32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ “ಶ್ರೀ ಲಲಿತಾ ಸಹಸ್ರನಾಮ ಯಾಗ: ಧಾರ್ಮಿಕ ಸಭೆ, ಸನ್ಮಾನ

ಕೊಕ್ಕಡ: ಯುವ ಕೇಸರಿ, ಕಾವು ಇವರ ಆಶ್ರಯದೊಂದಿಗೆ ಮೋದಿ ಮತ್ತೊಮ್ಮೆ ಎಂಬ ಮಹಾ ಸಂಕಲ್ಪದೊಂದಿಗೆ, ವೇ.ಮೂ. ಕಶೆಕೋಡಿ ಸೂರ್ಯನಾರಾಯಣ ಭಟ್ ಇವರ ಪೌರೋಹಿತ್ಯದಲ್ಲಿ “ಶ್ರೀ ಲಲಿತಾ ಸಹಸ್ರನಾಮ ಯಾಗ”ವು ಜ.25 ರಂದು ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನಡೆಯಿತು.


ಬೆಳಿಗ್ಗೆ ಯಾಗ ಪ್ರಾರಂಭಗೊಂಡು, ಯಾಗ ಪೂರ್ಣಾಹುತಿ ನಂತರ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.

ಶ್ರೀ ಕ್ಷೇತ್ರ ಸೌತಡ್ಕ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ ಅಧ್ಯಕ್ಷತೆ ವಹಿಸಿದರು.


ದಿಕ್ಸೂಚಿ ಭಾಷಣವನ್ನು ಬಾಲವಾಗ್ಮಿ ಕು| ಹಾರಿಕಾ ಮಂಜುನಾಥ್ ರವರು ನೆರವೇರಿಸಿದರು. ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ಆಡಳಿತ ಟ್ರಸ್ಟ್‌ನ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಈ ಸಂದರ್ಭದಲ್ಲಿ ನಿವೃತ್ತ ಯೋಧರಾದ ಕೆ. ಮಹಾಬಲ ಮತ್ತು ಜಿ. ದೇವಪ್ಪ ಗೌಡ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ನಂತರ ಅನ್ನಸಂತರ್ಪಣೆ ನಡೆಯಿತು.

ಕು. ಧಾತ್ರಿ ಗೋಖಲೆ ಪ್ರಾರ್ಥಿಸಿ, ಅರ್ಚಕ ಮಂಜುನಾಥ್ ಭಟ್ ಸ್ವಾಗತಿಸಿದರು. ವೃಶಾಂಕ್ ಖಾಡಿಲ್ಕರ್ ಅರಸಿನಮಕ್ಕಿ ಕಾರ್ಯಕ್ರಮ ನಿರೂಪಿಸಿ, ಡಾ| ಗಣೇಶ್ ಪ್ರಸಾದ್ ಕೊಕ್ಕಡ ಧನ್ಯವಾದವಿತ್ತರು. ಕಾರ್ಯಕ್ರಮದ ಯಶಸ್ವಿಗೆ ಯುವ ಕೇಸರಿ ಬಳಗ ಸಹಕರಿಸಿದರು.

Related posts

ಬೆಳ್ತಂಗಡಿ ಪ.ಪಂ. ನಾಲ್ಕನೇ ವಾರ್ಡಿನ ಹಿಂದೂ ರುದ್ರ ಭೂಮಿಗೆ ರೂ 40 ಲಕ್ಷ ವೆಚ್ಚದಲ್ಲಿ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಪಡಂಗಡಿ:ಎಡೆಬಿಡದೆ ಸುರಿಯುತ್ತಿರುವ ಗಾಳಿ ಮಳೆ, ಮನೆಗೆ ಗುಡ್ಡ ಕುಸಿತ, ಹಾನಿ

Suddi Udaya

ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಜೀರ್ಣೋದ್ಧಾರ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

Suddi Udaya

ಕುಂಟಿನಿಯ ಕಾಂಗ್ರೆಸ್ ಬೂತ್ ಸಮಿತಿಯ ಮನವಿಗೆ ಸ್ಪಂದನೆ: ಹಳೆಪೇಟೆಯಿಂದ ಕುತ್ರೋಟ್ಟು ರಸ್ತೆ ದುರಸ್ತಿ ಆರಂಭ

Suddi Udaya

ಗಾಳಿ ಮಳೆಗೆ ಮನೆ ಹಾನಿ: ಚಾರ್ಮಾಡಿ ಮುಡಿಪು ಅರ್ಕನ ಮಸೀದಿಯ ಧರ್ಮಗುರುಸಮೀರ್ ಮುಸ್ಲಿಯರ್,ದಿನೇಶ್ ವಲಸಾರಿ ರವರಿಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನಿಂದ ಆರ್ಥಿಕ ನೆರವು

Suddi Udaya

ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ : ಕೆಪಿಎಸ್ ಪುಂಜಾಲಕಟ್ಟೆ ಪ್ರೌಢಶಾಲೆಗೆ ಹಲವು ಪ್ರಶಸ್ತಿ: ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!