಡ ಹಾಗೂ ಇತರ ಇಬ್ಬರೂ ಆಟೋವನ್ನು ಅಡ್ಡಗಟ್ಟಿ ಮಾರಕಾಯುಧ ತೋರಿಸಿ, ಕೈಯಿಂದ ಹಲ್ಲೆ ನಡೆಸಿದ್ದು, ಜಾತಿ ನಿಂದನೆ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ರೂ 1450/- ನ್ನು ದರೋಡೆ ಮಾಡಿರುತ್ತಾರೆ ಹಾಗೂ ಪಿರ್ಯಾದಿರವರ ಬಳಿಯಿದ್ದ ಅಡುಗೆ ಸಾಮಾನುಗಳನ್ನು ಕದ್ದುಕೊಂಡು ಹೋಗಿರುತ್ತಾರೆ ಎಂಬುದಾಗಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣಾ ಅಕ್ರ ನಂ 08/2024 ಕಲಂ: 341,323,504,392, 379,, ಐಪಿಸಿ ಕಲಂ: 3(1)(S) ,3(2)(va) SC/ST ACT 2015 ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬೆಳ್ತಂಗಡಿ: ಎಸ್.ಕೆ ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ| ರಿತೇಶ್ ಕೊಯ್ಯೂರು ವೈದ್ಯಕೀಯ ಸ್ನಾತಕೋತ್ತರ ಪದವಿಗೆ ಪ್ರವೇಶ

Suddi Udaya

ಸಾವ್ಯ: ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ಮರೋಡಿ ಗ್ರಾ.ಪಂ. ಮಾಜಿ ಸದಸ್ಯ ಗಂಗಯ್ಯ ಪೂಜಾರಿ ನಿಧನ

Suddi Udaya

ಜೂ.24: ಜನಸಂಪರ್ಕ ಸಭೆ

Suddi Udaya

ದ.ಕ. ಜಿಲ್ಲೆಯ ಜಲಪ್ರದೇಶಗಳಲ್ಲಿ ಅನಧಿಕೃತ ಪ್ರವೇಶ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ

Suddi Udaya
error: Content is protected !!