July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಟೋ ರಿಕ್ಷಾದಲ್ಲಿ ಬಾಡಿಗೆಗೆ ಬಂದ ಚಿಕ್ಕಮಗಳೂರು ನಿವಾಸಿಯ ಮೇಲೆ ಹಲ್ಲೆ , ದರೋಡೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ : ಚಿಕ್ಕಮಗಳೂರು ನಿವಾಸಿ ಈಶ್ವರ ರವರು ಬೆಳ್ತಂಗಡಿಯ ಗುತ್ಯಡ್ಕ ಎಂಬಲ್ಲಿಗೆ ಆಟೋ ರಿಕ್ಷಾದಲ್ಲಿ ಬಾಡಿಗೆಗೆ ಬಂದು ಕೆಲಸ ಮುಗಿಸಿ, ರಿಕ್ಷಾದಲ್ಲಿ ಹೋಗುತ್ತಿರುವಾಗ ಉಕ್ಕುಡ ಎಂಬಲ್ಲಿ ಪ್ರವೀಣ್‌ ಗೌಡ ಹಾಗೂ ಇತರ ಇಬ್ಬರೂ ಆಟೋವನ್ನು ಅಡ್ಡಗಟ್ಟಿ ಈಶ್ವರರವರಿಗೆ ಮಾರಕಾಯುಧ ತೋರಿಸಿ, ಕೈಯಿಂದ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ರೂ 1450/- ನ್ನು ದರೋಡೆ ಮಾಡಿರುವುದಾಗಿ ನೀಡಿದ ದೂರಿನಂತೆ ಜ.23 ರಂದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಸೆ ಗ್ರಾಮ ಅಂಚೆ ಕಳಸ ತಾಲೂಕು ಚಿಕ್ಕಮಗಳೂರು ನಿವಾಸಿ ಈಶ್ವರ (52) ಎಂಬವರ ದೂರಿನಂತೆ, ಜ.23 ರಂದು ರಾತ್ರಿ ಬೆಳ್ತಂಗಡಿ ತಾಲೂಕು ಗುತ್ಯಡ್ಕ ಎಂಬಲ್ಲಿಗೆ ಆಟೋ ರೀಕ್ಷಾದಲ್ಲಿ ಬಾಡಿಗೆಗೆ ಬಂದು ಕೆಲಸ ಮುಗಿಸಿ, ತನ್ನ ಬಾಬ್ತು ರೀಕ್ಷಾದಲ್ಲಿ ಹೋಗುತ್ತಿರುವಾಗ ಉಕ್ಕುಡ ಎಂಬಲ್ಲಿ ಪ್ರವೀಣ್‌ ಗೌಡ ಹಾಗೂ ಇತರ ಇಬ್ಬರೂ ಆಟೋವನ್ನು ಅಡ್ಡಗಟ್ಟಿ ಮಾರಕಾಯುಧ ತೋರಿಸಿ, ಕೈಯಿಂದ ಹಲ್ಲೆ ನಡೆಸಿದ್ದು, ಜಾತಿ ನಿಂದನೆ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ರೂ 1450/- ನ್ನು ದರೋಡೆ ಮಾಡಿರುತ್ತಾರೆ ಹಾಗೂ ಪಿರ್ಯಾದಿರವರ ಬಳಿಯಿದ್ದ ಅಡುಗೆ ಸಾಮಾನುಗಳನ್ನು ಕದ್ದುಕೊಂಡು ಹೋಗಿರುತ್ತಾರೆ ಎಂಬುದಾಗಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣಾ ಅಕ್ರ ನಂ 08/2024 ಕಲಂ: 341,323,504,392, 379,, ಐಪಿಸಿ ಕಲಂ: 3(1)(S) ,3(2)(va) SC/ST ACT 2015 ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಕಲ್ಮಂಜ : ಸ್ತ್ರೀ ಶಕ್ತಿ ಸರ್ವ ಸದಸ್ಯರ ಸಭೆ

Suddi Udaya

ಕಲ್ಮಂಜ ಬ್ರಹ್ಮಶ್ರೀ ಯುವ ಬಿಲ್ಲವ ವೇದಿಕೆಯ ಮಾಸಿಕ ಸಭೆ

Suddi Udaya

ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ತಲ್ವಾರ್ ದಾಳಿ ಕೊಲೆ ಯತ್ನಕ್ಕೆ ಖಂಡನೆ: ದಲಿತ ದೌರ್ಜನ್ಯ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲು : ಎಸ್ .ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿಠಲ ಕುಲೆ೯ ಆಗ್ರಹ

Suddi Udaya

ಧರ್ಮಸ್ಥಳ: ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಅಡಿಗಾಸ್ ಯಾತ್ರಾದ ಪ್ರವಾಸ ದರ್ಶನದ ಮಾಹಿತಿ ಕೈಪಿಡಿಯ ಅನಾವರಣ

Suddi Udaya

ಕೊಕ್ಕಡ ಅರೆಕಾ ಪ್ಲೇಟ್ ಇಂಡಸ್ಟ್ರಿಸ್ ಮಾಲಕ ಶ್ರೀಕಾಂತ್ ರಿಂದ ಉಪ್ಪಾರಪಳಿಕೆ ಯಿಂದ ಗೋಳಿತೊಟ್ಟು ರಸ್ತೆಯಲ್ಲಿ ಇದ್ದ ಗಿಡಗಂಟಿ ಹಾಗೂ ಪೊದೆಗಳ ದುರಸ್ತಿ ಕಾರ್ಯ

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ : ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ 15 ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!